ಶಿರಾಡಿ: ನಿಷೇಧ ಇದ್ದರೂ ಘನ ವಾಹನ ಸಂಚಾರ
Team Udayavani, Jul 19, 2018, 3:42 PM IST
ಪುತ್ತೂರು/ ನೆಲ್ಯಾಡಿ: ನಿಷೇಧ ಆದೇಶದ ಹೊರತಾಗಿಯೂ ಶಿರಾಡಿ ರಸ್ತೆಯಾಗಿ ಸಾಗಲು ಘನ ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಬುಧವಾರ ಕಂಡುಬಂದಿದೆ. ಬುಧವಾರ ಸಂಜೆ ವೇಳೆಗೆ ಘನ ವಾಹನಗಳು ಸಾಲುಗಟ್ಟಿ ನಿಂತ ಪರಿಣಾಮ ಗುಂಡ್ಯ ಬಳಿ 2 ತಾಸು ಟ್ರಾಫಿಕ್ ಜಾಮ್ ಉಂಟಾಯಿತು.
ಮಂಗಳೂರಿನಿಂದ ಹಾಗೂ ಸಕಲೇಶಪುರ ಭಾಗದಿಂದ ಘನ ವಾಹನ ಸಂಚಾರ ಬುಧವಾರವೂ ಮುಂದುವರಿದಿದೆ. ಜುಲೈ 18ರಿಂದ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಮಂಗಳವಾರ ಘನ ವಾಹನಗಳು ಸಂಚರಿಸಿದ್ದ ಹಿನ್ನೆಲೆಯಲ್ಲಿ ಬುಧವಾರವೂ ಸಂಚಾರ ಇದೆ ಎಂದೇ ಭಾವಿಸಿದ್ದರು. ಈ ನಡುವೆ ಘನವಾಹನ ಚಾಲಕರು ಸ್ಥಳದಲ್ಲಿ ನಿಯೋಜಿತರಾಗಿದ್ದ ಪೊಲೀಸರೊಂದಿಗೆ ವಾಹನ ಬಿಡುವಂತೆ ಒತ್ತಾಯಿಸಿ ಆಕ್ರೋಶ ವ್ಯಕ್ತ ಪಡಿಸು ತ್ತಿರುವುದೂ ಕಂಡುಬಂದಿದೆ.
ಆದೇಶ ಹೊರಡಿಸಿದ್ದ ಜಿಲ್ಲಾಡಳಿತ, ಇದರ ಬಗ್ಗೆ ಸಮರ್ಪಕ ಕ್ರಮ ಕೈಗೊಳ್ಳಲು ವಿಫಲ ಆಗಿರುವುದೇ ಈ ಅವ್ಯವಸ್ಥೆಗೆ ಕಾರಣ ಎಂದು ಗುಂಡ್ಯ ನಿವಾಸಿಗಳು ದೂರಿದ್ದಾರೆ. ಮಂಗಳೂರು ಕಡೆಯಿಂದ ಬರುವ ವಾಹನಗಳನ್ನು ಮಾಣಿಯಲ್ಲಿ ತಡೆದು, ಬೇರೆ ದಾರಿ ತೋರಿಸಬೇಕಿತ್ತು. ಹಾಸನ ಕಡೆಯಿಂದ ಬರುವ ವಾಹನಗಳಿಗೆ ಅಲ್ಲಿಯೇ ತಡೆ ಒಡ್ಡಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