ತಲಪಾಡಿ ಪಂಚಾಯತ್‌ಗೆ ಗ್ರಾಮಸ್ಥರಿಂದ ಮುತ್ತಿಗೆ


Team Udayavani, Aug 9, 2018, 11:38 AM IST

9-agust-6.jpg

ತಲಪಾಡಿ: ಇಲ್ಲಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅಲಂಕಾರುಗುಡ್ಡೆ, ಮಕ್ಯಾರು ರಸ್ತೆ ಅವ್ಯವಸ್ಥೆ ಹಾಗೂ ಇದರಿಂದ ಗ್ರಾಮಸ್ಥರಿಗೆ, ಶಾಲಾ ಮಕ್ಕಳಿಗೆ ಆಗುತ್ತಿರುವ ತೊಂದರೆಯನ್ನು ಮುಂದಿಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿ ತಲಪಾಡಿ ಗ್ರಾಮ ಪಂಚಾಯತ್‌ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿದರು.

ಸುಮಾರು 50ಕ್ಕೂ ಅಧಿಕ ಮನೆಗಳಿರುವ ಮಕ್ಯಾರು ಪ್ರದೇಶಕ್ಕೆ 100 ವರ್ಷಗಳ ಇತಿಹಾಸವಿರುವ ಕಾಲುದಾರಿಯಿತ್ತು. ಕ್ರಮೇಣ ಅಭಿವೃದ್ಧಿ ಆಗುತ್ತಿದ್ದಂತೆ 25 ವರ್ಷಗಳ ಹಿಂದೆ ರಸ್ತೆಯನ್ನು ವಿಸ್ತರಿಸಿ ವಾಹನಗಳು ತೆರಳುವ ರಸ್ತೆಯಾಗಿ ಮಾರ್ಪಾಡು ಮಾಡಲಾಯಿತು. ಈಗ 1 ಕಿ.ಮೀ. ಉದ್ದದ ರಸ್ತೆ ಇಡೀ ಹೊಂಡಗಳಿಂದ ಕೂಡಿದೆ. ಗ್ರಾಮ ಸಭೆಗಳಲ್ಲಿ, ವಾರ್ಡ್‌ ಸಭೆಗಳಲ್ಲಿ ಗ್ರಾಮಸ್ಥರು ಹಲವು ಬಾರಿ ಜ್ವಲಂತ ಸಮಸ್ಯೆಯ ಕುರಿತು ಗಮನಹರಿಸುವಂತೆ ಒತ್ತಾಯಿಸಿದರು. ಪಂಚಾಯತ್‌ ಅಧಿಕಾರಿಗಳಾಗಲಿ, ಆಡಳಿತ ಸಮಿತಿಯಾಗಲಿ, ವಾರ್ಡ್‌ ಸದಸ್ಯರಾಗಲಿ ಯಾವುದೇ ಮುತುವರ್ಜಿ ವಹಿಸಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.

ಗ್ರಾಮಸ್ಥ ಸತ್ಯೇಂದ್ರ ಮಾತನಾಡಿ, ಮಕ್ಯಾರು ಪ್ರದೇಶ ಮೂಲ ಸೌಕರ್ಯಗಳಿಂದ ಕಡೆಗಣಿಸಲ್ಪಟ್ಟಿದೆ. ಜನಪ್ರತಿನಿಧಿಗಳು ಪ್ರದೇಶವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಪ್ರತಿಭಟನೆಯ ಮೂಲಕ ಸಂಬಂಧಪಟ್ಟ ಇಲಾಖೆ ಸೇರಿದಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಗ್ರಾಮಸ್ಥ ಭಾಸ್ಕರ್‌ ದೇವಾಡಿಗ ಮಾತನಾಡಿ, ಸಮಸ್ಯೆಯ ಬಗ್ಗೆ ಪಂಚಾಯತ್‌ಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ತಲಪಾಡಿಯ ಪ್ರಮುಖ ರಸ್ತೆ ಇದಾಗಿದ್ದರು ಈ ವರೆಗೆ ಅಭಿವೃದ್ಧಿಗೆ ಅನುದಾನವನ್ನು ಮೀಸಲು ಇರಿಸಲು ಸಾಧ್ಯವಾಗಿಲ್ಲ. ವೀಕ್ಷಣೆಗೆಂದು ಹಲವು ಬಾರಿ ಸಚಿವರು ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ತುರ್ತಾಗಿ ಜಲ್ಲಿ ಹುಡಿ ಹಾಕಿಯಾದರು ಪಂಚಾಯತ್‌ ಆಡಳಿತ ಸಹಕರಿಸಬೇಕು ಎಂದರು. ವಿದ್ಯಾರ್ಥಿನಿ ಸ್ವಾತಿ, ಗ್ರಾಮಸ್ಥ ಇಸ್ಮಾಯಿಲ್‌ ಅವರು ಮಾತನಾಡಿದರು.

ಪಂಚಾಯತ್‌ಗೆ ಮುತ್ತಿಗೆ
ಮಕ್ಯಾರು ಗ್ರಾಮಸ್ಥರು ಪ್ರತಿಭಟನೆಯ ಬಳಿಕ ತಲಪಾಡಿ ಪಂಚಾಯತ್‌ ಕಚೇರಿಗೆ ಮುತ್ತಿಗೆ ಹಾಕಿದರು. ತತ್‌ಕ್ಷಣವೇ ರಸ್ತೆ ದುರಸ್ತಿ ನಡೆಸಿಕೊಡುವಂತೆ ಆಗ್ರಹಿಸಿದರು ಅಭಿವೃದ್ಧಿ ಅಧಿಕಾರಿಗಳು ಪ್ರತಿಭಟನೆಕಾರರನ್ನು ಸಮಾಧಾನಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ವಾರ್ಡ್‌ನ ಸದಸ್ಯರು ಹಾಗೂ ಪಂಚಾಯತ್‌ ಅಧ್ಯಕ್ಷರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. 

ಶೀಘ್ರ ಅಭಿವೃದ್ಧಿ
ಹಿಂದೆ ಇದ್ದಂತಹ ಕಾಲುದಾರಿಯನ್ನು ವಿಸ್ತರಿಸಿದ ಹಿನ್ನೆಲೆಯಲ್ಲಿ ಅಲ್ಲಿ ಜಾಗ ಖರೀದಿಸಿದ ಖಾಸಗಿ ವ್ಯಕ್ತಿಯೋರ್ವರು ಗ್ರಾ.ಪಂ. ವಿರುದ್ಧವೇ ದಾವೆ ಹೂಡಿದ್ದರಿಂದ ಅಭಿವೃದ್ಧಿ ಸಾಧ್ಯವಾಗಿಲ್ಲ. ಶೀಘ್ರದಲ್ಲೇ ರಸ್ತೆ ಅಭಿವೃದ್ಧಿಗೆ ಕ್ರಮ ಗೊಳ್ಳಲಾಗುವುದು.
– ಸುರೇಶ್‌ ಆಳ್ವ, ಅಧ್ಯಕ್ಷ, ತಲಪಾಡಿ ಪಂಚಾಯತ್‌

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.