ಸೋಮೇಶ್ವರ: ಅಳಿವೆಯ ಹೂಳು ತೆರವು
Team Udayavani, Nov 1, 2018, 10:09 AM IST
ಉಳ್ಳಾಲ: ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಅಳಿವೆಯಲ್ಲಿ ಹೂಳು ಸಮಸ್ಯೆಯಿಂದ ಉಂಟಾಗಿದ್ದ ಕೃತಕ ನೆರೆ ಹಾವಳಿಗೆ ಸಂಬಂಧಿಸಿದಂತೆ ಸೋಮೇಶ್ವರ ಗ್ರಾ. ಪಂ. ಆಡಳಿತ ಬುಧವಾರ ಸ್ಪಂದಿಸಿದ್ದು ಹೂಳನ್ನು ಹಿಟಾಚಿ ಮೂಲಕ ತೆಗೆಯುವ ಮೂಲಕ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲಾಗಿದೆ.
ಕಳೆದೆರಡು ದಿನಗಳಿಂದ ಬಟ್ಟಪ್ಪಾಡಿ ಅಳಿವೆ ಬಾಗಿಲಿನಲ್ಲಿ ಹೂಳು ತುಂಬಿ ಸೋಮೇಶ್ವರ ಬಳಿಯ ಹೊಳೆ ಸಮೀಪದ ಮನೆಗಳು ಕೃತಕ ನೆರೆಯಿಂದ ಜಲಾವೃತಗೊಂಡಿತ್ತು. ಬುಧವಾರ ಸಮಸ್ಯೆ ತೀವ್ರವಾದಾಗ ಸ್ಥಳೀಯರು ಆಕ್ರೋಶಗೊಂಡಿದ್ದು ಬಳಿಕ ತಹಶೀಲ್ದಾರ್ ಗುರುಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಹೂಳು ತೆಗೆಯುವಂತೆ ಸೋಮೇಶ್ವರ ಗ್ರಾ.ಪಂ.ಗೆ ಆದೇಶ ನೀಡಿದ್ದರು.
ತಾತ್ಕಾಲಿಕ ಪರಿಹಾರ
ಬುಧವಾರ ಬೆಳಗ್ಗೆ ಬಟ್ಟಪ್ಪಾಡಿಯಲ್ಲಿ ಹೂಳು ತೆಗೆಯುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಒಂದು ಹಿಟಾಚಿ ಸಂಜೆಯವರೆಗೆ ಕಾರ್ಯ ನಿರ್ವಹಿಸಿ ಹೂಳನ್ನು ಸಂಪೂರ್ಣವಾಗಿ ತೆಗೆದು ಹೊಳೆಯ ನೀರು ಸರಾಗವಾಗಿ ಸಮುದ್ರ ಸೇರಲು ಅನುವು ಮಾಡಿದೆ. ಕೃತಕ ನೆರೆ ತೆರವಾಗಿದ್ದು ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಸಂದರ್ಭ ಸ್ಥಳದಲ್ಲಿದ್ದ ಸೋಮೇಶ್ವರ ಗ್ರಾ.ಪಂ. ಅಧ್ಯಕ್ಷ ರಾಜೇಶ್ ಉಚ್ಚಿಲ ಮಾತನಾಡಿ, ಬಟ್ಟಪ್ಪಾಡಿ ಅಳಿವೆ ಬಾಗಿಲಿನಲ್ಲಿ ಪ್ರಾರಂಭದ ಹಂತದಲ್ಲಿ ಹೂಳು ತೆಗೆದು ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಲಾಗಿದೆ. ನೀರಿನ ಹರಿವು ಕಡಿಮೆಯಾದ ಬಳಿಕ ಈ ಸಮಸ್ಯೆ ಉದ್ಭವಿಸುವುದಿಲ್ಲ. ಹೊಳೆ ಬದಿಯಲ್ಲಿ ನೀರು ಇಂಗಿದಾಗ ಸಮಸ್ಯೆ ತಾತ್ಕಾಲಿಕವಾಗಿ ಪರಿಹಾರವಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