ನಗರದ 15 ಜಂಕ್ಷನ್‌ಗಳಲ್ಲಿ “ಸ್ಮಾರ್ಟ್‌ ಸಿಸಿ ಕೆಮರಾ’

ಸ್ಮಾರ್ಟ್‌ಸಿಟಿ ಯೋಜನೆ

Team Udayavani, Jan 4, 2020, 6:14 AM IST

32

ಮಹಾನಗರ: ಸ್ಮಾರ್ಟ್‌ಸಿಟಿ ಯೋಜನೆಯತ್ತ ಬದಲಾಗುತ್ತಿರುವ ಮಂಗಳೂರಿನ ಪ್ರತೀ ದಿನದ ಬೆಳವಣಿಗೆಯ ಬಗ್ಗೆ ಹದ್ದಿನ ಕಣ್ಣಿಡಲು ಅನುಕೂಲವಾಗುವ ನೆಲೆಯಲ್ಲಿ ಅತ್ಯುನ್ನತ ಗುಣಮಟ್ಟದ ಸಿಸಿ ಕೆಮರಾಗಳನ್ನು ನಗರದ 15 ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಲು ಸಿದ್ಧತೆ ನಡೆಸಲಾಗಿದೆ.

ನಗರದಲ್ಲಿ ನಡೆಯುವ ಕೊಲೆ, ಸುಲಿಗೆ ಸಹಿತ ಇನ್ನಿತರ ಅಪರಾಧಗಳ ರಹಸ್ಯ ಭೇದಿಸುವಲ್ಲಿ ಪೊಲೀಸರಿಗೆ ಅನುಕೂಲವಾಗುವಂತೆ ಸ್ಮಾರ್ಟ್‌ಸಿಟಿ ಯೋಜನೆಯ ಮೊದಲ ಹಂತದಲ್ಲಿ ನಗರದ 15 ಜಂಕ್ಷನ್‌ಗಳಲ್ಲಿ ಸ್ಮಾರ್ಟ್‌ ಫೋಲ್‌ಗ‌ಳಲ್ಲಿ ಒಟ್ಟು 75 ಕೆಮರಾಗಳನ್ನು ಅಳವಡಿಸಲಾಗುತ್ತಿದೆ. ಪ್ರತೀ ಜಂಕ್ಷನ್‌ಗಳಲ್ಲಿಯೂ 360 ಡಿಗ್ರಿ ಸುತ್ತ ಸುತ್ತುವ ಕೆಮರಾ ಸಹಿತ ಪ್ರತೀ ಜಂಕ್ಷನ್‌ನ ಒಂದು ಸ್ಮಾರ್ಟ್‌ಫೋಲ್‌ನಲ್ಲಿ ಒಟ್ಟಾರೆ 5 ಕೆಮರಾಗಳು ಇರಲಿವೆ.

ಸಿ.ಸಿ. ಕೆಮರಾ ನಿರ್ವಹಣೆಗೆಂದು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಮೊದಲ ಮಹಡಿಯಲ್ಲಿ ಕಂಟ್ರೋಲ್‌ ರೂಂ. ಸಿದ್ಧವಾಗಿದೆ. ಉಳಿದಂತೆ ಜಂಕ್ಷನ್‌ಗಳಲ್ಲಿ ಸ್ಮಾರ್ಟ್‌ಫೋಲ್‌ಗ‌ಳನ್ನು ಅಳವಡಿಸು ಕಾರ್ಯ ಬಾಕಿ ಇದ್ದು, ಕೆಲವೇ ದಿನಗಳಲ್ಲಿ ಕೆಲಸ ಪೂರ್ಣಗೊಳ್ಳಲಿದೆ ಎನ್ನುತ್ತಾರೆ ಅಧಿಕಾರಿಗಳು.

ಭದ್ರತೆಯ ದೃಷ್ಟಿಯಿಂದ ನಗರ ಅಪಾರ್ಟ್‌ ಮೆಂಟ್‌, ಬಹು ಮಹಡಿ ಕಟ್ಟಡ, ವಾಣಿಜ್ಯ ಕಟ್ಟಡ ಸಹಿತ ಪ್ರಮುಖ ಜಂಕ್ಷನ್‌ಗಳಲ್ಲಿ ಸದ್ಯ ಎರಡು ಸಾವಿರಕ್ಕೂ ಮಿಕ್ಕಿ ಸಿಸಿ ಕೆಮರಾಗಳು ಕಣ್ಗಾವಲಿನಲ್ಲಿವೆ. ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟು 210 ಹೆಚ್ಚುವರಿ ಸಿಸಿ ಕೆಮರಾಗಳನ್ನು ಇತ್ತೀಚೆಗೆಯಷ್ಟೇ ಅಳವಡಿಸಲಾಗಿತ್ತು. ಮುಂದಿನ ದಿನಗಳಲ್ಲಿ ಸಿಸಿ ಕೆಮರಾಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಲಿವೆ.

