ದರ್ಬೆ ತೋಡಿಗೆ ಕಿರುಸೇತುವೆ: ಕಾಮಗಾರಿ ವಿಳಂಬ


Team Udayavani, May 21, 2019, 10:26 AM IST

sud-4

ನಗರ : ರಾಜ್ಯ ಸರಕಾರವು ಎರಡು ವರ್ಷಗಳ ಹಿಂದೆ ಪುತ್ತೂರಿಗೆ ನೀಡಿರುವ ನಗರೋತ್ಥಾನ ಯೋಜನೆಯ ಅನುದಾನದಲ್ಲಿ ದರ್ಬೆಯ ಕಿರು ಸೇತುವೆ ಕಾಮಗಾರಿ ವಿಳಂಬವಾಗಿ ಆರಂಭ ಗೊಂಡಿದ್ದು, ಕೆಲಸವೂ ಆಮೆಗತಿಯಲ್ಲಿ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಆದರೆ ನಗರಸಭೆ ಈ ಕಾಮಗಾರಿಯನ್ನು ಜೂನ್‌ 15ರೊಳಗೆ ಮುಗಿಸುವ ಯೋಚನೆಯಲ್ಲಿದೆ.

ಸರಕಾರವು ನಗರೋತ್ಥಾನ ಯೋಜನೆಯಲ್ಲಿ ಪುತ್ತೂರಿಗೆ 25 ಕೋಟಿ ರೂ. ನೀಡಿದ್ದು, ಅದರಲ್ಲಿ 15 ಲಕ್ಷ ರೂ.ಗಳಲ್ಲಿ ದರ್ಬೆಯಲ್ಲಿ ಹರಿಯುತ್ತಿರುವ ತೋಡಿಗೆ ಕಿರುಸೇತುವೆ ಸಹಿತ 20 ಕಾಮಗಾರಿಗಳ ಪಟ್ಟಿ ಮಾಡಲಾಗಿತ್ತು. ಹಿಂದೆ ತೋಡಿಗೆ ಮೋರಿ ಅಳವಡಿಸಿದ್ದ ಪರಿಣಾಮ ಅದು ಕಿರಿದಾಗಿ ಪದೇ ಪದೇ ಬ್ಲಾಕ್‌ ಆಗುವ ಸಮಸ್ಯೆ ಎದುರಾಗುತ್ತಿತ್ತು.

ಪ್ರಸ್ತುತ ಶೀಘ್ರ ಮಳೆಗಾಲ ಆರಂಭದ ಎಲ್ಲ ಲಕ್ಷಣಗಳು ಕಂಡುಬರುತ್ತಿರುವುದರಿಂದ ಕಿರುಸೇತುವೆ ಕಾಮಗಾರಿಯನ್ನು ಶೀಘ್ರ ಮುಗಿಸಬೇಕಿದೆ. ಆದರೆ ಈಗ ಒಂದು ಬದಿಯ ಕಾಮಗಾರಿ ಮಾತ್ರ ನಡೆಯುತ್ತಿದ್ದು, ಅದು ಪೂರ್ಣಗೊಂಡ ಬಳಿಕವೇ ಮತ್ತೂಂದು ಬದಿಯ ಕಾಮಗಾರಿ ಆರಂಭಗೊಳ್ಳಬೇಕಿದೆ. ಹೀಗಾಗಿ ಕಾಮಗಾರಿ ಮತ್ತಷ್ಟು ವಿಳಂಬವಾಗಲಿದೆಯೇ ಎಂಬ ಸಂಶಯವನ್ನು ಸಾರ್ವಜನಿಕರು ವ್ಯಕ್ತಪಡಿಸುತ್ತಿದ್ದಾರೆ.

