ವೈನ್‌ಶಾಪ್‌ಗೆ ಶೋಕಾಸ್‌ ನೋಟಿಸ್‌: ನಿರ್ಧಾರ 


Team Udayavani, Dec 1, 2017, 10:16 AM IST

30-Dec-2.jpg

ಮೂಲ್ಕಿ: ನಗರ ಪಂಚಾಯತ್‌ ವ್ಯಾಪ್ತಿಯ ಕಾರ್ನಾಡು ಸದಾಶಿವ ರಾವ್‌ ನಗರದ ಎರಡು ವೈನ್‌ ಶಾಪ್‌ಗಳಿಂದ  ಆ ವ್ಯಾಪ್ತಿಯ ಜನರಿಗೆ ತೊಂದರೆ ಆಗುತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ನಗರ ಪಂಚಾಯತ್‌ ಕೊಟ್ಟಿರುವ ಎನ್‌. ಒ.ಸಿ.ಯನ್ನು 15 ದಿನಗಳ ಶೋಕಾಸ್‌ ನೋಟಿಸ್‌ ನೀಡಿ ಹಿಂಪಡೆಯಲು ಅಧ್ಯಕ್ಷ ಸುನೀಲ್‌ ಆಳ್ವ ಅವರ ಅಧ್ಯಕ್ಷತೆಯಲ್ಲಿ ಜರಗಿದ ನಗರ ಪಂಚಾಯತ್‌ನ ಮಾಸಿಕ ಸಭೆಯಲ್ಲಿ ನಿರ್ಧರಿಸಲಾಯಿತು.

ಕಿಲ್ಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರೈಲು ನಿಲ್ದಾಣ ಬಳಿಯ ರಸ್ತೆಯ ಒಂದು ವೈನ್‌ ಶಾಪ್‌ನಿಂದಲೂ ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯ ಜನರಿಗೆ ತೊಂದರೆಯಾಗುತ್ತಿದೆ ಎಂಬ ದೂರು ಬಂದಿದ್ದು, ಈ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧ್ಯಕ್ಷರು ಹೇಳಿದರು.

ಸಮಸ್ಯೆ ಸರಿಯಾದ ಮೇಲೆ ನಮ್ಮ ಸುಪರ್ದಿಗೆ
ಕಾರ್ನಾಡು ವ್ಯಾಪ್ತಿ ಕೈಗಾರಿಕ ಪ್ರದೇಶದ ದಾರಿ ದೀಪ ಹಾಗೂ ರಸ್ತೆಯ ಕಾಮಗಾರಿ ಪೂರ್ತಿಗೊಂಡ ಬಳಿಕ ಈ ಪ್ರದೇಶವನ್ನು ನಗರ ಪಂಚಾಯತ್‌ ತನ್ನ ಸುಪರ್ದಿಗೆ ಸೇರಿಸಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಇಲಾಖೆಗೆ ಬರೆದ ಪತ್ರವನ್ನು ಸಭೆಗೆ ತಿಳಿಸಲಾಯಿತು.

ದಾರಿ ದೀಪ ಅಳವಡಿಸುವ ಸಂದರ್ಭ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದಿರುವುದು ಹಾಗೂ ಕೇಬಲ್‌ ಅಳವಡಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವುದೇ ಈ ವ್ಯವಸ್ಥೆ ಕೆಟ್ಟು ಹೋಗಲು ಕಾರಣ. ಸದ್ಯ ಒಂದು ಲಕ್ಷ ರೂ. ವಿನಿಯೋಗಿಸಿದರೆ ಅದನ್ನು ಸರಿಪಡಿಸಬಹುದು ಎಂದು ಅಧಿಕಾರಿಗಳು ತಿಳಿಸಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ದಾರಿ ದೀಪದ ವ್ಯವಸ್ಥೆಯಿಂದ ನಗರ ಪಂಚಾಯತ್‌ ವ್ಯಾಪ್ತಿಯ ಜನರಿಗೆ ಪ್ರಯೋಜನ ಇರುವುದರಿಂದಾಗಿ ಕೆಲವು ದೀಪಗಳನ್ನು ಸರಿಪಡಿಸಿದರೆ ಒಳಿತು ಎಂದು ಸದಸ್ಯ ಬಿ.ಎಂ. ಆಸೀಫ್‌ ಸಲಹೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಆರಂಭ
ಈ ಬಾರಿ ಈಗಲೇ ನ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ಡಿಸೆಂಬರ್‌ ತಿಂಗಳಿನಿಂದಲೇ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಜರಗಿಸುವಂತೆ ಆಸೀಫ್‌ ಆಗ್ರಹಿಸಿದರು.

