ವಿಟ್ಲ ಠಾಣೆಯಲ್ಲಿ ನಡೆಯಿತು ಅದ್ಧೂರಿ ಸೀಮಂತ..!
Team Udayavani, Sep 10, 2019, 7:46 PM IST
ವಿಟ್ಲ :ತುಳುನಾಡ ಕಟ್ಟು ಕಟ್ಟಳೆಗಳಲ್ಲಿ ಸೀಮಂತ ಕೂಡಾ ಒಂದು. ಮದುವೆಯಾದ ಹೆಣ್ಮಗಳು ಗರ್ಭಿಣಿಯಾದ ಏಳನೇ ತಿಂಗಳಲ್ಲಿ ಸೀಮಂತ ಹಾಕುವ ಕ್ರಮವಿದೆ. ಇಂತಹುದೇ ಒಂದು ಸೀಮಂತ ವಿಟ್ಲ ಪೊಲೀಸ್ ಠಾಣೆಯಲ್ಲಿ ಅದ್ಧೂರಿಯಾಗಿಯೇ ನಡೆಯಿತು. ಅಂದ ಹಾಗೆ ಸೀಮಂತದ ನಾಯಕಿ ಬೇರಾರೂ ಅಲ್ಲ..! ವಿಟ್ಲ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷದಿಂದ ಹೋಮ್ ಗಾರ್ಡ್ ಸಿಬ್ಬಂದಿ ಆಗಿರುವ ಪ್ರಸ್ತುತ ತುಂಬು ಗರ್ಬಿಣಿ ಶ್ರೀಮತಿ ಮಲ್ಲಿಕಾ ಅವರು. ಕೊಡಂಗಾಯಿ ಪಳ್ಳಿಗದ್ದೆ ಕೊರಗಪ್ಪ ಗೌಡ ಇಂದಿರಾ ದಂಪತಿ ಪುತ್ರಿಯಾಗಿರುವ ಮಲ್ಲಿಕಾ ಅವರನ್ನು ಪುತ್ತೂರು ಕೆಮ್ಮಾಯಿಯ ಕೇಶವರಿಗೆ ವಿವಾಹ ಮಾಡಿಕೊಡಲಾಗಿತ್ತು. ಗಂಡನ ಮನೆಯಲ್ಲಿ ಕಳೆದ ತಿಂಗಳೇ ಸೀಮಂತವಾಗಿತ್ತು. ಆದರೆ ವಿಟ್ಲ ಪೊಲೀಸರು ತುಂಬು ಗರ್ಬಿಣಿ ಮಲ್ಲಿಕಾರಿಗೆ ಠಾಣೆಯಲ್ಲೇ ಸೀಮಂತ ಮಾಡುವ ಮೂಲಕ ವೈಶಿಷ್ಟ್ಯತೆ ಮೆರೆದಿದ್ದಾರೆ.
ವಿಟ್ಲ ಠಾಣಾಧಿಕಾರಿ ಯಲ್ಲಪ್ಪ ಹಾಗೂ ಸಿಬ್ಬಂದಿಗಳು ಮಲ್ಲಿಕಾ ಅವರಿಗೆ ಅದ್ದೂರಿ ಸೀಮಂತ ಮಾಡಿಸಿದರು. ಮಹಿಳಾ ಪೊಲೀಸರು ಹಣೆಗೆ ಕುಂಕುಮದ ತಿಲಕವಿಟ್ಟು ತಲೆಗೆ ಚೆಂಡು ಮಲ್ಲಿಗೆ ತೊಡಿಸಿದರು. ಹೂವು ಸೀರೆ ಕೊಟ್ಟರು. ಎಲೆ ಅಡಿಕೆಯನ್ನು ಕೈಗೆ ನೀಡಿದರು. ಸಿಹಿ ವಿತರಿಸಿದರು. ಗೌಜಿಯ ಸೀಮಂತಕ್ಕೆ ಠಾಣೆ ಸಾಕ್ಷಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