ಅಡ್ಡರಸ್ತೆಗಳ ಸೂಚನ ಫಲಕಗಳು ಅಡ್ಡ ಬಿದ್ದಿವೆ!


Team Udayavani, Oct 15, 2018, 10:37 AM IST

15-october-3.gif

ಮಹಾನಗರ: ಒಂದು ಕಡೆ ನಗರ ಸ್ಮಾರ್ಟ್‌ಸಿಟಿಯಾಗಿ ಪರಿವರ್ತನೆಯಾಗುತ್ತಿದೆ. ಇನ್ನೊಂದೆಡೆ, ಮಹಾನಗರಗಳಿಗೆ ಇರಲೇ ಬೇಕಾದ ಮೂಲಸೌಕರ್ಯಗಳು ಸಮರ್ಪಕವಾಗಿಲ್ಲ ಎನ್ನುವುದು ವಾಸ್ತವ. ಅದಕ್ಕೊಂದು ಉತ್ತಮ ನಿದರ್ಶನ ನಗರದ ಹಲವು ಬಡಾವಣೆಗಳಲ್ಲಿ ಅಡ್ಡಲಾಗಿ ಬಿದ್ದಿರುವ ಅಡ್ಡರಸ್ತೆ ನಾಮಫಲಕಗಳು!

ನಗರದ ಮುಖ್ಯರಸ್ತೆಗಳಿಂದ ಒಳ ರಸ್ತೆಗಳ ಕಡೆಗೆ ಸಾಗುವ ದಾರಿಯಲ್ಲಿ ಅಳವಡಿಸಲಾದ ಬಹುತೇಕ ಕಡೆಯ ಅಡ್ಡರಸ್ತೆ ಸೂಚನ ಫಲಕಗಳು ಸಮರ್ಪಕ ನಿರ್ವಹಣೆ ಇಲ್ಲದೆ ಹೆಸರಿಗಷ್ಟೇ ಇವೆ ಎಂಬಂತಾಗಿವೆ. ಇದರಿಂದ ಹೊಸದಾಗಿ ನಗರಕ್ಕೆ ಆಗಮಿಸುವ ಮಂದಿ ತಮ್ಮ ಪರಿಚಿತರು, ಸಂಬಂಧಿಕರು, ಸ್ನೇಹಿತರ ಮನೆಗಳಿಗೆ ದಾರಿ ಹುಡುಕುವುದೇ ಕಷ್ಟಕರವಾಗಿದೆ. ಈ ಬಗ್ಗೆ ಕ್ರಮ ಜರಗಿಸಬೇಕಾದ ಜನಪ್ರತಿನಿಧಿಗಳು ಹಾಗೂ ಮಹಾನಗರ ಪಾಲಿಕೆ ಮಾತ್ರ ಇತ್ತ ಗಮನಹರಿಸುತ್ತಿಲ್ಲ.

ಅಡ್ಡರಸ್ತೆ ಫಲಕದಲ್ಲಿನ ಹೆಸರೇ ಮಾಯ
ಜನರಿಗೆ ನಗರದ ವಿವಿಧ ಭಾಗಗಳಿಗೆ ದಾರಿ ತಿಳಿಸುವ ನಿಟ್ಟಿನಲ್ಲಿ ನಗರದ ಮುಖ್ಯ ಭಾಗಗಳಲ್ಲಿ ಸೂಚನ ಫಲಕಗಳನ್ನು ಕಳೆದ ಅವಧಿಯಲ್ಲಿ ಪಾಲಿಕೆ ಅಳವಡಿಸಿತ್ತು. ಆದಾದ ಬಳಿಕ ಮುಖ್ಯ ರಸ್ತೆಗಳಲ್ಲಿ ಸೂಚನ ಫಲಕಗಳ ಸಮಸ್ಯೆ ಬಗೆಹರಿಯಿತು. ಆದರೆ ಇದೀಗ ಒಳರಸ್ತೆಗಳಲ್ಲಿ ಇಂತಹದೇ ಸಮಸ್ಯೆ ಸೃಷ್ಟಿಯಾಗಿದೆ. ಕೆಲವು ಭಾಗಗಳಲ್ಲಿ ಅಡ್ಡರಸ್ತೆ ಫಲಕದ ಕಂಬಗಳು ಮಾತ್ರ ಉಳಿದಿದ್ದು, ಬರೆದ ಹೆಸರೇ ಮಾಯವಾಗಿದೆ. ಅದಕ್ಕೆ ಬಣ್ಣ ಹಚ್ಚಿ ಯಾವ ಕಡೆ ರಸ್ತೆ ಸಾಗುತ್ತದೆ ಎಂಬುದರ ಕುರಿತು ಬರೆಯಬೇಕಾದ ಆವಶ್ಯಕತೆ ಇದೆ.

