ಶಿರಾಡಿ ರಸ್ತೆ ಕಾಮಗಾರಿ: ಜಿಲ್ಲಾಧಿಕಾರಿ ಪರಿಶೀಲನೆ
Team Udayavani, Jun 24, 2018, 6:00 AM IST
ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಕಲೇಶಪುರದ ಕೆಂಪುಹೊಳೆಯಿಂದ ಶಿರಾಡಿ ಗ್ರಾಮದ ಅಡ್ಡಹೊಳೆ ತನಕ ನಡೆಯುತ್ತಿರುವ ಶಿರಾಡಿ ಘಾಟಿ ರಸ್ತೆ 2ನೇ ಹಂತದ ಕಾಂಕ್ರೀಟ್ ಕಾಮಗಾರಿಯನ್ನು ದ.ಕ. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಪರಿಶೀಲನೆ ನಡೆಸಿದರು.
ಶುಕ್ರವಾರ ಕಾಮಗಾರಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಯವರು ಕಾಂಕ್ರೀಟ್ ಕಾಮಗಾರಿಗೆ ಬಳಸುವ ಜರ್ಮನ್ ಯಂತ್ರ, ಮಿಕ್ಸಿಂಗ್ ಯಂತ್ರ ಹಾಗೂ ಯುನಿಟ್ ಕೇಂದ್ರವನ್ನು ಪರಿಶೀಲಿಸಿದರು. ಕಾಮಗಾರಿಯ ಕುರಿತು ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ ಮತ್ತು ಗುತ್ತಿಗೆದಾರರಿಂದ ಮಾಹಿತಿ ಪಡೆದುಕೊಂಡರು. ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ಮುನಿ ರಾಜ್ ಹಾಗೂ ಕಾಮಗಾರಿ ನಿರ್ವ ಹಣೆಯ ಓಶಿಯನ್ ಕನ್ಸ್ಟ್ರಕ್ಷನ್ ಸಂಸ್ಥೆಯ ನಿರ್ದೇಶಕ ಶರ್ಪುದ್ದೀನ್ ಅವರು ಮಾಹಿತಿ ನೀಡಿದರು.
ಹೆದ್ದಾರಿ ಕಾಂಕ್ರೀಟೀಕರಣ ಹಾಗೂ ಸೇತುವೆಗಳ ನಿರ್ಮಾಣ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವ ಮುನ್ನವೇ ಫುಟ್ಪಾತ್ ಕಾಮಗಾರಿಯನ್ನೂ ಪೂರ್ಣ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪುತ್ತೂರು ತಹಶೀಲ್ದಾರ್ ಅನಂತ ಶಂಕರ, ಉಪ್ಪಿನಂಗಡಿ ಪ್ರಭಾರ ಕಂದಾಯ ನಿರೀಕ್ಷಕ ರಮಾನಂದ ಚಕ್ಕಡಿ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