ಬಿಸಿಲ ಬೇಗೆ: ನೊರೆ ಹಾಲಿನ ಹೊಳೆಯೀಗ ಕ್ಷೀಣ


Team Udayavani, Sep 22, 2018, 10:26 AM IST

22-sepctember-3.jpg

ಸುಳ್ಯ : ಮೂರು ವಾರಗಳ ಹಿಂದೆ ಮೈದುಂಬಿ ಧುಮ್ಮಿಕ್ಕಿ ಹರಿದು ನೋಡುಗರ ಮನ ಸೆಳೆಯುತ್ತಿದ್ದ ಜಲಪಾತದ ಒಡಲಿನ ಜಲಲ ಜಲಧಾರೆ ಕ್ಷೀಣಿಸಿದೆ..! ಬಿಸಿಲಿನ ತೀವ್ರತೆಗೆ ಕಾಡಿನಂಚಿನ ಹಲವು ಜಲಪಾತಗಳು ತನ್ನ ವಯ್ನಾರದಿಂದ ವಿಮುಖಗೊಂಡಿವೆ. ಮಳೆಗಾಲದ ಪ್ರೇಕ್ಷಣಿಯ ಸ್ಥಳವಾಗಿ ಮನಸ್ಸಿಗೆ ಆಹ್ಲಾದ ಮೂಡಿಸುವ ಹತ್ತಾರು ಜಲಪಾತಗಳು ತಾಲೂಕಿನಲ್ಲಿ ಇವೆ. ಝುಳು-ಝುಳು ನಿನಾದದೊಂದಿಗೆ ನೊರೆ ಹಾಲಿನ ಹೊಳೆ ರೂಪ ಪಡೆದು ಜನಾಕರ್ಷಣೆಯ ಕೇಂದ್ರವಾಗಿ ಗಮನ ಸೆಳೆಯುವುದು ಇಲ್ಲಿನ ವಿಶೇಷ.

ಬಿಸಿಲ ಬೇಗೆ
ಕಾಡಂಚಿನಿಂದ ಇಳಿದು ಬರುವ ಮಳೆ ನೀರು, ಒರತೆ ನೀರಿನ ಜತೆಗೆ ಮಿಳಿತಗೊಂಡು ಮಳೆಗಾಲದ ಆಕರ್ಷಣೆ ಕೇಂದ್ರವಾಗುತ್ತಿದ್ದ ಜಲಪಾತಕ್ಕೆ ಈಗ ಬಿಸಿಲ ಬೇಗೆ ತಟ್ಟಿದೆ. ಗುಡ್ಡದಂಚಿನಿಂದ ಇಳಿದು ಬರುವ ಸಣ್ಣ ಜಲಪಾತಗಳಲ್ಲಿ ಕಲ್ಲು ಬಂಡೆಗಳು ಮಾತ್ರ ಗೋಚರಿಸುತ್ತಿವೆ. ಸುಳ್ಯ, ಕೊಡಗು, ಮಲೆನಾಡ ಅಂಚಿನಲ್ಲಿರುವ ಚಾಮಡ್ಕ, ದೇವರಕೊಲ್ಲಿ, ಲೈನ್ಕಜೆ, ನಿಡ್ಯಮಲೆ, ಕಾಂತಬೈಲು, ಕಲ್ಯಾಳ, ಮೂಕಮಲೆ, ಹೊಸಗದ್ದೆ, ಜಾಕೆ, ಪಳಂಗಾಯ, ಬಿಳಿಮಲೆ, ಸೋಣಂಗೇರಿ, ಕೆಮನಬಳ್ಳಿ ಮೊದಲಾದ ಜಲಪಾತಗಳು ಮಳೆಗಾಲದಲ್ಲಿ ಚಾರಣಿಗರ ನೆಚ್ಚಿನ ತಾಣವಾಗಿತ್ತು.