ಅಡ್ಡ ಬಿದ್ದಿವೆ ಅಡ್ಡರಸ್ತೆ ಫಲಕ
ಕೆಲವು ಭಾಗಗಳಲ್ಲಿ ಅಡ್ಡ ರಸ್ತೆ ಸೂಚನ ಫಲಕ ಬುಡ ಸಮೇತ ಧರೆಗುರುಳಿದೆ. ಅಪಘಾತ ಅಥವಾ ಇನ್ಯಾವುದೋ ಕಾರಣಗಳಿಂದಾಗಿ ಅಡ್ಡರಸ್ತೆ ಕಂಬಗಳು ಬೀಳುತ್ತಿದೆ. ಇದಕ್ಕೆ ಕಾರಣರಾದ ವ್ಯಕ್ತಿಗಳು ಈ ಬಗ್ಗೆ ಕ್ಯಾರೇ ಅನ್ನದೇ ಹೋಗುತ್ತಿದ್ದಾರೆ. ಆ ಬಳಿಕ ಸೂಚನ ಫಲಕದ ಕಾಮಗಾರಿ ಮಾಡುವ ಬಗ್ಗೆ ಪಾಲಿಕೆಯು ಆಸಕ್ತಿ ತೋರುತ್ತಿಲ್ಲ. 

ಅಡ್ಡ ಫಲಕಗಳ ಮೇಲೆ ಜಾಹೀರಾತು ಮಹಿಮೆ
ಅಡ್ಡರಸ್ತೆಗಳ ಫಲಕಗಳ ಮೇಲೆ ದಾರಿ ಬಗ್ಗೆ ಮಾಹಿತಿ ನೀಡುವ ಬರೆಹಗಳು ಮಾಯ, ಒಂದುವೇಳೆ, ಜನರ ಉಪಯೋಗಕ್ಕಾಗಿ ಅಡ್ಡರಸ್ತೆ ನಾಮ ಫಲಕಗಳನ್ನು ಹಾಕಿದರೆ ಅವುಗಳ ಮೇಲೆಯೇ ಜಾಹೀರಾತು ಪೋಸ್ಟರ್‌ಗಳು ರಾರಾಜಿಸುತ್ತಿವೆ. ಇಂತಹ ಜಾಹೀರಾತುದಾರರ ಮೇಲೆ ಇನ್ನಾದರೂ ಕ್ರಮ ಜರಗಿಸಬೇಕಾದ್ದು ಪಾಲಿಕೆಯ ಜವಾಬ್ದಾರಿ.

ನಿರ್ವಹಣೆ ಮರೀಚಿಕೆ
ಬಹುತೇಕ ಒಳರಸ್ತೆಗಳ ಫಲಕಗಳು ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದೆ. ಈ ಬಗ್ಗೆ ಪಾಲಿಕೆಯ ಗಮನ ಸೆಳೆಯಲು ಆ ವ್ಯಾಪ್ತಿಯ ಜನರು ಆಸಕ್ತಿ ಇರುವುದಿಲ್ಲ. ಯಾಕೆಂದರೆ ಅವರಿಗೆ ರಸ್ತೆಯ ಬಗ್ಗೆ ಮೊದಲೇ ಮಾಹಿತಿ ಇರುತ್ತದೆ. ಆದರೆ ಹೊರ ಭಾಗಗಳಿಂದ ಬರುವ ಜನರಿಗೆ ಅಡ್ಡರಸ್ತೆಗಳ ಫಲಕಗಳು ಹೆಚ್ಚು ಸಹಕಾರಿಯಾಗುತ್ತದೆ. ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಗಮನ ಹರಿಸಬೇಕಾದ ಆವಶ್ಯಕತೆ ಇದೆ.

ನಾಮಫಲಕ ಗುರುತಿಸಲು ಕ್ರಮ
ನಗರದ ವಿವಿಧ ಭಾಗಗಳ ಅಡ್ಡರಸ್ತೆಗಳ ಫಲಕಗಳಲ್ಲಿ ಶಿಥಿಲಾವಾಸ್ಥೆಯಲ್ಲಿರುವ ಫಲಕಗಳನ್ನು ಗುರುತಿಸಿ ಕೂಡಲೇ ಆ ಬಗ್ಗೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು.
ಶಶಿಧರ್‌ ಹೆಗ್ಡೆ, ಮನಪಾ
   ಮುಖ್ಯ ಸಚೇತಕರು

ಪ್ರಜ್ಞಾ ಶೆಟ್ಟಿ 

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.