ಈ ತೋಡಿನ ಮೂಲಕ ಪಾಂಗಳಾಯಿ ಕಡೆಯಿಂದ ನೀರು ಹರಿದು ಬರುತ್ತಿದ್ದು, ದರ್ಬೆಯ ಮುಖ್ಯರಸ್ತೆಯನ್ನು ಹಾದು ಕೂರ್ನಡ್ಕ ಭಾಗಕ್ಕೆ ಹರಿಯುತ್ತದೆ. ಮಳೆಗಾಲದಲ್ಲಿ ತೋಡಿನಲ್ಲಿ ವ್ಯಾಪಕ ನೀರು ಹರಿಯುವುದರಿಂದ ಕೃತಕ ನೆರೆಯ ಭೀತಿಯ ಹಿನ್ನೆಲೆಯಲ್ಲಿ ಪ್ರಸ್ತುತ ಕಿರುಸೇತುವೆಯ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಹಿಂದಿನ ಮೋರಿಯನ್ನು ತೆಗೆದು ತೋಡನ್ನು ಅಗಲಗೊಳಿಸಿ, ಅದರ ಎರಡೂ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ರಚನೆ ಮಾಡಿ ಬಳಿಕ ಮೇಲ್ಗಡೆ ಕಾಂಕ್ರೀಟ್ ಕಾಮಗಾರಿ ನಡೆಯಲಿದೆ. ಪ್ರಸ್ತುತ ಡಿವೈಡರ್‌ನ ಒಂದು ಭಾಗದ ಕಾಮಗಾರಿ ನಡೆಯುತ್ತಿದ್ದು, ಮುಂದೆ ಅದೇ ರೀತಿ ಇನ್ನೊಂದು ಭಾಗದ ಕಾಮಗಾರಿ ನಡೆಯಲಿದೆ.

ಬಸ್ಸುಗಳಿಗೆ ಬದಲಿ ಮಾರ್ಗ

ಕಿರು ಸೇತುವೆಯ ಕಾಮಗಾರಿಯ ಹಿನ್ನೆಲೆಯಲ್ಲಿ ಪುತ್ತೂರು-ದರ್ಬೆ ಮಾರ್ಗ ದಲ್ಲಿ ಸಂಚರಿಸುವ ಬಸ್ಸುಗಳು ಬದಲಿ ಮಾರ್ಗದಲ್ಲಿ ಸಂಚರಿಸುತ್ತಿವೆ. ಪುತ್ತೂರಿನಿಂದ ಸುಳ್ಯ, ಕುಂಬ್ರ, ಮಾಡಾವು, ಬೆಳ್ಳಾರೆ, ಸುಳ್ಯಪದವು, ಈಶ್ವರಮಂಗಲಕ್ಕೆ ಹೋಗುವ ಬಸ್ಸುಗಳು ಬಸ್‌ ನಿಲ್ದಾಣದಿಂದ ಎಂ.ಟಿ. ರೋಡ್‌ ಮೂಲಕ ತೆರಳಿ ಪರ್ಲಡ್ಕ-ಬೈಪಾಸ್‌ ಮೂಲಕ ತೆರಳುತ್ತವೆ. ಈ ಪ್ರದೇಶಗಳಿಗೆ ತೆರಳುವವರು ದರ್ಬೆ ಜಂಕ್ಷನ್‌ನಲ್ಲಿ ನಿಂತರೆ ಕಷ್ಟವಾಗಲಿದೆ. ಸವಣೂರು-ಕಾಣಿಯೂರು ಕಡೆಗೆ ತೆರಳುವ ಬಸ್ಸುಗಳು ಬೈಪಾಸ್‌ನಿಂದ ಮತ್ತೆ ದರ್ಬೆ ಜಂಕ್ಷನ್‌ ಮೂಲಕ ತೆರಳುತ್ತವೆ. ಈ ರೀತಿಯ ಗೊಂದಲ ಇರುವುದರಿಂದ ಶೀಘ್ರದಲ್ಲಿ ಸೇತುವೆಯ ಕಾಮಗಾರಿ ಪೂರ್ಣಗೊಳ್ಳಬೇಕಿದೆ.

