ಕ್ರಮಬದ್ಧವಲ್ಲದ ಆಸ್ತಿ: ವಿನಾಯಿತಿ ಮೂಲಕ ಸಿಗಲಿದೆ 9/11


Team Udayavani, Nov 16, 2018, 10:45 AM IST

site.jpg

ಮಂಗಳೂರು: ಗ್ರಾಮ ಪಂಚಾಯತ್‌ಗಳು ನೀಡಿರುವ ಲೈಸನ್ಸ್‌ ಪಡೆದು ಖಾಯಂ ಆಗಿ ಈಗಾಗಲೇ ಮನೆ ನಿರ್ಮಿಸಿಕೊಂಡಿರುವ ಆಸ್ತಿಗಳಿಗೆ ಒಂದು ಬಾರಿಗೆ ಏಕನಿವೇಶನ ನಕ್ಷೆ ಅನುಮೋದನೆಯಿಂದ ವಿನಾಯಿತಿ ನೀಡಿ ನಮೂನೆ 9 ಹಾಗೂ 11ಎ ವಿತರಿಸಲು ಸರಕಾರ ತೀರ್ಮಾನಿಸಿದೆ. ಇದರಿಂದಾಗಿ ಕರಾವಳಿ ಭಾಗದಲ್ಲಿ 9/11ಗಾಗಿ ಕಾದಿರುವ ಸಾವಿರಾರು ಜನರಿಗೆ ಲಾಭವಾಗುವ ನಿರೀಕ್ಷೆಯಿದೆ. 

2013ರ ಜೂ.14ಕ್ಕಿಂತ ಹಿಂದೆ ಸೃಷ್ಟಿಯಾಗಿರುವ ಮತ್ತು ಖಾಯಂ ಆಗಿ ಈಗಾಗಲೇ ಮನೆ ನಿರ್ಮಾಣ ಆಗಿರುವ ಆಸ್ತಿಗಳನ್ನು ಹೊಸ ಆಸ್ತಿಗಳ ವರ್ಗಿಕರಣದಡಿ ಗುರುತಿಸಲು, ಈ ಆಸ್ತಿಗಳಿಗೆ ಸಂಬಂಧಿಸಿದಂತೆ ಗ್ರಾ.ಪಂ.ಗಳು ನೀಡಿರುವ ಲೈಸೆನ್ಸ್‌ ಪ್ರತಿ ಅಪ್‌ಲೋಡ್‌ ಮಾಡಲು ಹಾಗೂ ಇಂತಹ ಆಸ್ತಿಗಳಿಗೆ ಈಗಾಗಲೇ ನೀಡಿರುವ ನಮೂನೆ 11ಬಿಗಳನ್ನು ನಮೂನೆ-9 ಆಗಿ ಪರಿವರ್ತಿಸಿ ಹೊಸ ಆಸ್ತಿಗಳ ವರ್ಗಿàಕರಣದಡಿ ಸೇರಿಸಲು ಇ-ಸ್ವತ್ತು ತಂತ್ರಾಂಶದಲ್ಲಿ ತುರ್ತಾಗಿ ಬದಲಾವಣೆ ಮಾಡಬೇಕು ಎಂದು ಸರಕಾರ ತೀರ್ಮಾನಿಸಿತ್ತು. ಇದರಂತೆ ಗ್ರಾ.ಪಂ. ವ್ಯಾಪ್ತಿಯ ಆಸ್ತಿಗಳಿಗೆ ಸಂಬಂಧಿಸಿ ಇ-ಸ್ವತ್ತು ತಂತ್ರಾಂಶದ ಮೂಲಕ ಬದಲಾವಣೆ ಮಾಡಿ ನಮೂನೆ 9 ಹಾಗೂ 11ಎ ನೀಡುವಂತೆ ಈಗ ಆದೇಶಿಸಲಾಗಿದೆ. 

