ಶಿರಾಡಿ ಘಾಟಿ: 6 ತಿಂಗಳು ರಸ್ತೆ ಮುಚ್ಚಿದರೆ ತತ್ತರಿಸಲಿದೆ ಆರ್ಥಿಕತೆ


Team Udayavani, Jan 27, 2022, 7:10 AM IST

ಶಿರಾಡಿ ಘಾಟಿ: 6 ತಿಂಗಳು ರಸ್ತೆ ಮುಚ್ಚಿದರೆ ತತ್ತರಿಸಲಿದೆ ಆರ್ಥಿಕತೆ

ಮಂಗಳೂರು: ಶಿರಾಡಿ ಕರಾವಳಿಯ ಜೀವ ನಾಡಿ. ಶಿರಾಡಿ ಘಾಟಿ ರಸ್ತೆಯಲ್ಲಿ ಉಂಟಾಗುವ ಯಾವುದೇ ಅಡಚಣೆ ಕರಾವಳಿಯ ಆರ್ಥಿಕತೆ ಮತ್ತು ಜನಜೀವನದ ಮೇಲೆ ಭಾರೀ ಪರಿಣಾಮ ಬೀರಲಿದೆ ಎಂಬುದು ಈ ಹಿಂದಿನ ಅನುಭವಗಳು ಕಲಿಸಿದ ಪಾಠ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುವ ಶಿರಾಡಿ ಘಾಟಿ ರಸ್ತೆ ರಾಜಧಾನಿ ಬೆಂಗಳೂರು ಮತ್ತು ಕರಾವಳಿಯೊಂದಿಗೆ ಜೋಡಿ ಸುವ ಪ್ರಮುಖ ಸಂಪರ್ಕ ರಸ್ತೆ. ಇಲ್ಲಿ ಯಾವುದೇ ಅಡಚಣೆಗಳಾದರೂ ಬೆಂಗ ಳೂರು- ಮಂಗಳೂರು ಮಧ್ಯೆ ಜೀವನಾವಶ್ಯಕ ವಸ್ತುಗಳು ಮತ್ತು ಕೃಷಿ ಮತ್ತು ಕೈಗಾರಿಕೆಗಳ ಉತ್ಪನ್ನಗಳ ಸಾಗಣೆ ಮತ್ತು ಲಭ್ಯತೆ ಮೇಲೆ ಸಮಸ್ಯೆ ತಲೆದೋರುತ್ತದೆ. ಇನ್ನೊಂದೆಡೆ ಇಡೀ ಸಂಚಾರ ವ್ಯವಸ್ಥೆ ಬುಡಮೇಲಾಗುತ್ತದೆ.

ಶಿರಾಡಿ ರಸ್ತೆ ನವಮಂಗಳೂರು ಬಂದರು ಮತ್ತು ಕರಾವಳಿಯ ಕೈಗಾರಿಕಾ ಕ್ಷೇತ್ರದ ಆಧಾರಸ್ತಂಭ. ಈ ರಸ್ತೆ ಮೂಲಕ ನಿತ್ಯವೂ ಮಂಗಳೂರಿಗೆ ಸುಮಾರು 600 ಕಂಟೈನರ್‌ಗಳು ಬಂದು ಹೋಗುತ್ತವೆ. ಹಾಗೆಯೇ ಸುಮಾರು 400 ಇತರೆ ಟ್ರಕ್‌ಗಳು ಸಂಚರಿಸುತ್ತವೆ. ರಸ್ತೆ ಸಂಪೂರ್ಣ ಮುಚ್ಚಿದರೆ ಇದರಲ್ಲಿ ನವಮಂಗಳೂರಿಗೆ ಬರುವ ಕಾರ್ಗೊದಲ್ಲಿ ಶೇ.50 ರಷ್ಟು ಕುಸಿತವಾಗಬಹುದು. ಮುಖ್ಯವಾಗಿ ಹಾಸನ, ಕುಣಿಗಲ್‌, ಬೆಂಗಳೂರು ಹಾಗೂ ಮೈಸೂರಿನಿಂದ ಕಾಫಿ, ತೆಂಗಿನ ನಾರಿನ ಉತ್ಪನ್ನಗಳು, ಜವಳಿ ಮುಂತಾದ ಉತ್ಪನ್ನಗಳು ಈ ಘಾಟಿ ಮೂಲಕ ಬಂದು ನವ ಮಂಗಳೂರು ಬಂದರನ್ನು ತಲುಪುತ್ತವೆ.

