ಶಿರಾಡಿ ರೈಲು ಮಾರ್ಗದಲ್ಲಿ ಆಪರೇಶನ್‌ ಹೆಬ್ಬಂಡೆ!

ಜೀವಭಯದ ನಡುವೆ ಕಾರ್ಯಾಚರಣೆ; ಕುಸಿಯುವಂತಿದೆ ಇನ್ನೊಂದು ಬಂಡೆ

Team Udayavani, Jul 22, 2019, 5:24 AM IST

SUB-RAIL

ಸತತ ಮಳೆ, ಕೆಸರು ಮಣ್ಣು ಜರಿಯುವ ಪ್ರತಿಕೂಲ ಸನ್ನಿವೇಶದಲ್ಲಿ ಹಿಟಾಚಿ, ಕಾರ್ಮಿಕರನ್ನು ಬಳಸಿ ಬಂಡೆ ತೆರವು ನಡೆಸಲಾಗುತ್ತಿದೆ.

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ರಸ್ತೆ- ಸಕಲೇಶಪುರ ರೈಲು ಮಾರ್ಗದ ನಡುವಣ ಸಿರಿಬಾಗಿಲು ಪ್ರದೇಶದ ಮಣಿಬಂಡ ಬಳಿ ಹಳಿಯ ಮೇಲೆ ಉರುಳಲು ಸಿದ್ಧವಾಗಿರುವ ಬಂಡೆಗಲ್ಲು ತೆರವು ಪ್ರಯತ್ನ ಸತತವಾಗಿ ನಡೆಯುತ್ತಿದೆ.

ಪ್ರತಿಕೂಲ ಹವಾಮಾನದ ಮಧ್ಯೆ “ಆಪರೇಶನ್‌ ಹೆಬ್ಬಂಡೆ’ ರವಿವಾರ ಎರಡನೇ ದಿನಕ್ಕೆ ಕಾಲಿರಿಸಿದೆ. ಇದೇ ಸ್ಥಳದಲ್ಲಿ ಇನ್ನೊಂದು ಬಂಡೆ ಕುಸಿಯುವ ಹಂತದಲ್ಲಿದ್ದು, ಆತಂಕಕ್ಕೆ ಕಾರಣವಾಗಿದೆ.

ರೈಲು ಮಾರ್ಗದ ಕಿ.ಮೀ. 86 ಹಳಿಯ ಪಕ್ಕ ಕಾರ್ಯಾಚರಣೆ ನಡೆಯುತ್ತಿದೆ. ಮೈಸೂರು ರೈಲ್ವೇ ವಿಭಾಗದ ಪರಿಣಿತ ತಾಂತ್ರಿಕ ಅಧಿಕಾರಿಗಳು ನೇತೃತ್ವ ವಹಿಸಿ ದ್ದಾರೆ. ಜು.20ರಂದು ಬೆಳಗ್ಗೆ ಆರಂಭ ಗೊಂಡ ಕೆಲಸ ತಡರಾತ್ರಿಯ ತನಕವೂ ಮುಂದುವರಿದಿತ್ತು. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ವಿಭಾಗದ 80 ಮಂದಿ ಕಾರ್ಮಿಕರು ಕೆಲಸ ನಿರತರಾಗಿದ್ದಾರೆ.

ತೆರವು ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿದೆ. ಕೆಲಸ ನಿರತ ರೈಲ್ವೇ ಇಲಾಖೆಯ ತುರ್ತು ನಿರ್ವಹಣ ಘಟಕದ ಕಾರ್ಮಿಕರಿಗೆ ಆಹಾರ, ಯಂತ್ರಗಳಿಗೆ ಇಂಧನ ಪೂರೈಸುವುದು ಸಮಸ್ಯೆಯಾಗಿದೆ. ಕಾಮಗಾರಿ ತ್ವರಿತಗತಿಯಲ್ಲಿ ಸಾಗಲು ಇನ್ನಷ್ಟು ಪರಿಣಿತ ಅಧಿಕಾರಿಗಳು ಮತ್ತು ಕಾರ್ಮಿಕರನ್ನು ನಿಯೋಜಿಸುವ ಅಗತ್ಯ ವಿದ್ದು, ಬಂಡೆ ಕುಸಿಯುವ ಪರಿಸ್ಥಿತಿಯಲ್ಲಿ ರುವ ಸ್ಥಳವು ಸುರಂಗದ ಪ್ರವೇಶ ದ್ವಾರದಲ್ಲೆ ಇರುವುದು ಇನ್ನಷ್ಟು ಅಡ್ಡಿ ಸೃಷ್ಟಿಸಿದೆ.

ಮಣ್ಣು ಸಡಿಲಗೊಂಡು ಗುಡ್ಡದಿಂದ ಬಂಡೆಗಲ್ಲುಗಳು ಹಳಿಯತ್ತ ಜಾರುತ್ತಿವೆ. ಇದರಿಂದ ಮಣ್ಣು, ಕೆಸರು ಮತ್ತು ಅಪಾಯಕಾರಿ ಬಂಡೆಗಲ್ಲು ತೆರವು ಬಹಳಷ್ಟು ತ್ರಾಸದಾಯಕವಾಗಿದೆ.

ಮತ್ತೂಂದು ಬಂಡೆ ಕುಸಿಯಲು ಸಿದ್ಧ!
ಮಣಿಬಂಡದಲ್ಲಿ ಜರಿದು ಬೀಳಲು ಸಿದ್ಧವಾದ ಬಂಡೆಯನ್ನು ಸ್ಫೋಟಿಸಿ ಪುಡಿ ಮಾಡಿ ತೆರವುಗೊಳಿಸುವ ಕಾಮಗಾರಿ ರವಿವಾರ ಸಂಜೆಗೆ ಶೇ.70ರಷ್ಟು ಪೂರ್ಣ ಗೊಂಡಿದೆ. ಇದಕ್ಕೆ ತಾಗಿಕೊಂಡಿರುವ ಇನ್ನೊಂದು ಬಂಡೆ ಕೂಡ ಕುಸಿಯುವ ಹಂತದಲ್ಲಿದೆ. ಹೀಗಾಗಿ ಕಾರ್ಯಾಚರಣೆ ಅನಿರ್ದಿಷ್ಟಾವಧಿ ತನಕ ಮುಂದುವರಿಯು ಕುರಿತು ರೈಲ್ವೇ ಮೂಲಗಳಿಂದ ಮಾಹಿತಿ ದೊರಕಿದೆ. ರವಿವಾರವೂ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿತ್ತು.

ಕಠಿನ ವಾತಾವರಣವಿದೆ
ಬಂಡೆಗಲ್ಲು ತೆರವು ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಮಳೆ ಮತ್ತು ವಾತಾವರಣ ಪ್ರತಿಕೂಲವಾಗಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗಿದೆ.
– ಕೆ.ಪಿ. ನಾಯ್ಡು
ಸೀನಿಯರ್‌ ಸೆಕ್ಷನ್‌ ಎಂಜಿನಿಯರ್‌ ರೈಲ್ವೇ ಮೈಸೂರು ವಿಭಾಗ

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.