ಕ್ಷಣವೂ ಶಿಕ್ಷಣವಾಗಲಿ: ಒಡಿಯೂರು ಶ್ರೀ

ಕಟೀಲು ಬ್ರಹ್ಮಕಲಶೋತ್ಸವ - ಧಾರ್ಮಿಕ ಸಭೆ

Team Udayavani, Jan 30, 2020, 2:22 AM IST

jan-27

ಕಟೀಲು: ಕ್ಷಣವೂ ಶಿಕ್ಷಣವಾಗಬೇಕು, ಚಿತ್ತದ ದಾಸ್ಯ ಹಾಗೂ ವಿತ್ತದ ದಾಸ್ಯ ಏನು ಎಂಬುದು ತಿಳಿದು ಬದುಕಬೇಕು, ದೇವರ ಭಕ್ತಿಯನ್ನು ಅನುಭವಿಸಬೇಕು ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಬುಧವಾರ ಕಟೀಲು ಬ್ರಹ್ಮಕಲಶೋತ್ಸವದ ಅಂಗವಾಗಿ ಭ್ರಾಮರಿ ಸಭಾಂಗಣದಲ್ಲಿ ಸಂಪನ್ನಗೊಂಡ ಎಂಟನೇ ದಿನದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ಭಕ್ತರಿಂದ ಭಕ್ತಿ ಪೂರಕವಾದ ಕೆಲಸ ನಡೆದಿದೆ ಎಂದರು.

ಅರಳು ಮಲ್ಲಿಗೆ ಪಾರ್ಥಸಾರಥಿ ಅವರು “ದಾಸ ಸಾಹಿತ್ಯ ಮತ್ತು ಅಧ್ಯಾತ್ಯ’ ವಿಷಯದ ಬಗ್ಗೆ ಮಾತನಾಡಿ, ದ.ಕ.ದಿಂದಲೇ ದಾಸ ಸಾಹಿತ್ಯ ಹುಟ್ಟಿಕೊಂಡಿದೆ. ಭಗವಂತನನ್ನು ಒಳಗಣ್ಣಿನಿಂದ ನೋಡಿ ಆರಾಧಿಸಿ ಅನುಭವಿಸಬೇಕು ಇದರಿಂದ ಬದುಕು ಸುಂದರವಾಗಲು ಸಾಧ್ಯ ಎಂದರು.

ಕದ್ರಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ| ಎ.ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕದ್ರಿಯ ಪ್ರಧಾನ ಅರ್ಚಕ ಡಾ| ಕೆ. ಪ್ರಭಾಕರ ಅಡಿಗ ಕಾಶಿಪಟ್ನ, ಸಸಿಹಿತ್ಲು ಭಗವತಿ ಕ್ಷೇತ್ರದ ಪ್ರಧಾನ ಅರ್ಚಕ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ, ಕುರ್ಲಾ ಬಂಟರ ಸಂಘ ವಿಷ್ಣುಮೂರ್ತಿ ದೇವಸ್ಥಾನದ ನಂದಕುಮಾರ ತಂತ್ರಿ, ಮುಂಬಯಿಯ ಸುನಂದಾ ಶೆಟ್ಟಿ ಮುದಲಾಡಿ, ವಿವಿಧ ಕ್ಷೇತ್ರಗಳ ಗಣ್ಯರಾದ ಶಮಿತಾ ಶೆಟ್ಟಿ, ಚಂದ್ರಶೇಖರ ಐಪಿಎಸ್‌, ಡಾ| ಎನ್‌. ನಾರಾಯಣ ಶೆಟ್ಟಿ ಶಿಮಂತೂರು, ಕರ್ನಿರೆ ವಿಶ್ವನಾಥ ಶೆಟ್ಟಿ, ನಂದಳಿಕೆ ಕೃಷ್ಣ ಶೆಟ್ಟಿ, ರಘು ಎಲ್‌. ಶೆಟ್ಟಿ, ನಲ್ಲೂರು ರಘವೀರ ಶೆಟ್ಟಿ, ಬೊಳ್ನಾಡುಗುತ್ತು ಚಂದ್ರಹಾಸ ರೈ, ಚಂದ್ರಶೇಖರ ಪೂಜಾರಿ, ರಾಮಚಂದ್ರ ದೇವಾಡಿಗ, ಮದ್ಯ ಮೋಹನ ಶೆಟ್ಟಿ, ಬೋಳ ಗೋಪಾಲ ಶೆಟ್ಟಿ, ಸುರತ್ಕಲ್‌ ಅಶೋಕ ಅಮೀನ್‌, ವಸಂತ ಶೆಟ್ಟಿ, ಬಳ್ಕುಂಜೆ ವಿರಾರ್‌ ಶಂಕರ ಶೆ‌ಟ್ಟಿ, ಕರಂಬಾರು ವೇಣುಗೋಪಾಲ ಎಲ್‌. ಶೆಟ್ಟಿ, ನಾರಾಯಣ ಎಂ., ಗಂಗಾಧರ ಅಮೀನ್‌ ನಾಸಿಕ್‌, ಶಶಿಧರ ಶೆಟ್ಟಿ ನಾಸಿಕ್‌, ಈಶ್ವರೀಚಂದ್ರ ಶೆಟ್ಟಿ ಕೊಡೆತ್ತೂರುಗುತ್ತು, ರತ್ನಾಕರ ಶೆಟ್ಟಿ ಮುಂಡ್ಕೂರು, ಜಗನ್ನಾಥ ರಾವ್‌ ಮದ್ರಾಸು, ಕಮಲಾಕ್ಷ ಬಂಗೇರ, ಗಣೇಶ ಬಂಗೇರ, ಪದ್ಮನಾಭ ಬಂಗೇರ, ಸದಾನಂದ ಆಸ್ರಣ್ಣ ಉಪಸ್ಥಿತರಿದ್ದರು. ಸುರೇಶ್‌ ಶೆಟ್ಟಿ ಸ್ವಾಗತಿಸಿದರು.

