ಅತಂತ್ರ ಸ್ಥಿತಿಯಲ್ಲಿ ಬಾರ್ಜ್;10 ದಿನವಾದರೂ ತೆರವಾಗಿಲ್ಲ
Team Udayavani, Jun 13, 2017, 1:48 PM IST
ಉಳ್ಳಾಲ: ಮೊಗವೀರಪಟ್ಣದ ಸಮುದ್ರದಲ್ಲಿ ಕಡಲ್ಕೊರೆತ ಶಾಶ್ವತ ಕಾಮಗಾರಿ ನಡೆಸಲು ತರಲಾಗಿದ್ದ ಬಾರ್ಜ್ ಅವಘಡಕ್ಕೀಡಾಗಿ ಮುಳುಗಡೆ ಸ್ಥಿತಿಯಲ್ಲಿದ್ದು ದಿನ 10 ಕಳೆದರೂ ಬಾರ್ಜ್ನ ತೆರವು ಸೇರಿದಂತೆ, ತೈಲ ತೆರವಿಗೆ ಸಂಬಂಧಿಸಿದಂತೆ ಈ ವರೆಗೆ ಯಾವುದೇ ಪ್ರಗತಿ ಕಂಡು ಬಂದಿಲ್ಲ. ಈ ನಡುವೆ ಬೃಹತ್ ಅಲೆಗಳಿಗೆ ಸಿಲುಕಿ ಬಾರ್ಜ್ನೊಂದಿಗೆ ತೈಲವೂ ಸಮುದ್ರ ಪಾಲಾಗುವ ಭೀತಿಯಲ್ಲಿದೆ.
ಮೊಗವೀರಪಟ್ಣದ ಸಮುದ್ರದ ದಡದಿಂದ ಸುಮಾರು 700 ಮೀಟರ್ ದೂರದ ಸಮುದ್ರದಲ್ಲಿ ರೀಫ್ ಕಾಮಗಾರಿ ನಡೆಸಿದ ಬಳಿಕ ಬಾರ್ಜ್ ಬೇರೆ ಕಡೆ ಸ್ಥಳಾಂತರಿಸುತ್ತಿದ್ದಾಗ ಅವಘಡಕ್ಕೀಡಾಗಿ ಕಡಲ್ಕೊರೆತದ ಶಾಶ್ವತ ಕಾಮಗಾರಿಯ ತಡೆದಂಡೆಗೆ ಬಡಿದು ಮುಕ್ಕಾಲಂಶ ಮುಳುಗಿ ನಿಂತಿದೆ. ಕಳೆದ 6 ದಿನಗಳಲ್ಲಿ ಹಂತ ಹಂತವಾಗಿ ಮುಳುಗುತ್ತಿದ್ದ ಬಾರ್ಜ್ ನಾಲ್ಕು ದಿನಗಳಿಂದ ಮುಳುಗದಿದ್ದರೂ ಬಾರ್ಜ್ನ ಕ್ಯಾಬಿನ್ಗಳು, ಕ್ರೈನ್ ಸಹಿತ ಬೆಲೆಬಾಳುವ ವಸ್ತುಗಳು ಸಮುದ್ರದ ಅಲೆಗಳಿಗೆ ಸಿಲುಕಿ ಸಮುದ್ರ ಪಾಲಾಗುತ್ತಿವೆ. ಬಾರ್ಜ್ ನಿರ್ವಹಣೆ ನಡೆಸುತ್ತಿರುವ ಸಂಸ್ಥೆ ಕಳೆದ ಎರಡು ದಿನಗಳ ಹಿಂದಿನವರೆಗೆ ಬಾರ್ಜ್ ಮತ್ತು ಅದರೊಳಗಿರುವ ತೈಲವನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನ ವಿಫಲವಾಗಿತ್ತು.
ಸಮುದ್ರದ ರೌದ್ರಾವತಾರ ಪ್ರಾರಂಭಗೊಂಡಿಲ್ಲ
ಮಳೆಗಾಲ ಪ್ರಾರಂಭವಾಗಿದ್ದರೂ ಸಮುದ್ರದ ಬಿರುಸು ಇನ್ನೂ ಎಂದಿನ ಮಟ್ಟಕ್ಕೆ ತಲುಪಿಲ್ಲ. ಈಗ ಸಮುದ್ರ ಶೇ. 10ರಷ್ಟು ಮಾತ್ರ ಬಿರುಸು ಪಡೆದುಕೊಂಡಿದ್ದು ಮುಂದಿನ ದಿನಗಳಲ್ಲಿ ಇದಕ್ಕಿಂತ 10 ಪಟ್ಟು ಹೆಚ್ಚು ಬಿರುಸುಗೊಳ್ಳುವುದು ಸಾಮಾನ್ಯ. ಆ ಸಂದರ್ಭದಲ್ಲಿ ಬಾರ್ಜ್ ಸಂಪೂರ್ಣ ಮುಳುಗುವುದು ಖಚಿತ ಎನ್ನುತ್ತಾರೆ ಸ್ಥಳೀಯ ಮೀನುಗಾರರಾಗಿರುವ ವಾಸುದೇವ ಬಂಗೇರ. ಈಗ ಸಮುದ್ರದ ಅಲೆಗಳು ಸಣ್ಣ ಮಟ್ಟದಲ್ಲಿ ಏಳುತ್ತಿದ್ದು, ಮುಂದಿನ ಎರಡು ತಿಂಗಳು ಹಂತ ಹಂತವಾಗಿ ಸಮುದ್ರ ಬಿರುಸುಗೊಳ್ಳಲಿದ್ದು, ಆ ಸಂದರ್ಭದಲ್ಲಿ ಈಗಿರುವ ಬಾರ್ಜ್ನ ಎತ್ತರದಲ್ಲಿ ಅಲೆಗಳು ದಡಕ್ಕೆ ಅಪ್ಪಳಿಸುತ್ತವೆ. ಈ ಸಂದರ್ಭ ಬಾರ್ಜ್ನೊಂದಿಗೆ ತೈಲವೂ ಸಮುದ್ರ ಪಾಲಾಗುವ ಭೀತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್