ಮುಖ್ಯವಾಗಿ ಜನವರಿಯಿಂದ ಮೇ ತಿಂಗಳವರೆಗೆ ರಫ್ತು ವ್ಯವಹಾರ ಹೆಚ್ಚಿರುತ್ತದೆ. ಎನ್‌ಎಂಪಿಟಿ ಮೂಲಕ 25,000 ಟಿಇಯು (3,75,000 ಟನ್‌) ಕಂಟೈನರ್‌, 1,70,000 ಖಾದ್ಯ ತೈಲ, 40,000 ರಸಗೊಬ್ಬರ ಹಾಗೂ 1,00000 ಟನ್‌ ಸ್ಟೀಲ್‌ ಕಾಯಿಲ್‌ ಕಾರ್ಗೊಗಳು ಸಾಗುತ್ತವೆ. ಸಂಪಾಜೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಕಷ್ಟ ಸಾಧ್ಯ. ಚಾರ್ಮಾಡಿ ಘಾಟಿಯಲ್ಲಿ ಈಗಾಗಲೇ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಹಾಗಾಗಿ ಯಲ್ಲಾಪುರ ಮೂಲಕ ಮಂಗಳೂರು ಬಂದರನ್ನು ಸಂಪರ್ಕಿಸಿದರೆ ಸಾಗಾಟ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತದೆ. ಉತ್ಪನ್ನಗಳ ಬೆಲೆಯಲ್ಲಿ ಹೆಚ್ಚಳವಾಗಿ ಅಂತಾ ರಾಷ್ಟ್ರೀಯ ವ್ಯಾಪಾರಕ್ಕೆ ಹೊಡೆತ ಬೀಳ ಲಿದೆ. ಆದುದರಿಂದ ರಫ್ತುದಾರರು ಚೆನ್ನೈ, ಟೂಟಿ ಕಾರನ್‌, ಕೊಚ್ಚಿ ಬಂದರುಗಳಿಗೆ ಸಾಗುತ್ತಾರೆ.

ಕಂಟೈನರ್‌ಗಳು ಸುತ್ತಿ ಬಳಸಿ ಬರುವು ದರಿಂದ ಸಾಗಾಟ ವೆಚ್ಚದಲ್ಲಿ ಶೇ.50ರಷ್ಟು ಏರಿಕೆಯಾಗಲಿದ್ದು, ಮಂಗಳೂರಿಗೆ ಹೊಡೆತ ಬೀಳುವ ಸಾಧ್ಯತೆಗಳಿವೆ ಎನ್ನುತ್ತಾರೆ ನವಮಂಗಳೂರು ಬಂದರು ಬಳಕೆದಾರರ ಅಸೋಸಿಯೇಶನ್‌ ಅಧ್ಯಕ್ಷ ಬಾಲಕೃಷ್ಣ ಕೊಟ್ಟಾರಿ.ಕರಾವಳಿಯಿಂದ ರಾಜ್ಯದ ಒಳನಾಡುಗಳಿಗೆ ಮೀನು ಸಾಗಣೆ ಹಾಗೂ ಹಾಸನ ಮುಂತಾದೆಡೆಗಳಿಂದ ಮಂಗಳೂ ರಿಗೆ ತರಕಾರಿ, ಹೂವು , ಹಣ್ಣು ಮುಂತಾದವು ಈ ರಸ್ತೆಯಿಂದಲೇ ಸಾಗಾಟವಾಗುತ್ತಿವೆ. ಶಿರಾಡಿಘಾಟಿ ರಸ್ತೆ ಮುಚ್ಚುಗಡೆ ಮೀನುಗಾರರು, ರೈತರು ನಷ್ಟ ಅನುಭವಿಸುತ್ತಾರೆ. ಇನ್ನೊಂದೆಡೆ ಈ ಉತ್ಪನ್ನಗಳು ತುಟ್ಟಿಯಾಗಿ ಜನ ಸಾಮಾನ್ಯ ರಿಗೆ ಹೊರೆಯಾಗಲಿದೆ.

