ಶಿರಾಡಿ ಘಾಟಿ ದುರಸ್ತಿ ಹಿನ್ನೆಲೆ: ಚಾರ್ಮಾಡಿ ಘಾಟಿಗೆ ಬೇಡಿಕೆ 


Team Udayavani, Jan 30, 2018, 3:52 PM IST

30-Jan-4.jpg

ಬೆಳ್ತಂಗಡಿ: ಶಿರಾಡಿ ಘಾಟಿ ಹೆದ್ದಾರಿಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ವಾಹನಗಳು ಚಾರ್ಮಾಡಿ ಘಾಟಿಯನ್ನೇ ಅವಲಂಬಿಸಿದ್ದು, ಅಪಾಯಕಾರಿ ತಿರುವುಗಳಿರುವ ಈ ರಸ್ತೆಯಲ್ಲಿ ಸಂಚಾರದಲ್ಲಿ ಭಾರೀ ವ್ಯತ್ಯಯವಾಗುತ್ತಿದೆ.

ದಿನಂಪ್ರತಿ ನೂರಾರು ಬಸ್‌ಗಳು, ಲಾರಿಗಳು, ಸಾವಿರಾರು ಕಾರುಗಳು ಈ ಮಾರ್ಗದಲ್ಲೇ ಸಂಚರಿಸುತ್ತಿವೆ. ರಾತ್ರಿ ವೇಳೆ ಬೆಂಗಳೂರಿಗೆ ತೆರಳುವ ಅನೇಕ ಖಾಸಗಿ ಬಸ್‌ಗಳಿಗೂ ಇದೇ ರಸ್ತೆ. ವಾಹನಗಳ ದಟ್ಟಣೆ ಹೆಚ್ಚಾದ ಹಿನ್ನೆಲೆಯಲ್ಲಿ ದಿನಂಪ್ರತಿ ಸಂಚರಿಸುವ ದ್ವಿಚಕ್ರ ವಾಹನ ಸವಾರರಿಗೆ ಕಷ್ಟವಾಗಿದೆ. ಕೆಲ ವಾಹನ ಸವಾರರು ಘಾಟಿಯಲ್ಲಿ ಟ್ರಾಫಿಕ್‌ ಜಾಮ್‌ ಆದಾಗ ತಾವೇ ಮುಂದೆ ಹೋಗಬೇಕೆಂದು ನುಗ್ಗುವುದು ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ.

ತಿಂಡಿ, ನೀರು ಜತೆಗಿರಲಿ
ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರ ಬ್ಲಾಕ್‌ ಆದರೆ ಸೌಕರ್ಯ ಕಡಿಮೆ. ಚಿಕ್ಕ ಮಕ್ಕಳು, ವೃದ್ದರನ್ನು ಕರೆದುಕೊಂಡು
ಈ ರಸ್ತೆಯಲ್ಲಿ ಸಂಚರಿಸುವವರು ಆಹಾರ, ನೀರು ಜತೆಯಲ್ಲಿಟ್ಟುಕೊಳ್ಳುವುದು ಸೂಕ್ತ.

ನಿಡಿಗಲ್‌ ಸೇತುವೆ
ಕಲ್ಮಂಜದ ನಿಡಿಗಲ್‌ ಸೇತುವೆ ಮೇಲೆ ದಿನಂಪ್ರತಿ ವಾಹನಗಳು ನಿಲ್ಲುತ್ತಿವೆ. ಈ ಸೇತುವೆ ಕಿರಿದಾಗಿದ್ದು, ಏಕಕಾಲದಲ್ಲಿ ಎರಡು ಬಸ್‌ಗಳು ಎದುರುಬದುರಾದರೆ ಸಂಚರಿಸುವುದು ಕಷ್ಟ. ಆದರೂ ಕೆಲ ಬಸ್‌ ಹಾಗೂ ಲಾರಿಯವರು ಏಕಕಾಲದಲ್ಲಿ ಸೇತುವೆ ಮೇಲೆ ಸಂಚರಿಸಲು ಪ್ರಯತ್ನಿಸುವುದರಿಂದ ಉಳಿದ ವಾಹನಗಳಿಗೆ ತೊಂದರೆಯಾಗುತ್ತಿದೆ. ಸೇತುವೆ ಬದಿಯ ತಡೆ ಬೇಲಿಯೂ ಮುರಿದು ಹೋಗಿದ್ದು ಅಪಾಯದ ಪ್ರಮಾಣವನ್ನು ಹೆಚ್ಚಿಸಿದೆ. ಸೇತುವೆಯೂ ಶಿಥಿಲವಾಗಿದ್ದು, ಈಗಲೋ ಆಗಲೋ ಎನ್ನುವಂತಿದೆ.

