ತುಳುವರಿಂದ ತುಳು ತೃತೀಯ ಭಾಷೆಗೆ ಮಹತ್ವ

ಭಾಷೆಯ ರಾಯಭಾರಿಗಳಾಗಿದ್ದಾರೆ 2,600 ವಿದ್ಯಾರ್ಥಿಗಳು

Team Udayavani, Jul 29, 2019, 12:35 PM IST

tulu

ಬೆಳ್ತಂಗಡಿ: ಕರಾವಳಿಯಲ್ಲಿ ತುಳುವನ್ನು ತೃತೀಯ ಭಾಷೆಯಾಗಿ ಆಯ್ದುಕೊಂಡು ಕಲಿಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.

2018-19ನೇ ಸಾಲಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಗಳ ಒಟ್ಟು 41 ಶಾಲೆಗಳಿಂದ 618 ಮಂದಿ ಎಸೆಸೆಲ್ಸಿಯಲ್ಲಿ ತೃತೀಯ ಭಾಷೆಯಾಗಿ ತುಳು ಕಲಿತಿ
ದ್ದರೆ ಪ್ರಸಕ್ತ 42 ಶಾಲೆಗಳಿಂದ 956 ಮಂದಿ ಕಲಿಯುತ್ತಿದ್ದಾರೆ. 6ರಿಂದ 10ನೇ ತರಗತಿವರೆಗೆ ಒಟ್ಟಾರೆಯಾಗಿ ಪುತ್ತೂರು ತಾಲೂಕು 1,219 ಮಕ್ಕಳನ್ನು
ಹೊಂದಿದ್ದು, ಗರಿಷ್ಠ ಮಕ್ಕಳ ಹೆಗ್ಗಳಿಕೆ ಹೊಂದಿದೆ. ಬೆಳ್ತಂಗಡಿ 670, ಉಡುಪಿ 205, ಮಂಗಳೂರು 187, ಸುಳ್ಯ 176, ಬಂಟ್ವಾಳದಲ್ಲಿ 143 ವಿದ್ಯಾರ್ಥಿಗಳಿದ್ದು, ಒಟ್ಟು ಈ ಬಾರಿ 2,600 ಮಂದಿ ವ್ಯಾಸಂಗ ಮಾಡುತ್ತಿದ್ದಾರೆ.

18ರಿಂದ 660ಕ್ಕೆ
ತೃತೀಯ ಭಾಷೆಗೆ 2014-15ರ ಪ್ರಥಮ ಬ್ಯಾಚ್‌ನಲ್ಲಿ 18 ಮಂದಿ ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದರು. 2016-17ರಲ್ಲಿ 12 ಶಾಲೆಗಳಿಂದ 283, 2017-18ನೇ ಸಾಲಿನಲ್ಲಿ 22 ಶಾಲೆಗಳಿಂದ 417 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕಳೆದ ಸಾಲಿನಲ್ಲಿ 618 ವಿದ್ಯಾರ್ಥಿಗಳು ಪರೀಕ್ಷೆ ಎದುರಿ ಸಿದ್ದು, 71 ವಿದ್ಯಾರ್ಥಿಗಳು ಶೇ.100 ಫಲಿತಾಂಶ ಪಡೆದಿದ್ದಾರೆ. ಪ್ರಸಕ್ತ 956 ಮಂದಿ ಇದ್ದಾರೆ. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡಿರುವುದು ಅಕಾಡೆಮಿಗೆ ಮತ್ತಷ್ಟು ಗರಿ ಬಂದಿದೆ.