ಖಾಸಗಿ ಬಾವಿಗಳಿಂದ ನೀರು ಪೂರೈಕೆ
ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯಲ್ಲಿ ಖಾಸಗಿಯವರ ಬಾವಿ ಅಥವಾ ಬೋರ್‌ವೆಲ್‌ಗ‌ಳಿಂದ ನೀರು ಸಂಗ್ರಹಿಸಿ ಅಗತ್ಯವಿರುವಲ್ಲಿಗೆ ಪೂರೈಕೆ ಮಾಡಲು ಕ್ರಮ ನಡೆಸಲಾಗುತ್ತದೆ ಎಂದು ಅಧ್ಯಕ್ಷರು ತಿಳಿಸಿದರು.

ಒಳಚರಂಡಿ ಸಮಸ್ಯೆ
ನ.ಪಂ. ವ್ಯಾಪ್ತಿಯ ವಾಣಿಜ್ಯ ಕಟ್ಟಡಗಳು, ಆಸ್ಪತ್ರೆಗಳು ಮತ್ತು ಸಾರ್ವಜನಿಕ ಹಾಲ್‌ ಇತ್ಯಾದಿಗಳ ಕೊಳಚೆ ನೀರು ಹೋಗಲು ಒಳಚರಂಡಿ ವ್ಯವಸ್ಥೆ ಇಲ್ಲದೆ ತಗ್ಗು ಪ್ರದೇಶದ ಕೆಲವು ಬಾವಿಗಳಿಗೆ ತೊಂದರೆಯಾಗಿದೆ. ಕೆಲವು ಪರಿಸರವೂ ದುರ್ವಾಸನೆಯಿಂದ ಕೂಡಿದೆ ಮುಂತಾದ ದೂರುಗಳು ಬಂದಿದೆ. ಆದ್ದರಿಂದ ಮೂಲ್ಕಿ ವ್ಯಾಪ್ತಿಯ ಎಲ್ಲ ಕಟ್ಟಡಗಳ ಮಾಲಕರಿಗೆ ನೋಟಿಸ್‌ ನೀಡಿ ಅವರವರ ಜಾಗದಲ್ಲಿ ನೀರು ಇಂಗುವಂತೆ ಕ್ರಮ ತೆಗೆದುಕೊಳ್ಳಲು ಸೂಚಿಸಲು ಸಭೆ ತೀರ್ಮಾನಿಸಿತು. ಮುಖ್ಯಾಧಿಕಾರಿ ಎಂ. ಇಂದೂ ಸ್ವಾಗತಿಸಿದರು. ನಗರ ಯೋಜನೆ ಮತ್ತು ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷರಾಜ್‌ ಶೆಟ್ಟಿ ಜಿ.ಎಂ. ಉಪಸ್ಥಿತರಿದ್ದರು. 

ಪ್ರತಿಭಟನೆ
ಹೆದ್ದಾರಿ ಸಮಸ್ಯೆಯ ಬಗ್ಗೆ ಮಾತನಾಡಿದ ಸುನೀಲ್‌ ಆಳ್ವ, ಡಿ. 1ರಿಂದ ಮತ್ತೆ ಮೂಲ್ಕಿಯ ಸರ್ವಿಸ್‌ ರಸ್ತೆ ಮತ್ತು ಚತುಷ್ಪಥ ಹೆದ್ದಾರಿಯ ಕಾಮಗಾರಿಯನ್ನು ಆರಂಭಿಸುವುದಾಗಿ ಇಲಾಖೆಯ ಯೋಜನಾ ಅಧಿಕಾರಿ ಸ್ಯಾಮ್‌ ಸಂಗ್‌ ನನಗೆ ತಿಳಿಸಿದ್ದಾರೆ. ಒಂದೊಮ್ಮೆ ಕಾಮಗಾರಿ ಆರಂಭವಾಗದಿದ್ದರೆ ಟೋಲ್‌ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.