ಚಿಲಕ ಹಾಕಿ ಮಲಗಿದ ಬಾಲಕಿ: ರಕ್ಷಣೆ


Team Udayavani, Jun 8, 2018, 5:55 AM IST

fire-7-6.jpg

ಮಂಗಳೂರು: ನಾಲ್ಕನೇ ಮಹಡಿಯ ಮನೆಯಲ್ಲಿ ಹಗಲಿನಲ್ಲಿ ಮಲಗಿದ್ದ 12 ವರ್ಷದ ಬಾಲಕಿಯ ಪೋಷಕರು ಬಂದು ಕರೆದರೂ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ತತ್‌ ಕ್ಷಣ ಕಾರ್ಯಪ್ರವೃತ್ತರಾದ ಅಗ್ನಿ ಶಾಮಕ ದಳ ಸಿಬಂದಿ ಅತ್ಯಾಧುನಿಕ ಏರಿಯಲ್‌ ಲ್ಯಾಡರ್‌ ಪ್ಲಾಟ್‌ ಫಾರಂ ಬಳಸಿ ಒಳತೆರಳಿ ಎಬ್ಬಿಸಿದ ಘಟನೆ ಮಂಗಳೂರಿನ ಬಿಜೈ ಚರ್ಚ್‌ ರಸ್ತೆಯ ಅಭಿಮಾನ್‌ ಮ್ಯಾನ್ಶನ್‌ ಅಪಾರ್ಟ್‌ಮೆಂಟ್‌ ನಲ್ಲಿ ಗುರುವಾರ ನಡೆದಿದೆ.

ಕೆಲವು ದಿನಗಳ ಹಿಂದಷ್ಟೇ ಮಗುವೊಂದು ಪೋಷಕರು ಹೊರಗೆ ಹೋದ ಸಂದರ್ಭ 8ನೇ ಮಹಡಿಯ ಬಾಲ್ಕನಿಯಿಂದ ಕೆಳಬಿದ್ದು ಅನಾಹುತ ಸಂಭವಿಸಿತ್ತು. ಹಾಗಾಗಿ ಮನವಿ ಬಂದ ಕೂಡಲೇ ಘಟನೆಯ ಮಹತ್ವ ಅರಿತ ಕದ್ರಿ ಮತ್ತು ಪಾಂಡೇಶ್ವರ ಅಗ್ನಿ ಶಾಮಕ ಠಾಣೆಗಳ ಸಿಬಂದಿ ಇಲಾಖೆಯ ಅತ್ಯಾಧುನಿಕ ಎ.ಎಲ್‌.ಪಿ. ಯಂತ್ರ ಉಪಯೋಗಿಸಿ ಆಕೆಯಿದ್ದ ಫ್ಲ್ಯಾಟಿನ ಬಾಲ್ಕನಿಯ ಬಾಗಿಲಿನ ಮೂಲಕ ಒಳ ಪ್ರವೇಶಿಸಿ ಎಬ್ಬಿಸಿ ತಂದೆ-ತಾಯಿಯ ಮಡಿಲಿಗೆ ಒಪ್ಪಿಸಿದರು.

ಆದುದೇನು?
ಟಿ.ವಿ. ರವೀಂದ್ರ ಕುಮಾರ್‌ ಅವರು ಬ್ಯಾಂಕೊಂದರ ಅಧಿಕಾರಿಯಾಗಿದ್ದು, ಅವರ ಪತ್ನಿ ಕೂಡ ಉದ್ಯೋಗಸ್ಥೆ. ಇಲ್ಲಿಯ ನಾಲ್ಕನೇ ಮಹಡಿಯ ಮನೆಯಲ್ಲಿ ವಾಸವಾಗಿದ್ದು, ಮಗಳು ಪ್ರಶಂಸಾ ಗುರುವಾರ ಸಂಜೆ ತಾಯಿ ಹೊರಗೆ ಹೋಗಿದ್ದಾಗ ಬಾಗಿಲು ಮುಚ್ಚಿ ಬೆಡ್‌ ರೂಂನಲ್ಲಿ ನಿದ್ದೆಗೆ ಜಾರಿದ್ದಳು. ಸಂಜೆ 5 ಗಂಟೆ ವೇಳೆಗೆ ತಾಯಿ ವಾಪಸಾದಾಗ ಮನೆಯ ಮುಖ್ಯ ದ್ವಾರಕ್ಕೆ ಒಳಗಿನಿಂದ ಚಿಲಕ ಹಾಕಿತ್ತು. ಎಷ್ಟು ಬೆಲ್‌ ಮಾಡಿದರೂ ಎಷ್ಟೇ ಕೂಗಿ ಕರೆದರೂ ಆಕೆಗೆ ಎಚ್ಚರವಾಗಲಿಲ್ಲ. ಇದರಿಂದ ತಾಯಿ ಗಾಬರಿಗೊಂಡು, ಪಕ್ಕದ ಫ್ಲ್ಯಾಟ್‌ನಲ್ಲಿರುವ ನಿವೃತ್ತ ಪೊಲೀಸ್‌ ಅಧಿಕಾರಿ ವಿನಯ್‌ ಗಾಂವ್‌ ಕರ್‌ ಗೆ ವಿಷಯ ತಿಳಿಸಿದರು. ಬಳಿಕ ಗಾಂವ್‌ ಕರ್‌ ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಿದರು.