ಮಳೆಗಾಲ ಆರಂಭವಾಗಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಕಾಮಗಾರಿ ಇಷ್ಟು ವಿಳಂಬ ಏಕಾಯಿತು ಎಂದು ನಗರಸಭೆಯ ಅಧಿಕಾರಿಗಳನ್ನು ಪ್ರಶ್ನಿಸಿದರೆ, ತೋಡಿಗೆ ಅಡ್ಡಲಾಗಿ ಕೇಬಲ್ಗಳು ಹಾದು ಹೋಗಿರುವುದರಿಂದ ತೊಂದರೆಯಾಯಿತು. ಇದು ವಿಳಂಬಕ್ಕೂ ಕಾರಣವಾಗಿದೆ ಎಂಬ ಉತ್ತರ ನೀಡುತ್ತಾರೆ.

ಪ್ರಮುಖವಾಗಿ ಬಿಎಸ್ಸೆನ್ನೆಲ್ ಕೇಬಲ್ ಹಾದುಹೋಗಿದ್ದು, ಅವರು ಸೂಕ್ತ ಸಮಯದಲ್ಲಿ ಬಾರದೇ ಇದ್ದುದರಿಂದ ವಿಳಂಬವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಮಗಾರಿ ನಡೆಯುತ್ತಿರುವ ಪ್ರದೇಶಕ್ಕೆ ಶಾಸಕ ಸಂಜೀವ ಮಠಂದೂರು, ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ ಭೇಟಿ ನೀಡಿ, ಶೀಘ್ರ ಮುಗಿಸುವಂತೆ ಎಚ್ಚರಿಕೆ ನೀಡಿದ್ದಾರೆ.

ಮಳೆಗಾಲ ಆರಂಭವಾಗಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಕಾಮಗಾರಿ ಇಷ್ಟು ವಿಳಂಬ ಏಕಾಯಿತು ಎಂದು ನಗರಸಭೆಯ ಅಧಿಕಾರಿಗಳನ್ನು ಪ್ರಶ್ನಿಸಿದರೆ, ತೋಡಿಗೆ ಅಡ್ಡಲಾಗಿ ಕೇಬಲ್ಗಳು ಹಾದು ಹೋಗಿರುವುದರಿಂದ ತೊಂದರೆಯಾಯಿತು. ಇದು ವಿಳಂಬಕ್ಕೂ ಕಾರಣವಾಗಿದೆ ಎಂಬ ಉತ್ತರ ನೀಡುತ್ತಾರೆ. ಪ್ರಮುಖವಾಗಿ ಬಿಎಸ್ಸೆನ್ನೆಲ್ ಕೇಬಲ್ ಹಾದುಹೋಗಿದ್ದು, ಅವರು ಸೂಕ್ತ ಸಮಯದಲ್ಲಿ ಬಾರದೇ ಇದ್ದುದರಿಂದ ವಿಳಂಬವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಮಗಾರಿ ನಡೆಯುತ್ತಿರುವ ಪ್ರದೇಶಕ್ಕೆ ಶಾಸಕ ಸಂಜೀವ ಮಠಂದೂರು, ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ ಭೇಟಿ ನೀಡಿ, ಶೀಘ್ರ ಮುಗಿಸುವಂತೆ ಎಚ್ಚರಿಕೆ ನೀಡಿದ್ದಾರೆ.
ಜೂ. 15ರೊಳಗೆ ಪೂರ್ಣ

ತೋಡಿಗೆ ಅಡ್ಡಲಾಗಿ ಕೇಬಲ್ ಹೋಗಿದ್ದ ಕಾರಣ ಕಿರುಸೇತುವೆಯ ಕಾಮಗಾರಿ ವಿಳಂಬವಾಗಿತ್ತು. ಪ್ರಸ್ತುತ ಕಾಮಗಾರಿ ನಡೆಯುತ್ತಿದ್ದು, ಜೂ. 15ರೊಳಗೆ ಸೇತುವೆಯ ಎರಡೂ ಬದಿಯ ಕಾಮಗಾರಿಯನ್ನೂ ಪೂರ್ತಿಗೊಳಿಸಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಿದ್ದೇವೆ.
– ಅರುಣ್‌ ಪ್ರಭಾರ ಮುಖ್ಯಾಧಿಕಾರಿ, ಪುತ್ತೂರು ನಗರಸಭೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.