”ಸ್ಮಾರ್ಟ್‌ ಕ್ಲಾಕ್‌ ಟವರ್‌’: ಕಾಮಗಾರಿ ಮುಗಿದರೂ ಉದ್ಘಾಟನೆ ಭಾಗ್ಯವಿಲ್ಲ !


Team Udayavani, Dec 15, 2020, 5:15 AM IST

 ”ಸ್ಮಾರ್ಟ್‌ ಕ್ಲಾಕ್‌ ಟವರ್‌’: ಕಾಮಗಾರಿ ಮುಗಿದರೂ ಉದ್ಘಾಟನೆ ಭಾಗ್ಯವಿಲ್ಲ !

ಮಹಾನಗರ: ನಗರಕ್ಕೆ ಕಲಶಪ್ರಾಯದಂತಿರುವ ಹಂಪನಕಟ್ಟೆ ಯಲ್ಲಿ ರುವ ಸ್ಮಾರ್ಟ್‌ ಕ್ಲಾಕ್‌ ಟವರ್‌ ಕಾಮಗಾರಿ ಪೂರ್ಣ ಗೊಂಡು ತಿಂಗಳು ಕಳೆದರೂ ಉದ್ಘಾಟನೆಗೆ ಮಾತ್ರ ಇನ್ನೂ ಮುಹೂರ್ತ ಕೂಡಿ ಬಂದಿಲ್ಲ !

ಮಂಗಳೂರಿನ ಹೆಗ್ಗುರುತಾದ ಕ್ಲಾಕ್‌ ಟವರ್‌ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಕೆಲವು ತಿಂಗಳ ಹಿಂದೆಯೇ ಗೋಪುರದ ನಾಲ್ಕೂ ದಿಕ್ಕಿಗೂ ಗಡಿಯಾರವನ್ನು ಅಳವಡಿಸಲಾಗಿದೆ. ಗೋಪುರದ ಸುತ್ತಲೂ ಕಟ್ಟೆ ನಿರ್ಮಾಣ ಕೂಡ ಇತ್ತೀಚೆಗೆ ಪೂರ್ಣಗೊಂಡಿದ್ದು, ರಾತ್ರಿ ವೇಳೆ ಆಕರ್ಷಣೀಯವಾಗಿ ಕಾಣಲೆಂದು ಗೋಪುರದಲ್ಲಿ ಲೈಟ್‌ ವ್ಯವಸ್ಥೆ ಮಾಡಲಾಗಿದೆ. ಆದರೂ ಕ್ಲಾಕ್‌ ಟವರ್‌ ಉದ್ಘಾಟನೆಗೆ ಮಾತ್ರ ಜನಪ್ರತಿನಿಧಿಗಳು ಆಸಕ್ತಿ ತೋರುತ್ತಿಲ್ಲ.

ನಗರದಲ್ಲಿ ಸಮಯ ಸೂಚಕವಾಗಿ ಹಲವು ವರ್ಷಗಳ ಹಿಂದೆ ಹಂಪನಕಟ್ಟೆಯಲ್ಲಿ ಕ್ಲಾಕ್‌ ಟವರ್‌ ನಿರ್ಮಾಣ ಮಾಡಲಾಗಿತ್ತು. ನಗರದಲ್ಲಿ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಬಾರದು ಎಂಬ ಉದ್ದೇಶದಿಂದ 1994ರಲ್ಲಿ ಟವರ್‌ ಅನ್ನು ಕೆಡಹಲಾಗಿತ್ತು. ಬಳಿಕ ಇದೇ ಜಾಗದಲ್ಲಿ ಹಿಂದಿನ ಕ್ಲಾಕ್‌ ಟವರ್‌ನ ನೆನಪಿಗಾಗಿ ಹೊಸದಾಗಿ ನಿರ್ಮಿಸಲು ಪಾಲಿಕೆ ಮೇಯರ್‌ ಆಗಿದ್ದ ಕವಿತಾ ಸನಿಲ್‌ ನಿರ್ಧರಿಸಿ 2018ರಲ್ಲಿ ಕಾಮಗಾರಿ ಆರಂಭಿಸಲಾಗಿತ್ತು. ಬಳಿಕ ಈ ಯೋಜನೆಯನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ ಕಾಮಗಾರಿ ಮುಂದುವರಿಸಲಾಗಿತ್ತು.