20 ನಿಮಿಷಗಳ ಕಾರ್ಯಾಚರಣೆ

ಮಂಗಳೂರು ವಿಭಾಗದ ಮುಖ್ಯ ಅಗ್ನಿ ಶಾಮಕ ಅಧಿಕಾರಿ ಟಿ.ಎನ್‌. ಶಿವಶಂಕರ್‌ ಅವರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ನಾಲ್ವರು ಅಧಿಕಾರಿಗಳು ಮತ್ತು 15 ಸಿಬಂದಿ 20 ನಿಮಿಷಗಳಲ್ಲಿ ಕಾರ್ಯಾಚರಣೆ ನಡೆಸಿದರು. ದಳದ ರಿಯಲ್‌ ಲ್ಯಾಡರ್‌ ಪ್ಲಾಟ್‌ಫಾರಂ ಯಂತ್ರದಲ್ಲಿ 10ನೇ ಮಹಡಿ ತನಕವೂ ತೆರಳಲು ಅವಕಾಶವಿದೆ.

ಯಶಸ್ವಿ ಕಾರ್ಯಾಚರಣೆ
ಸಂಜೆ 5.35ಕ್ಕೆ ಕದ್ರಿ ಅಗ್ನಿಶಾಮಕ ಠಾಣೆಗೆ ಮಾಹಿತಿ ಲಭಿಸಿದ್ದು, ಹತ್ತು ನಿಮಿಷಗಳಲ್ಲಿ ಠಾಣೆಯ ಅಧಿಕಾರಿ ಮತ್ತು ಸಿಬಂದಿ ಸ್ಥಳಕ್ಕೆ ತಲುಪಿದರು. ಈ ಮನೆ ನಾಲ್ಕನೇ ಮಹಡಿಯಲ್ಲಿದ್ದು, ಐದನೇ ಮಹಡಿಯ ಮನೆಯಲ್ಲಿ ಯಾರೂ ಇಲ್ಲದ ಕಾರಣ ಹಾಗೂ ಲಾಕ್‌ ಮಾಡಿದ್ದರಿಂದ ನಾಲ್ಕನೇ ಮಾಳಿಗೆಗೆ ಹೋಗಲು ಅಗ್ನಿಶಾಮಕ ದಳದವರು ಎಎಲ್‌ಪಿ ಯಂತ್ರವನ್ನು ಪಾಂಡೇಶ್ವರ ಠಾಣೆಯಿಂದ ತರಿಸಿದ್ದರು. ಅದರ ಮೂಲಕ ನಾಲ್ಕನೇ ಮಾಳಿಗೆಯ 404ನೇ ಫ್ಲ್ಯಾಟ್‌ ನ ಬಾಲ್ಕನಿ ಏರಿದಾಗ ಅಲ್ಲಿ ಬಾಗಿಲು ತೆರೆದೇ ಇತ್ತು. ಅದರ ಮೂಲಕ ಅಗ್ನಿಶಾಮಕ ಸಿಬಂದಿ ಮನೆಯ ಒಳಗೆ ತೆರಳಿ ಮಲಗಿದ್ದ ಬಾಲಕಿಯನ್ನು ಎಬ್ಬಿಸಿದರು. ಬಳಿಕ ಮುಖ್ಯ ದ್ವಾರದ ಬಾಗಿಲಿನ ಒಳಗಿನ ಚಿಲಕ ತೆಗೆದು, ಬಾಗಿಲು ತೆರೆದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.