ತಡೆಗೋಡೆ ಕಾಮಗಾರಿ ನನೆಗುದಿಗೆ; ವಾಹನ ಸಂಚಾರಕ್ಕೆ ತೊಂದರೆ


Team Udayavani, Feb 13, 2021, 4:30 AM IST

ತಡೆಗೋಡೆ ಕಾಮಗಾರಿ ನನೆಗುದಿಗೆ; ವಾಹನ ಸಂಚಾರಕ್ಕೆ ತೊಂದರೆ

ಬೆಳ್ಳಾರೆ: ಗ್ರಾಮ ವಿಕಾಸ ಯೋಜನೆಯಡಿ ನಿರ್ಮಾಣವಾಗುತ್ತಿದ್ದ ಪೆರುವಾಜೆ ಕೊಲ್ಯ ಸಂಪರ್ಕ ರಸ್ತೆಯ ತಡೆಗೋಡೆ ಕಾಮಗಾರಿ ಕಳೆದ ಮಳೆಗಾಲದ ಸಮಯದಲ್ಲಿ ಸ್ಥಗಿತಗೊಂಡಿದ್ದು, ಇನ್ನೂ ಕಾಮಗಾರಿ ಆರಂಭವಾಗದೆ ನನೆಗುಗುದಿಯಲ್ಲಿದೆ. ಪೆರುವಾಜೆಯಿಂದ ಕೊಲ್ಯ ಮಾರ್ಗವಾಗಿ ಮುರ್ಕೆತ್ತಿ ಸಂಪರ್ಕ ಕಲ್ಪಿಸುವ ರಸ್ತೆಯ ನಾಗಂಡ ಎಂಬಲ್ಲಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ 11.25 ಲಕ್ಷ ರೂ. ವೆಚ್ಚದ ತಡೆಗೋಡೆ ನಿರ್ಮಾಣ ಕಾರ್ಯ ಕೆ.ಆರ್‌.ಐ.ಡಿ.ಎಲ್‌.ನಿಂದ ಕಳೆದ ವರ್ಷ ಮಳೆಗಾಲದ ಸಮಯದಲ್ಲಿ ಪ್ರಗತಿಯಲ್ಲಿತ್ತು. ಆದರೆ ಮಳೆಗಾಲದ ಬಳಿಕ ಕಾಮಗಾರಿ ನಿಂತಿದೆ. ತಡೆಗೋಡೆ ಕಾಮಗಾರಿ ಅಪೂರ್ಣ   ಗೊಂಡ ಕಾರಣ ಪಾದಚಾರಿಗಳು ನಡೆದು ಹೋಗುತ್ತಿರುವ ರಸ್ತೆ ಯೂ ಕುಸಿಯುತ್ತಿದೆ.

ಕಾಲು ಸೇತುವೆ ಪೂರ್ಣ :

ಮುರ್ಕೆತ್ತಿ ಭಾಗದ ಜನರ ಬಹುಕಾಲದ ಬೇಡಿಕೆಯಾದ ಕೊಲ್ಯ ಪೆರುವಾಜೆ ಸಂಪರ್ಕ ರಸ್ತೆಯ ನಾಗಂಡ ಎಂಬಲ್ಲಿ ಲೋಕೋಪಯೋಗಿ ಇಲಾಖೆಯ 12.50     ಲಕ್ಷ ರೂಪಾಯಿ ಅನುದಾನದಲ್ಲಿ ಕಾಲುಸೇತುವೆ ಹಾಗು ಗ್ರಾಮ ವಿಕಾಸ ಯೋಜನೆಯಡಿಯಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಇನ್ನೊಂದು ಕಾಲು ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಕಾಲು ಸೇತುವೆ ಮೂಲಕ ಲಘು ವಾಹನ ಸಂಚರಿಸಬಹುದಾಗಿದೆ. ಆದರೆ ಸಂಪರ್ಕ ರಸ್ತೆಯ ಇಕ್ಕೆಲಗಳಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ನನೆಗುದಿಗೆ ಬಿದ್ದಿರುವ ಕಾರಣ ವಾಹನ ಸಂಚಾರ ಅಸಾಧ್ಯವಾಗಿದೆ.

ನೂರಾರು ಮನೆಗಳಿವೆ :

ಮುರ್ಕೆತ್ತಿ ಭಾಗದಲ್ಲಿ ನೂರಾರು ಮನೆಗಳಿದ್ದು ಪೆರು ವಾಜೆ ಸಂಪರ್ಕ ರಸ್ತೆ ಪೂರ್ಣಗೊಂಡಲ್ಲಿ ತಮ್ಮದೇ ಗ್ರಾಮದ ಗ್ರಾ.ಪಂ ಕಚೇರಿ, ಸ.ಹಿ.ಪ್ರಾ.ಶಾಲೆ, ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅರಣ್ಯ ಇಲಾಖೆಯ ಕಚೇರಿ, ಅಂಚೆ ಕಚೇರಿ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ಸಹಿತ ದಿನನಿತ್ಯದ ವ್ಯವಹಾರಗಳಿಗೆ ಪೆರುವಾಜೆ ಹತ್ತಿರವಾಗಲಿದೆ. ಸಂಪರ್ಕ ರಸ್ತೆ ಪೂರ್ಣಗೊಂಡಲ್ಲಿ ಪೆರುವಾಜೆಯಿಂದ ಪುತ್ತೂರು ಮುಖ್ಯ ರಸ್ತೆ ಹಾಗೂ ಬೆಳ್ಳಾರೆ ಸಂಪರ್ಕವೂ ಸುಲಭವಾಗಲಿದೆ. ಕಾಲು ಸೇತುವೆ ಪೂರ್ಣಗೊಂಡ ಬಳಿಕ ಸ್ಥಳೀಯರು ಬೇಡಿಕೆ ಈಡೇರಿದ ಸಂತಸದಲ್ಲಿದ್ದರು. ಆದರೆ ತಡೆಗೋಡೆ ನಿರ್ಮಾಣ ಕಾಮಾಗಾರಿ ಪೂರ್ಣಗೊಳ್ಳದಿರುವುದು ನಿರಾಸೆ ಮೂಡಿಸಿದೆ.

ತಡೆಗೋಡೆ ನಿರ್ಮಾಣ ಕಾಮಗಾರಿಯಲ್ಲಿ ಅನುದಾನಕ್ಕಿಂತ ಹೆಚ್ಚಿನ ಕೆಲಸವಾಗಬೇಕಿದೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಉಳಿದ ಕಾಮಗಾರಿಯನ್ನು ಶೀಘ್ರ ಆರಂಭಿಸಿಸಲಾಗುವುದು.ರಮೇಶ್‌, ಎ.ಇ.ಇ., ಕೆ.ಆರ್‌.ಐ.ಡಿ.ಎಲ್‌.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.