ಕಾರ್ಯಾಚರಣೆಗೆ ಪೊಲೀಸ್‌ ಇಲಾಖೆ ಸಿದ್ಧ
ಕರ್ನಾಟಕ ರಾಜ್ಯ ಸಾರ್ವಜನಿಕರ ಸುರಕ್ಷಾ ಕಾಯ್ದೆ ಅನ್ವಯ ನಗರದ ಎಲ್ಲ ವಾಣಿಜ್ಯ ಕಟ್ಟಡಗಳು, ಬಸ್‌ ನಿಲ್ದಾಣ, ಶಿಕ್ಷಣ ಸಂಸ್ಥೆಗಳು, ಬಹುಮಹಡಿ ಕಟ್ಟಡ, ವಸತಿ ಸಮುಚ್ಚಯ, ಕಚೇರಿಗಳಲ್ಲಿ ಸಿಸಿ ಕೆಮರಾ ಅಳವಡಿಸಬೇಕೆಂಬ ನಿಯಮವಿದೆ. ಸಾರ್ವಜನಿಕ ಸೇವೆ ಒದಗಿಸುವ ಅಥವಾ ಹೆಚ್ಚು ಜನ ಸೇರುವ ಎಲ್ಲ ಸರಕಾರಿ, ಖಾಸಗಿ ಸಂಘ-ಸಂಸ್ಥೆಗಳು, ಅಂಗಡಿ-ಮುಂಗಟ್ಟು ಕಟ್ಟಡಗಳಲ್ಲಿ ಸಿಸಿ ಕೆಮರಾ ಕಡ್ಡಾಯವಾಗಿ ಅಳವಡಿಸಬೇಕು ಎಂದು ರಾಜ್ಯ ಸರಕಾರ ಈ ಹಿಂದೆಯೇ ಸೂಚಿಸಿತ್ತು. ನಿಯಮ ಪಾಲನೆ ಮಾಡದವರ ವಿರುದ್ಧ ಪೊಲೀಸ್‌ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದೆ.

75 ಸಿಸಿ ಕೆಮರಾ
ಸ್ಮಾರ್ಟ್‌ಸಿಟಿ ಯೋಜನೆಯ ಮೊದಲನೇ ಹಂತದಲ್ಲಿ ನಗರದ ಪ್ರಮುಖ 15 ಜಂಕ್ಷನ್‌ಗಳಲ್ಲಿ ಒಂದು ಸ್ಮಾರ್ಟ್‌ಫೋಲ್‌ಗ‌ಳಲ್ಲಿ ಐದರಂತೆ 75 ಸಿ.ಸಿ. ಕೆಮರಾಗಳು ಕಣ್ಗಾವಲು ಇರಲಿವೆ. ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳು ನಡೆದಿದ್ದು, ಸ್ಮಾರ್ಟ್‌ಫೋಲ್‌ ಅಳವಡಿಸುವ ಕಾರ್ಯ ಮಾತ್ರ ಬಾಕಿ ಇದೆ.
 - ಮಹಮ್ಮದ್‌ ನಜೀರ್‌, ಮಂಗಳೂರು ಸ್ಮಾರ್ಟ್‌ ಸಿಟಿ ನಿರ್ದೇಶಕ

ಯಾವೆಲ್ಲ ಜಂಕ್ಷನ್‌ ?
ಬಿಜೈ ಕೆಎಸ್ಸಾರ್ಟಿಸಿ, ಪಂಪ್‌ವೆಲ್‌, ವಾಮಂಜೂರು, ಪಡೀಲ್‌, ಮಲ್ಲಿಕಟ್ಟೆ, ಬಿಜೈ, ಬೆಂದೂರು, ಫಳ್ನೀರ್‌, ಮೋರ್ಗನ್ಸ್‌ ಗೇಟ್‌, ಕುಲಶೇಖರ ಶಕ್ತಿನಗರ ಕ್ರಾಸ್‌, ಕೊಟ್ಟಾರ ಚೌಕಿ, ಕುಂಟಿಕಾನ, ರಾವ್‌ ಆ್ಯಂಡ್‌ ರಾವ್‌ ವೃತ್ತ, ಪದವಿನಂಗಡಿ, ಕಾವೂರು ಜಂಕ್ಷನ್‌ನಲ್ಲಿ ಸಿಸಿ ಕೆಮರಾ ಅಳವಡಿಸಲು ಸಿದ್ಧತೆ ನಡೆಯುತ್ತಿದೆ.

ಸುರಕ್ಷತೆಗೆ ಆದ್ಯತೆ
ನಗರವನ್ನು ಕಣ್ಗಾವಲಿನಲ್ಲಿಡುವ ನಿಟ್ಟಿನಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಹೆಚ್ಚಿನ ಸಿ.ಸಿ. ಕೆಮರಾಗಳನ್ನು ಅಳವಡಿಸಲಾಗುತ್ತಿದೆ. ಇನ್ನು, ನಗರದಲ್ಲಿ ಸಾರ್ವ ಜನಿಕ ಸುರಕ್ಷತಾ ನಿಯಮಗಳನ್ನು ಯಾರು ಪಾಲನೆ ಮಾಡುವುದಿಲ್ಲವೋ ಅಂಥವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.
 - ಡಾ| ಪಿ.ಎಸ್‌. ಹರ್ಷಾ, ನಗರ ಪೊಲೀಸ್‌ ಆಯುಕ್ತ

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.