ಸುಮಾರು 90 ಲಕ್ಷ ರೂ. ವೆಚ್ಚ
ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ನಿರ್ಮಾಣಗೊಂಡಿರುವ ಕ್ಲಾಕ್‌ ಟವರ್‌ ರಾಜ್ಯದಲ್ಲಿಯೇ ಅತೀ ದೊಡ್ಡªದು. ಈ ಯೋಜನೆಗೆ ಸುಮಾರು 90 ಲಕ್ಷ ರೂ. ವೆಚ್ಚವಾಗಿದ್ದು, ಇಷ್ಟೊಂದು ಹಣ ಖರ್ಚು ಮಾಡಿ ನಿರ್ಮಾಣ ಮಾಡಬೇಕಾ? ಎಂಬ ಬಗ್ಗೆ ಸಾರ್ವಜನಿಕಕ ವಲಯದಲ್ಲಿ ಅಪಸ್ವರವೂ ಕೇಳಿಬಂದಿತ್ತು.

ಇಟಲಿಯಿಂದ ತಂದ ಯಂತ್ರ
ಸುಮಾರು 88 ಅಡಿ ಸುತ್ತಳತೆ ಹೊಂದಿ ರುವ ಈ ಕ್ಲಾಕ್‌ಟವರ್‌ನಲ್ಲಿ ಬಳಕೆ ಯಾಗುವ ಗಡಿಯಾರಕ್ಕೆ ಯಂತ್ರೋ ಪಕರಣಗಳನ್ನು ಇಟಲಿಯಿಂದ ಆಮದು ಮಾಡಿಕೊಳ್ಳಲಾಗಿದೆ. 8 ಬಗೆಯ ಬೆಲ್‌ ಮಾಡುವ ಸಾಮರ್ಥ್ಯ ಇರುವ ಮೈಕ್ರೋ ಪ್ರೊಸೆಸರ್‌ ಕೂಡ ಇದರಲ್ಲಿದೆ. ಈ ಕ್ಲಾಕ್‌ಗೆ
ಅಕ್ರೇಲಿಕ್‌ ಶೀಟ್‌, ಸ್ಟೈನ್‌ಲೆಸ್‌ ಸ್ಟೀಲ್‌ ಹಾಗೂ ಎಸಿಪಿ ಶೀಟ್‌ಗಳನ್ನು ಬಳಸಿ ಕೊಂಡು ಸಿದ್ಧಪಡಿಸಿಕೊಂಡಿದ್ದು, ಈಗಾಗಲೇ ಗೋಪುರದ ನಾಲ್ಕು ಬದಿಗಳಲ್ಲಿ ನಾಲ್ಕು ಕ್ಲಾಕ್‌ ಮಾದರಿಗಳಿದ್ದು, ಅವುಗಳಿಗೆ ಯಂತ್ರಗಳನ್ನು ಅಳವಡಿಸಲಾಗಿದೆ. ಆದರೆ ಅನೇಕ ದಿನಗಳಿಂದ ಗಡಿಯಾರದ ಮುಳ್ಳು ಗಳು ತಿರುಗುತ್ತಿಲ್ಲ. ಸರಿಯಾದ ಸಮಯ ತೋರಿಸಬೇಕಾಗಿದ್ದ ಗಡಿ ಯಾರ ಕೆಟ್ಟು ಹೋಗಿದೆ.

1930ರ ದಶಕದಲ್ಲಿ ನಾಯಕ್‌ ಕ್ಲಾಕ್ಸ್‌ ಸಂಸ್ಥೆಯನ್ನು ಹುಟ್ಟುಹಾಕಿದ ವಾಮನ್‌ ನಾಯಕ್‌ ಅವರು ಕುಡ್ಲದ ಕ್ಲಾಕ್‌ ಟವರ್‌ಗೆ 1964ರಲ್ಲಿ ಕ್ಲಾಕ್‌ ನಿರ್ಮಿಸಿಕೊಟ್ಟಿದ್ದರು. ಇದು ಪೂರ್ಣವಾಗಿ ಯಂತ್ರಿಕ ಬಲ ದಿಂದಲ್ಲೇ ಓಡುವ ಗಡಿಯಾರವಾಗಿತ್ತು. ವಾರಕ್ಕೆ ಒಂದು ಸಲ ಕೀ ಕೊಡಬೇಕಿತ್ತು.

ಕೊನೆಯ ಹಂತದ ಕೆಲಸ
ಮಂಗಳೂರಿಗೆ ಕಲಶಪ್ರಾಯದಂತಿರುವ ಕ್ಲಾಕ್‌ಟವರ್‌ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಕೊನೆಯ ಹಂತದ ಕೆಲಸ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಕ್ಲಾಕ್‌ಟವರ್‌ ಉದ್ಘಾಟನೆಗೊಳ್ಳಲಿದೆ.
-ಡಿ. ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.