ಹನುಮಗಿರಿ: ಶ್ರೀ ಕೋದಂಡರಾಮನಿಗೆ ನವಕಾಭಿಷೇಕ
Team Udayavani, Apr 15, 2019, 6:16 AM IST
ಈಶ್ವರಮಂಗಲ: ಹನುಮಗಿರಿ ಕ್ಷೇತ್ರದಲ್ಲಿ ಜಾತ್ರೆ ನಡೆಯುತ್ತಿದ್ದು, ಶನಿವಾರ ರಾತ್ರಿ ರಾಮನವಮಿ ಪ್ರಯುಕ್ತ ಕುಂಟಾರು ಬ್ರಹ್ಮಶ್ರೀ ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕೋದಂಡರಾಮ ದೇವರಿಗೆ ಅರಿಸಿನ, ಕುಂಕುಮ, ಸಕ್ಕರೆ, ಶ್ರೀಗಂಧ, ರಕ್ತಚಂದನ, ಹಾಲು, ಸಿಯಾಳ, ಸಿಂಧೂರ, ಪುಷ್ಪಾಭಿಷೇಕ ನಡೆಯಿತು.
ಅನಂತರ ಚೆಂಡೆ, ವಾದ್ಯ ಮೆರವಣಿಗೆ ಮೂಲಕ ಪಂಚಮುಖೀ ಆಂಜನೇಯ ಸ್ವಾಮಿಯ ಶ್ರೀ ಕೋದಂಡರಾಮ ದೇವರ ಭೇಟಿ ನಡೆಯಿತು. ಪಂಚಮುಖೀ ಆಂಜನೇಯ ಮತ್ತು ಕೋದಂಡರಾಮ ಕ್ಷೇತ್ರದಲ್ಲಿ ರಂಗಪೂಜೆ, ಸಿಡಿಮದ್ದು ಪ್ರದರ್ಶನ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.
ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡಿತ್ತಾಯ, ಧರ್ಮದರ್ಶಿ ಗಳಾದ ಶಿವರಾಮ ಪಿ., ಶಿವರಾಮ ಶರ್ಮ, ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ, ತಹಶೀಲ್ದಾರ ಡಾ| ಪ್ರದೀಪ ಕುಮಾರ, ಕಂದಾಯ ನಿರೀಕ್ಷಕ ದಯಾನಂದ ಹೆಗ್ಡೆ, ಭಕ್ತರು ಉಪಸ್ಥಿತರಿದ್ದರು.
ರವಿವಾರ ಬೆಳಗ್ಗೆ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು. ಸಾಂಪ್ರದಾಯಿಕ ಭಜನ ಸ್ಪರ್ಧೆ ಶ್ರೀ ಕೋದಂಡರಾಮ ಹಾಗೂ ಶ್ರೀ ಪಂಚಮುಖೀ ಆಂಜನೇಯ ಸನ್ನಿಧಿಯಲ್ಲಿ ಏಕಕಾಲದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಮುಂದುವರಿಯಿತು.
ಇಂದು ಭಜನ ಸ್ಪರ್ಧೆ
ಬೆಳಗ್ಗೆ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಸಾಂಪ್ರದಾಯಿಕ ಭಜನ ಸ್ಪರ್ಧೆ ಶ್ರೀ ಕೋದಂಡರಾಮ ಹಾಗೂ ಶ್ರೀ ಪಂಚಮುಖೀ ಆಂಜನೇಯ ಸನ್ನಿಧಿಯಲ್ಲಿ ಏಕಕಾಲದಲ್ಲಿ ಅಪರಾಹ್ನ 2 ಗಂಟೆಯಿಂದ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ
MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ
Belthangady ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ
Belthangady ವಿದ್ಯುತ್ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ
Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು
Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