ಅತಿವೇಗ, ಅಪಾಯ ಬೇಗ
ಈ ಘಾಟಿಯಲ್ಲಿ ವಾಹನ ದಟ್ಟಣೆ ಹೆಚ್ಚಿದ್ದಾಗಲೂ ವೇಗದೂತ ಬಸ್‌ಗಳು ಹಾಗೂ ಲಾರಿಗಳು ಅತೀ ವೇಗದಿಂದ ಸಂಚರಿಸುತ್ತಿರುವುದು ಅಪಾ ಯಕ್ಕೆ ಆಹ್ವಾನ ನೀಡಿದೆ. ರಸ್ತೆಯ ಕುರಿತು ಸಮರ್ಪಕ ಮಾಹಿತಿ ಯಿಲ್ಲದ ದೂರದೂರಿನ
ವಾಹನದವರು ಇಲ್ಲಿನ ಕಿರಿದಾದ ರಸ್ತೆಯಲ್ಲಿ ಅತಿವೇಗದಿಂದ ಚಲಿಸುವುದು ಹಾಗೂ ಓವರ್‌ ಟೇಕ್‌ ಮಾಡುವುದೂ ಹೆಚ್ಚಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯ.

ಅವಸರದ ನಿರ್ಧಾರ
ಅಗಲ ಕಿರಿದಾದ ಈ ಡಾಮರು ರಸ್ತೆಯ ಇಕ್ಕೆಲಗಳ ಹೆಚ್ಚಿನ ಕಡೆ ಸುಮಾರು ಒಂದೂವರೆ ಅಡಿಯಷ್ಟು ಆಳವಿದೆ. ಇದಕ್ಕೆ
ಮಣ್ಣು ತುಂಬಿದ ಬಳಿಕ ಶಿರಾಡಿ ಘಾಟಿಯನ್ನು ಮುಚ್ಚಬೇಕಿತ್ತು. ಸಂಬಂಧಪಟ್ಟ ಇಲಾಖೆಯವರು ಇನ್ನಾದರೂ ಈ ಬಗ್ಗೆ ಗಮನಹರಿಸಿದರೆ ವಾಹನ ಸವಾರರು, ಪಾದಚಾರಿಗಳು ಸ್ವಲ್ಪ ನಿರಾಳವಾಗಿ ಸಾಗಬಹುದು.
ಅರವಿಂದ ಹೆಬ್ಟಾರ್‌ ,
   ವಾಹನ ಸವಾರ

ಕಡಿವಾಣ ಅಗತ್ಯ
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಘನ ವಾಹನಗಳಿಗೆ ಕಡಿವಾಣ ಹಾಕಬೇಕಿದೆ. ಘಾಟಿ ರಸ್ತೆ ಬದಿಯಲ್ಲಿ ಅನೇಕ ಲಾರಿ ಹಾಗೂ ಇತರ ವಾಹನಗಳನ್ನು ನಿಲ್ಲಿಸುವುದರಿಂದಲೂ ವಾಹನ ಸಂಚಾರಕ್ಕೆ ತೊಡಕುಂಟಾಗುತ್ತಿದೆ. ಘಾಟಿ ಏರುವ ವಾಹನಗಳಿಗೆ ತಮ್ಮ ಎದುರಿನ ವಾಹನಗಳು ಸೂಕ್ತ ರೀತಿಯಲ್ಲಿ ಅನುವು ಮಾಡಿಕೊಟ್ಟರೆ ಅನುಕೂಲ. ವಾಹನ ಚಾಲಕರ ನಿರ್ಲಕ್ಷ್ಯವೂ ಸಮಸ್ಯೆ ಸೃಷ್ಟಿಸುತ್ತಿದೆ.
ರಾಜೇಶ್‌ ಎಂ. ಕಾನರ್ಪ,
   ಪ್ರಯಾಣಿಕ

ಗುರು ಮುಂಡಾಜೆ

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.