ಕಾರ್ಯಕ್ರಮಕ್ಕೆ ಅಡ್ಡಿ ಸಲ್ಲದು: ಜೆಡಿಎಸ್
Team Udayavani, Feb 23, 2017, 12:51 PM IST
ಮಂಗಳೂರು: ಕೇರಳದ ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸುವುದು ಹಾಗೂ ಅವರು ಪಕ್ಷದ ಸಭೆಯಲ್ಲಿ ಭಾಗವಹಿಸುವುದರ ವಿರುದ್ಧ ಪ್ರತಿಭಟನೆ ಹಾಗೂ ಬಂದ್ಗೆ ಕರೆ ನೀಡುವುದರ ಮೂಲಕ ಬಿಜೆಪಿ, ಬಜರಂಗದಳ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆಗಳು ಫ್ಯಾಸಿಸ್ಟ್ ಪ್ರವೃತ್ತಿ ತೋರಿಸುತ್ತಿವೆ ಎಂದು ದ.ಕ. ಜಿಲ್ಲಾ ಜನತಾದಳ ತಿಳಿಸಿದೆ.
ಒಕ್ಕೂಟ ವ್ಯವಸ್ಥೆಯಲ್ಲಿ ಹಾಗೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿರುವ ರಾಷ್ಟ್ರೀಯ ಪಕ್ಷವೊಂದು ರಾಜ್ಯವೊಂದರ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಈ ಪರಿ ವಿರೋಧ ವ್ಯಕ್ತಪಡಿಸುತ್ತಿರುವುದು ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ. ಶಾಂತಿ ಕದಡುವ ಏಕಮಾತ್ರ ಗುರಿ ಅವರದ್ದಾಗಿದೆ. ಸಂಸದ, ಶಾಸಕರ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುವ ವಿಧಾನ ಈ ದೇಶದ ಮೌಲ್ಯಗಳಿಗೆ ತಿಲಾಂಜಲಿ ನೀಡುವ ಎನ್ಡಿಎ ಸರಕಾರದ ಅಜೆಂಡಾದ ಒಂದು ಭಾಗ. ಜನತಾದಳ ಇದನ್ನು ತೀವ್ರವಾಗಿ ಖಂಡಿಸುತ್ತದೆ ಹಾಗೂ ಶಾಂತಿ ಕಾಪಾಡಲು ಕಾನೂನಿನ ಬಿಗಿಯಾದ ಬಂದೋಬಸ್ತ್ ಮಾಡಲು ಜಿಲ್ಲಾಡಳಿತವನ್ನು ಆಗ್ರಹಿಸುತ್ತದೆ ಎಂದು ಜನತಾದಳದ ಮಾಜಿ ಸಚಿವ ಅಮರನಾಥ ಶೆಟ್ಟಿ, ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ, ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ, ಹೈದರ್ ಪರ್ತಿಪಾಡಿ ಮೊದಲಾದವರು ಲಿಖೀತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್