ಬಂಡೆಗಳಷ್ಟೇ ಗೋಚರ
ಈ ಜಲಪಾತಗಳಲ್ಲಿ ಹರಿಯುವ ನೀರಿನ ಪ್ರಮಾಣ ಶೇ. 90ರಷ್ಟು ಬತ್ತಿ ಹೋಗಿದೆ. ಸಣ್ಣ ಒರತೆಯ ಹರಿವಷ್ಟೆ ಉಳಿದಿದೆ. ಬಿಸಿಲು ಬೇಗೆ ಇದೇ ರೀತಿಯಾಗಿ ಮುಂದುವರಿದರೆ ಸೆಪ್ಟಂಬರ್‌ ತಿಂಗಳ ಕೊನೆಯಲ್ಲಿಯೇ ಬರೀ ಬಂಡೆಗಳನ್ನಷ್ಟೇ ಕಾಣುವಂತಾಗಬಹುದು ಎಂದು ಹೇಳುತ್ತಾರೆ ಸೋಣಂಗೇರಿ ಫಾಲ್ಸ್‌ ವೀಕ್ಷಿಸಿದ ಕೀರ್ತನ್‌ ಸುಳ್ಯ.

ಒರತೆ ನೀರಿಲ್ಲ..!
ಕಾಡಂಚಿನಲ್ಲಿ ಬಿರು ಬೇಸಗೆಯಲ್ಲಿಯೂ ಒರತೆ ನೀರು ಇರುತ್ತದೆ. ನೀರ ಸೆಲೆ ಬತ್ತುವುದು ಕಡಿಮೆ. ಈ ಬಾರಿ ಅದು ಕಾಣುತ್ತಿಲ್ಲ. ಅಂತರ್ಜಲಕ್ಕೆ ಮಳೆ ನೀರು ಇಳಿಯದ ಕಾರಣ ನೀರು ಒರತೆ ರೂಪದಲ್ಲಿ ಜಿನುಗುತ್ತಿಲ್ಲ. ಘಟ್ಟ ಪ್ರದೇಶದಲ್ಲಿ ನೆಲ ಒಡೆದು ಬೇಸಗೆ ಭೀಕರತೆಗೆ ಸಾಕ್ಷಿ ಆದಂತೆ ಇಲ್ಲಿಯೂ ಆಗುವ ಅಪಾಯದ ಮುನ್ಸೂಚನೆ ಎನ್ನುತ್ತಾರೆ ಭೂಗರ್ಭ ಶಾಸ್ತ್ರಜ್ಞರು. ಭೂಮಿ ಮೇಲೆ ಎಷ್ಟೇ ಬಿಸಿಲು- ಶಾಖವಿದ್ದರೂ ನೀರು ಈ ಪ್ರಮಾಣದಲ್ಲಿ ಆವಿಯಾದ ಉದಾಹರಣೆಗಳಿಲ್ಲ. ಕಾಡು ನಾಶ, ಕಾಂಕ್ರೀಟ್‌ ಕಾಮಗಾರಿಗಳು, ಜಲ ಮಾರ್ಗಗಳ ನಾಶವೂ ಒಂದು ಕಾರಣ. ಪ್ರಕೃತಿಯ ಸಹಜ ರಚನೆಗಳಿಗೆ ಮಾನವನ ಅಡ್ಡಿ ಮತ್ತೊಂದು ಪ್ರಮುಖ ಕಾರಣ.

ಸ್ಥಿತಿ ತದ್ವಿರುದ್ಧ 
ಇತ್ತೀಚಿನ ಕೆಲ ವರ್ಷಗಳಲ್ಲಿ ನವೆಂಬರ್‌ ತನಕವೂ ಜಲಪಾತದಲ್ಲಿ ನೀರಿನ ಹರಿವಿತ್ತು. ಒರತೆ ರೂಪದ ನೀರಿನ ಹರಿವಾದರೂ ಇರುತ್ತಿತ್ತು. ಈ ಬಾರಿಯ ಸ್ಥಿತಿ ತದ್ವಿರುದ್ಧ ವಾಗಿದೆ ಎನ್ನುತ್ತಾರೆ ಮಹೇಶ್‌.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.