ಸೀತಾರಾಮ ಕುಮಾರ್ ಕಟೀಲು ಅಭಿನಂದನ ಸಮಿತಿ ರಚನಾ ಸಭೆ
Team Udayavani, Aug 18, 2017, 7:05 AM IST
ಪೆರ್ಮುದೆ: “ಕಲೆಗೆ ಬೆಲೆ ಬರುವುದು ಕಲಾವಿದನಿಂದ. ಅಂತಹ ಕಲಾವಿದನಿಗೆ ಮೌಲ್ಯ ತುಂಬುವ ಕೆಲಸ ಕಲಾಭಿಮಾನಿಗಳಿಂದ ಆಗಬೇಕು. ಅಪತ್ರಿಮ ಯಕ್ಷಗಾನ ಹಾಸ್ಯ ಕಲಾವಿದ ಸೀತಾರಾಮ ಕುಮಾರ್ ಕಟೀಲು ಅವರನ್ನು ಅಭಿನಂದಿಸುವುದು ನಮ್ಮೆಲ್ಲರ ಕರ್ತವ್ಯ. ಈ ಕಾರ್ಯ ನಿರ್ವಿಘ್ನವಾಗಿ ನೆರವೇರಲಿ’ ಎಂದು ಶಿವಗಿರಿ ಮಠದ ಶ್ರೀ ಸತ್ಯಾನಂದತೀರ್ಥ ಸ್ವಾಮೀಜಿ ಹೇಳಿದರು.
ಅವರು 2018ರಲ್ಲಿ ನಡೆಯುವ ಸೀತಾರಾಮ ಕುಮಾರ್ ಕಟೀಲು ಯಕ್ಷ ರಂಗದಲ್ಲಿ ಗೆಜ್ಜೆ ಕಟ್ಟಿ 50ನೇ ವರ್ಷ ಸಂಭ್ರಮ “ನೂಪುರ ಸ್ವರ್ಣ ಸಂಭ್ರಮ-2018′ ಪ್ರಯುಕ್ತ ಪೆರ್ಮುದೆ ಕನ್ನಿಕಾ ನಿಲಯದಲ್ಲಿ ನಡೆದ ಅಭಿನಂದನ ಸಮಿತಿ ರಚನಾ ಸಭೆಯಲ್ಲಿ ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಧರ್ಮದರ್ಶಿ ಕೃಷ್ಣರಾಜ ಅಡ್ಯಂತಾಯ ಮಾತನಾಡಿ, ಅದ್ವಿತೀಯ ಕಲಾವಿದ ಸೀತಾರಾಮ ಕುಮಾರ್ ಕಟೀಲು ಅವರನ್ನು ಅಭಿನಂದಿಸುವುದು ನಮ್ಮೆಲ್ಲರ ಭಾಗ್ಯ. ಈ ಸಂದರ್ಭದಲ್ಲಿ ಕಲಾವಿದನ ಬದುಕನ್ನು ಗಟ್ಟಿಗೊಳಿಸುವ ಕಾರ್ಯವೂ ನಡೆದು ಅರ್ಥಪೂರ್ಣವಾಗಬೇಕು ಎಂದರು.
ಶಾಂತಾರಾಮ ಕುಡ್ವ ಮೂಡಬಿದಿರೆ, ಭುಜಂಗ ಶೆಟ್ಟಿ ಪೆರ್ಮುದೆ, ಯಾದವ ಕೋಟ್ಯಾನ್, ಮನೋಹರ ಕುಮಾರ್, ದಯಾನಂದ ಕತ್ತಲ್ಸಾರ್, ಗೋಪಾಲಕೃಷ್ಣ ಕೆ., ಸುಕುಮಾರ್ ಸಾಲ್ಯಾನ್, ಸೀತಾರಾಮ ಕುಮಾರ್ ಕಟೀಲು ಮುಂತಾದವರು ಉಪಸ್ಥಿತರಿದ್ದರು.
ಗೋಪಾಲಕೃಷ್ಣ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.ವಿಶ್ವನಾಥ ಪೂಜಾರಿ ರೆಂಜಾಳ ಮತ್ತು ರಾಜೇಂದ್ರ ಪ್ರಸಾದ್ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು. ಸೀತಾರಾಮ ಕುಮಾರ್ ಕಟೀಲು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