ಮರೆಯಾದ ಆಹಾರ ಪದ್ಧತಿಗೆ ಮರುಜೀವ: ಶ್ರದ್ಧಾ ಅಮಿತ್‌

ಸಿರಿಧಾನ್ಯ ಕೆಫೆ ಉದ್ಘಾಟನೆ

Team Udayavani, May 27, 2019, 11:41 AM IST

siri

ಬೆಳ್ತಂಗಡಿ: ಪಾಶ್ಚಾತ್ಯ ಆಹಾರಗಳಿಗೆ ಮಾರುಹೊಗಿ ಭಾರತೀಯ ಆಹಾರ ಸಂಸ್ಕೃತಿಯನ್ನು ಜನ ತಿರಸ್ಕಾರ ಭಾವದಿಂದ ಕಾಣುತ್ತಿರುವುದು ವಿಷಾದ‌ ನೀಯ. ಈ ನಿಟ್ಟಿನಲ್ಲಿ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಮರೆಯಾದ ನಮ್ಮ ಪಾರಂಪರಿಕ ಆಹಾರ ಪದ್ಧತಿಗೆ ಮರು ಜೀವ ನೀಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಟ್ರಸ್ಟಿ ಶ್ರದ್ಧಾ ಅಮಿತ್‌ ಹೇಳಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ವತಿಯಿಂದ ಲಾೖಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಆವರಣದಲ್ಲಿ ರವಿವಾರ ಸಿರಿಧಾನ್ಯ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಆಹಾರ ಕ್ರಮ ಅನುಸರಿಸಲು ಈಗಿನ ತಾಯಂದಿರು ಪೌಷ್ಟಿಕಾಂಶದ ಪಟ್ಟಿಯನ್ನೇ ಸಿದ್ಧಪಡಿ ಸಿರುತ್ತಾರೆ. ಆದರೂ ಸಣ್ಣ ವಯಸ್ಸಲ್ಲೇ ಆರೋಗ್ಯ ಹದ ಗೆಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇದಕ್ಕೆ ಮೂಲ ಕಾರಣ ನಮ್ಮ ಹಿರಿಯರು ಅನುಸರಿಸುತ್ತಿದ್ದ ಆಹಾರ ಪದ್ಧತಿಯ ಬಗೆಗಿನ ನಿರ್ಲಕ್ಷ. ಭಾರತೀಯರ ಮೂಲ ಆಹಾರ ಪರಂಪರೆಯನ್ನು ಮುಂದಿನ ಜನಾಂಗಕ್ಕೆ ಪರಿಚಯಿಸುವ ಕೆಲಸ ನಮ್ಮೆಲ್ಲರಿಂದಾಗಬೇಕು. ಹಬ್ಬ ಹರಿದಿನಗಳಲ್ಲಿ ಬಳಸುವ ಆಹಾರ ಅನುಸರಣೆಯೊಂದಿಗೆ ಮರುಬಳಕೆಯಾಗಲಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋ ದ್ಯೋಗ ಸಂಸ್ಥೆ ಆಡಳಿತ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ಮಾತನಾಡಿ, ಜಿಲ್ಲೆಯಲ್ಲಿ ಸಿರಿಧಾನ್ಯಗಳ ಪರಿಚಯವಿರುವುದರಿಂದ ಸಿರಿ ಧಾನ್ಯ ಕೆಫೆ ಪ್ರಾರಂಭಿಸಲಾಗಿದೆ. ಅತ್ಯಂತ ಪೌಷ್ಟಿಕತೆ ಕೂಡಿ ರುವುದರಿಂದ ಆರೋಗ್ಯ ವೃದ್ಧಿಗೆ ಸಹಕಾರಿ. ಈಗಾಗಲೇ ಧರ್ಮಸ್ಥಳ ಸಂಸ್ಥೆ 2 ಕೋಟಿ ರೂ.ಗೂ ಹೆಚ್ಚು ಸಿರಿಧಾನ್ಯ ಸಂಸ್ಕರಣೆ, ಲ್ಯಾಬೋರೆಟರಿ ಅಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಿದೆೆ. ಸಿರಿಧಾನ್ಯ ಬಳಕೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಸಿರಿಧಾನ್ಯ ಆಹಾರ ತಜ್ಞೆ ಡಾ| ಶಕುಂತಲಾ ಸವದತ್ತಿ/ಮಾಸೂರು ಹಾಗೂ ಸಾವಯವ ಕೃಷಿಕ ಭದ್ರಾವತಿಯ ಈಶ್ವರನ್‌ ಪಿ. ತೀರ್ಥ ಅವರು ಸಿರಿ ಧಾನ್ಯ ಬಳಕೆಯ ಲಾಭ ಹಾಗೂ ಪ್ರಯೋಜನ ಕುರಿತು ಮಾಹಿತಿ ನೀಡಿದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್‌. ಪ್ರಭಾಕರ್‌, ಕಾರ್ಯದರ್ಶಿ ಬಿ. ಯಶೋವರ್ಮ, ಸೋನಿಯಾ ವರ್ಮ, ಗ್ರಾಮೀಣ ಶ್ರೇಷ್ಠತಾ ಕೇಂದ್ರದ ನಿರ್ದೇಶಕ ಬೂದಪ್ಪ ಗೌಡ, ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕಿ ಮಮತಾ ರಾವ್‌, ಜನಜಾಗೃತಿ ವೇದಿಕೆ ಸ್ಥಾಪಕ ಅಧ್ಯಕ್ಷ ವಸಂತ ಸಾಲ್ಯಾನ್‌, ಹಿರಿಯ ಮಾರುಕಟ್ಟೆ ಪ್ರಬಂಧಕ ಸುಧಾಕರ್‌, ಯೋಜನಾಧಿಕಾರಿಗಳು, ಮೇಲ್ವಿಚಾರಕರು ಉಪಸ್ಥಿತರಿದ್ದರು. ಸಿರಿ ಸಂಸ್ಥೆ ನಿರ್ದೇಶಕಿ ಮನೋರಮಾ ಭಟ್‌ ಸ್ವಾಗತಿಸಿದರು. ಸಿರಿ ಸಂಸ್ಥೆ ಯೋಜನಾಧಿಕಾರಿ ರೋಹಿತಾಕ್ಷ ವಂದಿಸಿದರು. ರಾಮ್‌ ಕುಮಾರ್‌ ನಿರೂಪಿಸಿದರು.

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.