ಒಟ್ಟು 2,600 ವಿದ್ಯಾರ್ಥಿಗಳು
ಉಭಯ ಜಿಲ್ಲೆಗಳಲ್ಲಿ ಪ್ರಸ್ತುತ 41 ಶಾಲೆಗಳಲ್ಲಿ 6ರಿಂದ 10ನೇ ತರಗತಿಯ ವರೆಗೆ 2,600 ವಿದ್ಯಾರ್ಥಿಗಳು ತುಳು ಕಲಿಯುತ್ತಿದ್ದಾರೆ. 6ರಲ್ಲಿ 125, 7ರಲ್ಲಿ 121, 8ರಲ್ಲಿ 481, 9ರಲ್ಲಿ 917 ಮತ್ತು 10ನೇ ತರಗತಿಯಲ್ಲಿ 956 ವಿದ್ಯಾರ್ಥಿಗಳಿದ್ದಾರೆ. ಶಾಲೆವಾರು 6ರಿಂದ 10ರ ವರೆಗಿನ ಅಂಕಿಅಂಶ ಪರಿಗಣಿಸಿದರೆ ಬೆಳ್ತಂಗಡಿ ತಾಲೂಕಿನ ವೇಣೂರು ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ 161 ವಿದ್ಯಾರ್ಥಿಗಳನ್ನು ನೀಡಿ ಪ್ರಥಮ ಸ್ಥಾನದಲ್ಲಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಉನ್ನತೀಕರಿಸಿದ ಪ್ರೌಢಶಾಲೆ 161 ವಿದ್ಯಾರ್ಥಿಗಳನ್ನು ಹೊಂದಿದ್ದು, ಉಪ್ಪಿನಂಗಡಿ ಪದವಿಪೂರ್ವ ಕಾಲೇಜು ವಿಭಾಗದ ಸರಕಾರಿ ಹಿ.ರಿಯ ಪ್ರಾಥಮಿಕ ಶಾಲೆ 154 ಮಕ್ಕಳನ್ನು ಹೊಂದಿದೆ. ಕಳೆದ ವರ್ಷ ಈ ಶಾಲೆ ಮೊದಲ ಸ್ಥಾನದಲ್ಲಿತ್ತು.

ಎರಡು ಪದವಿ ಕಾಲೇಜುಗಳಲ್ಲಿ ಐಚ್ಛಿಕ ಭಾಷೆ
ಮಂಗಳೂರು ವಿವಿಯ ಪದವಿ ಕಾಲೇಜುಗಳಲ್ಲಿ ಈ ಬಾರಿ ಐಚ್ಛಿಕ ಭಾಷೆಯಾಗಿ ತುಳುವೂ ಇದೆ. ನಾಲ್ಕೈದು ಕಾಲೇಜುಗಳು ಪ್ರಸ್ತಾವನೆ ಸಲ್ಲಿಸಿದ್ದರೂ ಎರಡು ಕಾಲೇಜುಗಳಲ್ಲಿ ಮಾತ್ರ ಆರಂಭಿಸಲಾಗಿದೆ. ಮಂಗಳೂರಿನ ಕಾರ್‌ಸ್ಟ್ರೀಟ್‌ ಪದವಿ ಕಾಲೇಜಿನ ಪ್ರಥಮ ವರ್ಷದಲ್ಲಿ 40 ಮತ್ತು ಆಳ್ವಾಸ್‌ ಕಾಲೇಜಿನಲ್ಲಿ 50 ವಿದ್ಯಾರ್ಥಿಗಳಿದ್ದಾರೆ.

ತುಳು ಭಾಷೆ ಕಲಿತು ಓದಿ, ವ್ಯವಹಾರ ಯೋಗ್ಯ ವಾತಾವರಣ ನಿರ್ಮಿಸಲು ತುಳು ಅಕಾಡೆಮಿ ಎಲ್ಲ ರೀತಿಯಲ್ಲೂ ಅವಕಾಶ ಕಲ್ಪಿಸಿದೆ. ಪ್ರತಿ ವರ್ಷ ಮಕ್ಕಳ ಸಂಖ್ಯೆ ಪ್ರಗತಿಯಲ್ಲಿರುವುದು ತುಳು ಭಾಷೆಯ ಬಗೆಗಿನ ಕಾಳಜಿ ಅವರಲ್ಲಿರುವುದು ವ್ಯಕ್ತವಾಗುತ್ತಿದೆ.
– ಎ.ಸಿ. ಭಂಡಾರಿ, ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ

ಪದವಿಯಲ್ಲಿ ಐಚ್ಛಿಕ ಭಾಷೆಯಾಗಿ ಗುರುತಿಸಿಕೊಂಡಿರುವ ತುಳು ಮುಂದಿನ ವರ್ಷ ಐಚ್ಛಿಕ ವಿಷಯವಾಗಿಸುವ ಸಿದ್ಧತೆ ಕೈಗೊಳ್ಳಲಾಗಿದೆ. ಪಿಯುಸಿಯಲ್ಲೂ ತುಳು ಭಾಷೆಯನ್ನು ತರುವ ದೃಷ್ಟಿಯಿಂದ ತಜ್ಞರ ಜತೆ ಪಠ್ಯ ಪುಸ್ತಕ ಸಿದ್ಧಗೊಳಿಸುವ ವಿಚಾರ ಪ್ರಸ್ತಾವನೆಯಲ್ಲಿದೆ.
– ಬಿ. ಚಂದ್ರಹಾಸ ರೈ, ರಿಜಿಸ್ಟ್ರಾರ್‌, ತುಳು ಸಾಹಿತ್ಯ ಅಕಾಡೆಮಿ

ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.