ಸ್ಮಾರ್ಟ್‌ಸಿಟಿ ರಸ್ತೆಗಳು ಹಳೆ ವಾಹನಗಳ ಡಂಪಿಂಗ್‌ ತಾಣವಾಗುತ್ತಿವೆ!


Team Udayavani, Oct 13, 2018, 10:11 AM IST

13-october-1.gif

ಮಹಾನಗರ : ನಗರದ ವಿವಿಧ ಭಾಗಗಳಲ್ಲಿ ಹಳೆಯ, ತುಕ್ಕು ಹಿಡಿದ ನಿರುಪಯುಕ್ತ ವಾಹನಗಳನ್ನು ನಿಲ್ಲಿಸಲಾಗಿದ್ದು, ಈ ಬಗ್ಗೆ ಕ್ರಮ ತೆಗೆದು ಕೊಳ್ಳಬೇಕಾದ ಅಧಿಕಾರಿಗಳು ಕಂಡು ಕಾಣದಂತೆ ಸುಮ್ಮನಿರುವುದರಿಂದ ಪ್ರಮುಖ ಒಳರಸ್ತೆಗಳು ಹಳೆ ವಾಹನ ಪಾರ್ಕಿಂಗ್‌ ಸ್ಥಳವಾಗಿ ಬದಲಾಗುತ್ತಿವೆ.

ಸ್ಮಾರ್ಟ್‌ಸಿಟಿಗಳ ಪಟ್ಟಿಗೆ ಸೇರಿರುವ ಮಂಗಳೂರು, ಸ್ವಚ್ಛ ಸುಂದರ ನಗರ ಎಂಬ ಹೆಸರನ್ನು ಪಡೆದುಕೊಂಡಿದೆ. ಆದರೆ ಕೆಲವು ಸಣ್ಣಪುಟ್ಟ ಸಮಸ್ಯೆಗಳಿಂದ ನಗರಕ್ಕೆ ಕಪ್ಪು ಚುಕ್ಕೆ ಇಟ್ಟಂತಾಗಿದೆ. ನಗರದ ಪ್ರಮುಖ ಭಾಗಗಳಲ್ಲಿ ಹಳೆಯ, ಉಪಯೋಗ ಶೂನ್ಯವಾದ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಲಾಗಿದ್ದು, ಇದು ನಗರದ ಸ್ವಚ್ಛ ಪರಿಕಲ್ಪನೆಗೆ ಧಕ್ಕೆ ತರುವಂತಿದೆ. ಇದರೊಂದಿಗೆ ಟ್ರಾಫಿಕ್‌ ಸಹಿತ ಹಲವು ಸಮಸ್ಯೆಗಳನ್ನು ಜನರು ಎದುರಿಸುವಂತಾಗಿದೆ. ನಗರದ ಮಣ್ಣಗುಡ್ಡೆ, ಲಾಲ್‌ಬಾಗ್‌- ಮಣ್ಣಗುಡ್ಡೆ ಒಳರಸ್ತೆ, ಕದ್ರಿ ಪಾರ್ಕ್‌ ಮುಂಭಾಗ, ಮರೋಳಿ, ಬಂದರು, ಬರ್ಕೆ ಸಹಿತ ಹಲವು ಭಾಗಗಳಲ್ಲಿ ಉಪಯೋಗ ಶೂನ್ಯ ವಾಹನಗಳನ್ನು ನಿಲ್ಲಿಸಲಾಗುತ್ತಿದೆ.

ಗ್ಯಾರೇಜ್‌ ಆವರಣಗಳೇ ಹಳೆ ವಾಹನಗಳ ಪಾರ್ಕಿಂಗ್‌ ಸ್ಪಾಟ್‌
ನಗರದ ಬಹುತೇಕ ಗ್ಯಾರೇಜ್‌ ಆವರಣಗಳಲ್ಲಿ ತುಕ್ಕು ಹಿಡಿದ ಉಪಯೋಗ ಶೂನ್ಯ ವಾಹನಗಳನ್ನು ನಿಲುಗಡೆ ಮಾಡಲಾಗಿದೆ. ಅದರಲ್ಲೂ ಕೆಲವು ಗ್ಯಾರೇಜ್‌ಗಳು ಸಾರ್ವಜನಿಕ ಸ್ಥಳಗಳನ್ನು ದುರ್ಬಳಕೆ ಮಾಡಿಕೊಂಡು ವಾಹನ ನಿಲುಗಡೆ ಮಾಡುತ್ತಿವೆ. ಇದರಿಂದ ಅದರ ಆಸುಪಾಸಿನಲ್ಲಿ ವಾಸಿಸುವ ಹಾಗೂ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅದರೊಂದಿಗೆ ಆ ಭಾಗದ ಸ್ವಚ್ಛತೆಯನ್ನು ಕಡೆಗಣಿಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡಿರುವ ಕುರಿತು ಅಧಿಕಾರಿಗಳ ಗಮನಕ್ಕೆ ಬಂದರೂ ಆ ಬಗ್ಗೆ ಕ್ರಮ ಜರಗಿಸಲು ಹಿಂದೇಟು ಹಾಕುತ್ತಿದ್ದಾರೆ.

