ಶಿರಾಡಿ ಘಾಟಿ ಸತ್ಯದರ್ಶನಕ್ಕೆ ನಿಷೇಧ : ಸಾಂಕೇತಿಕ ಪ್ರತಿಭಟನೆ


Team Udayavani, Aug 28, 2018, 3:00 AM IST

shiradi-ghat-strike-27-8.jpg

ನೆಲ್ಯಾಡಿ: ಶಿರಾಡಿ ಘಾಟಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂಬ ಆಗ್ರಹದೊಂದಿಗೆ ಅಲ್ಲಿನ ಪರಿಸ್ಥಿತಿಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸೋಮವಾರ ಆಯೋಜಿಸಿದ್ದ ಶಿರಾಡಿ ಘಾಟಿ ರಸ್ತೆಯ ಸತ್ಯದರ್ಶನ ಕಾರ್ಯಕ್ರಮವನ್ನು ನಿಷೇಧಾಜ್ಞೆ ಹಿನ್ನೆಲೆಯಲ್ಲಿ ರದ್ದುಗೊಳಿಸಿ ಗುಂಡ್ಯ ಪೇಟೆಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು. ಶಿರಾಡಿ ಘಾಟಿ ರಸ್ತೆಯನ್ನು ಶೀಘ್ರ ದುರಸ್ತಿ ಮಾಡಬೇಕು, ರಸ್ತೆಯಲ್ಲಿ ಹೇರಲಾಗಿರುವ ನಿಷೇಧವನ್ನು ಸಡಿಲಗೊಳಿಸಿ, ಲಘು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ಸಮಿತಿ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಜಿಲ್ಲಾಡಳಿತ ಪರಿಸರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪಾದಯಾತ್ರೆಗೆ ಅವಕಾಶ ನಿರಾಕರಿಸಿತು.

ವಿಧಾನ ಪರಿಷತ್‌ ಸದಸ್ಯೆ ಡಾ| ತೇಜಸ್ವಿನಿ ರಮೇಶ್‌ ಮಾತನಾಡಿ, ಯಾವುದೇ ಕಾಮಗಾರಿ ಸಾರ್ವಜನಿಕರ ಉಪಯೋಗಕ್ಕೆ ಬರಬೇಕೇ ವಿನಾ ವಿಳಂಬನೀತಿಯಿಂದ ಜನಸಾಮಾನ್ಯರಿಗೆ ತೊಂದರೆಯಾಗುವಂತೆ ಮಾಡಬಾರದು. ನಾವು ಅಭಿವೃದ್ಧಿ ಕಾರ್ಯವನ್ನು ವಿರೋಧಿಸುತ್ತಿಲ್ಲ, ಆದರೆ ಮಂಗಳೂರು – ಬೆಂಗಳೂರು ಸಂಪರ್ಕದ ಮಡಿಕೇರಿ ರಸ್ತೆ ಬಂದ್‌ ಆಗಿದೆ, ಚಾರ್ಮಾಡಿಯಲ್ಲಿ ವಾಹನ ದಟ್ಟಣೆ ಅತಿಯಾಗಿದೆ, ಇದೀಗ ಶಿರಾಡಿ ರಸ್ತೆಯನ್ನೂ ಬಂದ್‌ ಮಾಡಿದರೆ ಸಮಸ್ಯೆಗೆ ಪರಿಹಾರ ದೊರಕುತ್ತದೆಯೇ ಎಂದು ಪ್ರಶ್ನಿಸಿದರು. ಜಿಲ್ಲಾಧಿಕಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಶೀಘ್ರ ಪರಿಹಾರ ಕಂಡು ಕೊಳ್ಳಬೇಕು ಎಂದು ಆಗ್ರಹಿಸಿದರು. ಸ್ಥಳದಿಂದಲೇ ದ.ಕ. ಜಿಲ್ಲಾಧಿಕಾರಿಗೆ ಕರೆ ಮಾಡಿದ್ದು, ಅವರು ಸ್ವೀಕರಿಸದಾಗ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಕರೆ ಮಾಡಿ ಇಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಕಾರು, ಮಿನಿ ಟೆಂಪೋ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಕೇಳಿಕೊಂಡರು. ಈ ಬಗ್ಗೆ ಅವರು ಪೂರಕವಾಗಿ ಸ್ಪಂದಿಸಿ ಜಿಲ್ಲಾಡಳಿತದೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು ಎಂದು ತೇಜಸ್ವಿನಿ ಸಭೆಗೆ ತಿಳಿಸಿದರು.

ಸಮಿತಿಯ ಸಂಚಾಲಕ ಮಾತನಾಡಿ, ಲಘು ವಾಹನ ಸಂಚಾರವೂ ಇಲ್ಲದ ಕಾರಣ ಶಿರಾಡಿ, ಗುಂಡ್ಯ ಪ್ರದೇಶದ ಮಂದಿಯ ಜನ ಜೀವನ ದುಸ್ತರವಾಗಿದೆ. ವಾರದ ಒಳಗೆ ಲಘು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯ ಹರೀಶ್‌ ಹಿಂಜಾಡಿ, ರಾಮಚಂದ್ರ ಗೌಡ ದೇರಣೆ ಮಾತನಾಡಿದರು. 300ಕ್ಕೂ ಅಧಿಕ ಮಂದಿ ಸ್ಥಳದಲ್ಲಿದ್ದರು.

6 ಟ್ರೇಲರ್‌ 15 ದಿನದಿಂದ ಬಾಕಿ
ಶಿರಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಪ್ರಾರಂಭವಾಗಿದೆ ಎಂದು ಇಲ್ಲಿಗೆ ಬಂದ ಇಂದೋರ್‌ ಮೂಲದ 6 ಟ್ರೇಲರ್‌ಗಳು ಕಳೆದ 15 ದಿನಗಳಿಂದ ಗುಂಡ್ಯದಲ್ಲೇ ಬಾಕಿಯಾಗಿವೆ. ಅವುಗಳ ಚಾಲಕರು ಕೈಯಲ್ಲಿ ಹಣವಿಲ್ಲದೆ ಕಂಗಾಲಾಗಿದ್ದಾರೆ. ಅವರ ಸಂಕಷ್ಟ ಆಲಿಸಿದ ತೇಜಸ್ವಿನಿ ರಮೇಶ್‌ ಅವರು ಪೊಲೀಸ್‌ ಭದ್ರತೆಯಲ್ಲಿ ಮಾನವೀಯ ನೆಲೆಯಿಂದ ಕಳುಹಿಸುವಂತೆ ಸ್ಥಳದಲ್ಲಿದ್ದ ಪೊಲೀಸ್‌ ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.