ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿ: 4,000 ಕೋಟಿ ರೂ. ಯೋಜನೆಯ ಪ್ರಸ್ತಾವನೆ
Team Udayavani, Oct 16, 2019, 6:00 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿಗೆ 4 ಸಾವಿರ ಕೋಟಿ ರೂ. ಯೋಜನೆಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದ್ದು, ಕೇಂದ್ರದಿಂದ ಅನುಮೋದನೆ ದೊರೆಯುವ ವಿಶ್ವಾಸ ಇದೆ ಎಂದು ಲೋಕೋಪಯೋಗಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಲೆದೋರಿದ ಪ್ರವಾಹದಿಂದಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 4,200 ಕಿ.ಮೀ. ರಸ್ತೆ ಹಾನಿಯಾಗಿದ್ದು, ಸುಮಾರು 8 ಸಾವಿರ ಕೋ. ರೂ. ನಷ್ಟವನ್ನು ಅಂದಾಜಿಸಲಾಗಿದೆ. ಪ್ರವಾಹದಿಂದ ಹಾನಿಗೊಳಗಾಗಿರುವ ರಸ್ತೆಗಳ ದುರಸ್ತಿಗೆ 500 ಕೋ.ರೂ. ಬಿಡುಗಡೆ ಮಾಡಲಾಗಿದೆ ಎಂದರು.
ದೇಶದ ಎಲ್ಲೆಡೆ ಏಕರೂಪದ ಟೋಲ್
ಮುಂದಿನ ವರ್ಷ ಎಪ್ರಿಲ್ನಿಂದ ದೇಶಾದ್ಯಂತ ಏಕರೂಪದ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ ಎಂದವರು ತಿಳಿಸಿದರು. ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿರುವ 32 ಟೋಲ್ ಗೇಟ್ಗಳಲ್ಲಿ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ದೇಶದ್ರೋಹಿಗಳು, ಭಯೋತ್ಪಾದಕರ ಗುರುತು ಹಿಡಿಯಲೂ ಇದು ಸಹಕಾರಿಯಾಗಲಿದೆ ಎಂದರು.
ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿರುವ 32 ಟೋಲ್ ಗೇಟ್ಗಳಲ್ಲಿಯೂ ಹೊಸ ಟೋಲ್ ವ್ಯವಸ್ಥೆ ಜಾರಿಗೆ ತೀರ್ಮಾನಿಸಲಾಗಿದೆ. ಇದರಿಂದ ವಾಹನ ಸವಾರರ ಸಮಯ, ಇಂಧನ ಹಾಗೂ ಟ್ರಾಫಿಕ್ ಸಮಸ್ಯೆ ಕಡಿಮೆಯಾಗುತ್ತದೆ. ಅಲ್ಲದೆ ನೋಂದಣಿಯಿಲ್ಲದ ವಾಹನ, ದಾಖಲೆಗಳಿಲ್ಲದೆ ವಾಹನ ಸವಾರಿ ಮಾಡುವುದನ್ನು ಟೋಲ್ಗೇಟ್ಗಳಲ್ಲಿಯೇ ಪತ್ತೆ ಹಚ್ಚುವ ವ್ಯವಸ್ಥೆ ಜಾರಿಗೆ ಬರಲಿದೆ. ಎಲೆಕ್ಟ್ರಾನಿಕ್ ಟೋಲ್ ವ್ಯವಸ್ಥೆಗೆ ಕೇಂದ್ರ ಹಾಗೂ ರಾಜ್ಯ ಶೇ. 50ರಷ್ಟು ವೆಚ್ಚ ಭರಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