2013ಕ್ಕಿಂತ ಹಿಂದೆ ಕಟ್ಟಡವಿದ್ದ ಜಾಗಕ್ಕೆ 9/11 ನೀಡಲು ಆಗುತ್ತಿರಲಿಲ್ಲ. ಅದನ್ನು ಏಕ ನಿವೇಶನ ಮಂಜೂರಾತಿ ಮಾಡಲೂ ಆಗುತ್ತಿರಲಿಲ್ಲ. ಕಟ್ಟಡವಿರುವ ಕಾರಣ ನೀಡಿ ಮುಡಾ, ನಗರ ಹಾಗೂ ಗ್ರಾಮಾಂತರ ಇಲಾಖೆ ಇಂತಹವಕ್ಕೆ 9/11 ನೀಡಲು ಸಾಧ್ಯವಿಲ್ಲ ಎಂದು ಹಿಂಬರಹ ನೀಡುತ್ತಿತ್ತು. ಹೀಗಾಗಿ ಅಂಥವರಿಗೆ 11ಬಿಯನ್ನೇ ನೀಡಲಾಗುತ್ತಿತ್ತು. ಆ ಭೂಮಿ ಬಗ್ಗೆ ಎಲ್ಲ ದಾಖಲೆ ಗಳು ಇದ್ದರೂ 9/11 ಸಿಗುತ್ತಿರಲಿಲ್ಲ. 11ಬಿ ಇದ್ದವರಿಗೆ ಹಿಂದೆ ಬ್ಯಾಂಕ್‌ ಸಾಲ ಸಿಗುತ್ತಿತ್ತಾದರೂ “ಕಾವೇರಿ’ ಸಾಫ್ಟ್ವೇರ್‌ನಲ್ಲಿ ಬದಲಾವಣೆ ತಂದ ಬಳಿಕ ಅದಕ್ಕೆ ಮಾನ್ಯತೆ ಇಲ್ಲವಾಗಿತ್ತು.

ಇದಕ್ಕಾಗಿ ಸಂಬಂಧಿತ ಭೂಮಿ/ಕಟ್ಟಡದ ವ್ಯಕ್ತಿಯ ಎಲ್ಲ ದಾಖಲೆಗಳನ್ನು ಗ್ರಾ.ಪಂ.ಗೆ ನೀಡಿ 9/11 ಮಾಡಲು ಅವಕಾಶ ಕಲ್ಪಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ 11ಬಿ ಪಡೆದವರು ಏಕ ನಿವೇಶನ ಅನುಮೋದನೆಯಿಲ್ಲದೆ 9/11 ಪಡೆಯಲು ಅವಕಾಶವಿದೆ ಎನ್ನಲಾಗಿದೆ.

ದ.ಕ., ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ “ಇ-ಸ್ವತ್ತು’ ಹಾಗೂ “ಕಾವೇರಿ’ ತಂತ್ರಾಂಶಗಳು ಡಿಲಿಂಕ್‌ ಆದಾಗಿನಿಂದ ಲಿಂಕ್‌ ಆಗುವ ನಡುವೆ ನೋಂದಣಿಯಾದ ಆಸ್ತಿಗಳಿಗೆ ಸಂಬಂಧಿಸಿ ಕ್ರಮ ಕೈಗೊಳ್ಳುವಂತೆ ಸರಕಾರ ಆಗಿಂದಾಗ್ಗೆ ಸೂಚನೆ- ನಿರ್ದೇಶನ ನೀಡುತ್ತಲೇ ಬಂದಿದೆ. ಆದರೆ ಜನರ ಸಮಸ್ಯೆಗಳು ಪರಿಹಾರ ಕಾಣುತ್ತಲೇ ಇಲ್ಲ. ಸರಕಾರದಿಂದ ತಿಂಗಳಿಗೊಂದು ಆದೇಶ/ ಸುತ್ತೋಲೆ ಬಂದ ಮಾತ್ರಕ್ಕೆ ವ್ಯವಸ್ಥೆ ಸರಿಯಾಗು ವುದಿಲ್ಲ. ಗ್ರಾಮಾಂತರ ಜನರ ನೈಜ ಸಮಸ್ಯೆ ಯಾರೂ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಬೆಳ್ತಂಗಡಿಯ ಕೃಷಿಕ ತಮ್ಮಣ್ಣ ಅಭಿಪ್ರಾಯಪಡುತ್ತಾರೆ.

ಪರಿಶೀಲಿಸಿ ಕ್ರಮ
ಗ್ರಾ.ಪಂ. ವ್ಯಾಪ್ತಿಯ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಸ್ವತ್ತು ತಂತ್ರಾಂಶದಲ್ಲಿ ಸರಕಾರ ಬದಲಾವಣೆ ಸೂಚಿಸಿದೆ. ದ.ಕ. ಜಿಲ್ಲೆಯಲ್ಲಿ ಬಾಕಿ ಇರುವ ಅರ್ಜಿ ಪರಿಶೀಲಿಸಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು.
ಡಾ| ಸೆಲ್ವಮಣಿ ಆರ್‌.  ಜಿ.ಪಂ. ಸಿಇಒ, ದ.ಕ.
 
ದಿನೇಶ್‌ ಇರಾ

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.