ಮಂಗಳೂರು ಗೋಲಿಬಾರ್ ಗೆ ಪ್ರತೀಕಾರ: ಪೊಲೀಸ್ ಸಿಬ್ಬಂದಿ ಕೊಲೆ ಯತ್ನದ ಹಿಂದೆ ‘ಮಾಯಾ ಗ್ಯಾಂಗ್’
ಆರು ಮಂದಿಯ ಬಂಧನ: ಹೊರಬಿತ್ತು ಕರಾಳ ಸತ್ಯ
Team Udayavani, Jan 19, 2021, 1:41 PM IST
ಮಂಗಳೂರು: ನಗರದ ಪೊಲೀಸ್ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹಲವಾರು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಗೆ ಪ್ರತೀಕಾರ ತೀರಿಸಲು ಸಂಚು ರೂಪಿಸಿದ್ದ ಆರು ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಶಶಿಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಮಹಮ್ಮದ್ ನವಾಝ್, ಅನೀಶ್ ಅಶ್ರಫ್, ಅಬ್ದುಲ್ ಖಾದರ್ ಫಹಾದ್, ಶೇಖ್ ಮಹಮ್ಮದ್ ಹ್ಯಾರಿಸ್, ರಾಹಿಲ್ ಯಾನೆ ಚೋಟು ರಾಹಿಲ್, ಮಹಮ್ಮದ್ ಖಾಯೀಸ್ ಬಂಧಿತ ಆರೋಪಿಗಳು.
ಪೊಲೀಸ್ ಸಿಬ್ಬಂದಿ ಕೊಲೆ ಯತ್ನ: ಕಳೆದ ಡಿ.16 ರಂದು ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಗಣೇಶ್ ಕಾಮತ್ ಎಂಬವರ ಮೇಲೆ ಕೊಲೆ ಯತ್ನ ನಡೆದಿತ್ತು. ಈ ಪ್ರಕರಣದ ಬೆನ್ನುಹತ್ತಿದ ಪೊಲೀಸರು ಹಲವಾರು ಆಘಾತಕಾರಿ ವಿಚಾರಗಳನ್ನು ಪತ್ತೆ ಹಚ್ಚಿದ್ದಾರೆ.
ಇದನ್ನೂ ಓದಿ:ಉದ್ಧವ್ ಠಾಕ್ರೆ ಹೇಳಿಕೆ ಹಿಂಪಡೆಯಬೇಕು : ಸಾಮ್ರಾಟ್ ಗೌಡ ಎಚ್ಚರಿಕೆ
2019ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ಗೋಲಿಬಾರ್ ಗೆ ಪ್ರತೀಕಾರ ತೀರಿಸಲು ಈ ಆರೋಪಿಗಳು ಸಂಚು ರೂಪಿಸಿದ್ದರು. ಎರಡು ಗ್ಯಾಂಗ್ ಗಳನ್ನು ಕಟ್ಟಿಕೊಂಡಿದ್ದು, ಮಾಯ ಗ್ಯಾಂಗ್ ಮತ್ತು ಇನ್ನೊಂದು ಗ್ಯಾಂಗ್ ನಿಂದ ಹಲ್ಲೆಗೆ ಯೋಜನೆ ಹಾಕಿಕೊಳ್ಳಲಾಗಿತ್ತು.
ನೈಟ್ರೋವಿಟ್ ಟ್ಯಾಬ್ಲೆಟ್ ಸೇವಿಸಿ 16 ವರ್ಷದ ಯುವಕ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಆರು ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