ನಾಗಮಂಡಲೋತ್ಸವಕ್ಕೆ ಹರಿದುಬಂದ ಭಕ್ತಸಾಗರ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಬ್ರಹ್ಮಕಲಶೋತ್ಸವ
Team Udayavani, Feb 1, 2020, 9:38 PM IST
ಚಿನ್ನದ ರಥದಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು.
ಕಟೀಲು: ಕಟೀಲು ಶ್ರೀ ದುರ್ಗಾಪರ ಮೇಶ್ವರೀ ದೇವಸ್ಥಾನದಲ್ಲಿ ಶನಿವಾರ ಸಂಭ್ರಮದ ನಾಗಮಂಡಲೋತ್ಸವ ಜರಗಿತು.
ಸಂಭ್ರಮದ ನಾಗಮಂಡಲೋತ್ಸವವನ್ನು ಕಣ್ತುಂಬಿಕೊಳ್ಳಲು ಸುಮಾರು 2 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ದರು. ನಾಗಮಂಡಲೋತ್ಸವಕ್ಕೆ ಪ್ರಯುಕ್ತ ಕ್ಷೇತ್ರದ ಭೋಜನಶಾಲೆಯಲ್ಲಿ ವಿಶೇಷ ಮಹಾಅನ್ನಸಂತರ್ಪಣೆ ಜರಗಿತು. ಸುಮಾರು 1.5 ಲಕ್ಷಕ್ಕೂ ಹೆಚ್ಚು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.
ನಾಗಮಂಡಲ ವೀಕ್ಷಣೆಗೆ ಬಸ್ನಿಲ್ದಾಣ ದೇವ ಸ್ಥಾನ ರಥಬೀದಿ, ಭೋಜನ ಶಾಲೆ ವಿವಿಧ 10 ಕಡೆಗಳಲ್ಲಿ ಎಲ್ಸಿಡಿ ಪರದೆ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಸರತಿ ಸಾಲು ಮಾಡಿದ್ದು ಎಲ್ಲ ಭಕ್ತರಿಗೂ ದೇವರ ದರ್ಶನ ಅವಕಾಶ ಮಾಡಲಾಯಿತು.
ಉಚಿತ ಬಸ್ ವ್ಯವಸ್ಥೆ
ಕಟೀಲು ದೇಗುಲದಲ್ಲಿ ನಡೆಯುತ್ತಿರುವ ಬ್ರಹ್ಮ ಕಲಶೋತ್ಸವ ಅಂಗವಾಗಿ ಶನಿವಾರ ನಡೆದ ನಾಗ ಮಂಡಲೋತ್ಸವ ನೋಡಲು ಕಟೀಲಿಗೆ ಬರುವ ಭಕ್ತರ ಅನುಕೂಲಕ್ಕಾಗಿ ರಾತ್ರಿ 11.30ರ ವರೆಗೆ (ಕಟೀಲು ರೂಟ್ನಲ್ಲಿ ಸಂಚರಿಸುವ ಬಸ್ಸುಗಳು) ಉಚಿತ ಬಸ್ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ ಭಾÅಮರೀವನದಲ್ಲಿ ಕೇತುಯಾಗ, ಸಹಸ್ರ ಚಂಡಿಕಾಸಪ್ತಶತೀಪಾರಾಯಣ, ಕೋಟಿ ಜಪ ಯಜ್ಞ, ನವಗ್ರಹ ವನದಲ್ಲಿ ವೃಕ್ಷಸ್ಥಾಪನೆ, ಸಂಜೆ 6ರಿಂದ ಹಾಲಿಟ್ಟು ಸೇವೆ, ಕೋಟಿಜಪಯಜ್ಞ, ಸಹಸ್ರ ಚಂಡಿಕಾಸಪ್ತಶತೀಪಾರಾಯಣ ಜರಗಿತು.
ಧಾರ್ಮಿಕ ಕಾರ್ಯಕ್ರಮಗಳು
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ದಲ್ಲಿ ಶನಿವಾರದಂದು ನಾಗಮಂಡಲೋತ್ಸವ ಸಂಭ್ರಮದ ಜತೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಬೆಳಗ್ಗೆ 5 ರಿಂದ ಒಳಗಿನ ನಾಗಸನ್ನಿಧಿಯಲ್ಲಿ ಕಲಶಾಭಿಷೇಕ, ತಿಲಹೋಮ, ಕೂಷ್ಮಾಂಡಹೋಮ, ಪವಮಾನ ಹೋಮ, ಸರ್ಪತ್ರಯಮಂತ್ರ ಹೋಮ, ಮಂಗಳ ಗಣಯಾಗ, ವಟು ಆರಾಧನೆ, ದಂಪತಿಪೂಜೆ, ಮಹಾಮಂತ್ರಾಕ್ಷತೆ ಜರಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್