ಪ್ರವಾಸೋದ್ಯಮಕ್ಕೆ ಹಿನ್ನಡೆ: ಜನವರಿ ಯಿಂದ ಮೇ ವರೆಗಿನ ಅವಧಿಯು ಪ್ರವಾಸೋ ದ್ಯಮದ ಅವಧಿ. ಪ್ರತಿ ತಿಂಗಳು ಲಕ್ಷಾಂತರ ಮಂದಿ ಆಗಮಿಸುತ್ತಾರೆ. ಕರಾವಳಿಯ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿ, ಕೊಲ್ಲೂರು ಸೇರಿದಂತೆ ಪುಣ್ಯಕ್ಷೇತ್ರಗಳು, ಬೀಚ್‌ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಶಿರಾಢಿ ಘಾಟಿ ರಸ್ತೆ ಮುಚ್ಚಿದರೆ ಪ್ರವಾಸಿಗರು ಬೇರೆಡೆಗೆ ತೆರಳುವ ಸಂಭವವಿದೆ. ಈಗಾಗಲೇ ಕೊರೊನಾದಿಂದ ತತ್ತರಿಸಿರುವ ಪ್ರವಾಸೋದ್ಯಮಕ್ಕೆ ಮತ್ತಷ್ಟು ಹಿನ್ನಡೆಯಾಗಲಿದೆ.

ಬಾಧಿತ ಕ್ಷೇತ್ರಗಳು
-ಕಂಟೈನರ್‌ ಸಾಗಾಟ ಶೇ.50ರಷ್ಟು ಬಾಧಿತ
-ಕೈಗಾರಿಕಾ ಕ್ಷೇತ್ರ-ಕಚ್ಚಾವಸ್ತು ಲಭ್ಯತೆ ಸಮಸ್ಯೆ, ಉತ್ಪನ್ನಗಳ ಬೆಲೆ ಹೆಚ್ಚಳ
-ಮೀನುಗಾರಿಕಾ ಕ್ಷೇತ್ರ- ಒಳನಾಡು ಗಳಿಗೆ ಮೀನು ಸಾಗಾಟ ಸಮಸ್ಯೆ
-ತರಕಾರಿ, ಹೂವು, ಹಣ್ಣುಗಳ ಕೊರತೆ, ಬೆಲೆಯಲ್ಲಿ ಹೆಚ್ಚಳ ಸಾಧ್ಯತೆ
-ಪ್ರವಾಸೋದ್ಯಮ-ಪ್ರವಾಸಿಗರು ಇತರೆಡೆಗೆ ಸಾಗುವ ಸಾಧ್ಯತೆ.
-ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ.

ಇದನ್ನೂ ಓದಿ:
ಶಿರಾಡಿ ಘಾಟಿ ಸಂಚಾರ ನಿರ್ಬಂಧ ಎಷ್ಟು ಸೂಕ್ತ?-  https://bit.ly/354VPOy
ಸಂಚಾರ ಸ್ಥಗಿತ ಚಿಂತನೆ; ಪರ್ಯಾಯ ವ್ಯವಸ್ಥೆಗೆ ಆಗ್ರಹ –https://bit.ly/3qTX4Zp
ಎಲ್ಲೆಲ್ಲೋ ಸುತ್ತಿ ಮಂಗಳೂರಿಗೆ ಪ್ರಯಾಣಿಕರು ಹೈರಾಣ-https://bit.ly/3fUDfed

-ಕೇಶವ ಕುಂದರ್‌

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.