ಇಂದು ಬ್ರಹ್ಮಕಲಶಾಭಿಷೇಕ
ಕಟೀಲು, ಜ. 29: ಕಟೀಲು ದೇವಿಗೆ ಜ. 30ರಂದು ಬೆಳಗ್ಗೆ ಪ್ರಧಾನ ಸ್ವರ್ಣ ಕಲಶ ಸಹಿತ 1,001 ಬೆಳ್ಳಿಯ ಕಲಶಗಳಿಂದ ಬ್ರಹ್ಮಕಲಶಾಭಿಷೇಕ ಜರಗಲಿದೆ. ಕಲಶ ಮಂಡಲ ಪೂಜೆಯ ವೇಳೆ ಪ್ರಧಾನ ಸ್ವರ್ಣ ಕಲಶವನ್ನು ಮಂಡಲದ ಮಧ್ಯೆ ಪ್ರತಿಷ್ಠಾಪಿಸಲಾಗುತ್ತಿದೆ. 24 ದೊಡ್ಡ ಗಾತ್ರದ ಬೆಳ್ಳಿಯ ಖಂಡ ಕಲಶಗಳು ಮತ್ತು 976 ಬೆಳ್ಳಿಯ ಸಣ್ಣ ಕಲಶಗಳನ್ನು ಮಂಡಲದಲ್ಲಿ ಇರಿಸಿ ಪೂಜಿಸಿ ಬಳಿಕ ದೇವಿಗೆ ಅಭಿಷೇಕ ಮಾಡಲಾಗುವುದು. ಈ ಬೆಳ್ಳಿಯ ಸಣ್ಣ ಕಲಶಗಳನ್ನು ಸೂಕ್ತ ಮೊತ್ತ ಪಾವತಿಸಿ ನೋಂದಾಯಿಸಿದ ಭಕ್ತರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಗುವುದು.

ಸಹಸ್ರಾರು ಭಕ್ತರು ಭಾಗವಹಿಸಲಿದ್ದು 1.5 ಲಕ್ಷ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6.30ಕ್ಕೆ ದೇವರ ಉತ್ಸವ ಬಲಿ ಹೊರಡಲಿದ್ದು ರಾತ್ರಿ 8.30ಕ್ಕೆ ಬ್ರಹ್ಮರಥೋತ್ಸವ ನಡೆಯಲಿದೆ. ಬಳಿಕ ಶಯನದ ಬಲಿ ಉತ್ಸವ ನಡೆದು ಕವಾಟ ಬಂಧನ, ಜ. 31ರ ಬೆಳಗ್ಗೆ 5ರಿಂದ 6 ಗಂಟೆಗೆ ಕವಾಟೋದ್ಘಾಟನೆ, ತೀರ್ಥಯಾತ್ರಾ ಹೋಮ, ಅವಭೃಥ ಸ್ನಾನ, ಧ್ವಜಾವರೋಹಣ, ಸಂಪ್ರೋಕ್ಷಣೆ ನಡೆಯಲಿದೆ. ರಾತ್ರಿ ಮಹಾ ರಂಗ ಪೂಜೆ ನಡೆಯಲಿದೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.