ಸೀಸ್‌ ಮಾಡಿದ ವಾಹನ ಠಾಣೆ ಮುಂಭಾಗ
ರಸ್ತೆ ಬದಿಗಳಲ್ಲಿ ನಿರುಪಯುಕ್ತ ವಾಹನಗಳನ್ನು ಪಾರ್ಕ್‌ ಮಾಡಿದಾಗ ಸಮಸ್ಯೆಯಾಗುತ್ತದೆ ಎಂದು ಪೊಲೀಸ್‌ ಅಧಿಕಾರಿಗಳಿಗೆ ಮಾಹಿತಿ ನೀಡಲು ಹೋದರೆ ಪೊಲೀಸ್‌ ಠಾಣೆ ಆವರಣಗಳಲ್ಲೇ ಹಳೆ ವಾಹನಗಳ ಸಾಲೇ ಕಾಣಸಿಗುತ್ತದೆ. ನಗರದ ಬಹುತೇಕ ಪೊಲೀಸ್‌ ಠಾಣೆ ಆವರಣ ಸೀಸ್‌ ಮಾಡಿದ ವಾಹನಗಳನ್ನು ನಿಲ್ಲಿಸಲು ಸ್ಥಳವಕಾಶದ ಕೊರತೆಯಿಂದ ಠಾಣೆಯ ಆಸುಪಾಸಲ್ಲಿ ವಾಹನಗಳನ್ನು ಪಾರ್ಕ್‌ ಮಾಡುತ್ತಿದ್ದಾರೆ. ಇದರಿಂದ ಇತರ ವಾಹನ ಸವಾರರು ಸಂಕಷ್ಟ ಎದುರಿಸುವಂತಾಗಿದೆ. 

ಕಚೇರಿ ಆವರಣಗಳಲ್ಲೇ ತುಕ್ಕು ಹಿಡಿದ ವಾಹನಗಳ ರಾಶಿ
ನಗರದ ಬಹುತೇಕ ಸರಕಾರಿ ಕಚೇರಿಗಳ ಆವರಣದಲ್ಲೇ ಉಪಯೋಗ ಶೂನ್ಯ ವಾಹನಗಳನ್ನು ಪಾರ್ಕ್‌ ಮಾಡಲಾಗುತ್ತಿದೆ. ಪಾಲಿಕೆ ಆವರಣ, ಅರಣ್ಯ ಇಲಾಖೆ ಕಟ್ಟಡ ಸಹಿತ ಸರಕಾರಿ ಕಚೇರಿಗಳ ಆವರಣಗಳಲ್ಲೇ ತುಕ್ಕು ಹಿಡಿದ ವಾಹನಗಳು ಹಲವು ಸಮಯಗಳಿಂದ ನಿಲುಗಡೆಯಾಗಿವೆ. ಅಚ್ಚರಿ ಎಂದರೆ ಹೀಗೆ ನಿಂತ ವಾಹನಗಳ ಸುತ್ತ ಹುಲ್ಲು ಬೆಳೆದರೂ ಅಧಿಕಾರಿಗಳು ಮಾತ್ರ ಗಮನ ಹರಿಸುತ್ತಿಲ್ಲ.

ನಿರುಪಯುಕ್ತ ವಾಹನ ಪತ್ತೆಹಚ್ಚಲು ಸೂಚನೆ
ನಿರುಪಯುಕ್ತ ವಾಹನಗಳನ್ನು ಪತ್ತೆಹಚ್ಚಿ ಅವುಗಳ ಫೋಟೋ ಸಹಿತ ವಿವರಗಳನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಂಗ್ರಹಿಸಿದ ಮಾಹಿತಿಯನ್ನು ಟ್ರಾಫಿಕ್‌ ಪೊಲೀಸರಿಗೆ ನೀಡಿ ತೆರವಿಗೆ ಮನವಿ ಮಾಡಲಾಗುವುದು.
– ಗೋಕುಲ್‌ದಾಸ್‌ ನಾಯಕ್‌, 
 ಜಂಟಿ ಆಯುಕ್ತರು ಮನಪಾ

ವಿಶೇಷ ವರದಿ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.