ಹಳೆ ಡಿಸಿ ಕಚೇರಿ ಅಭಿವೃದ್ಧಿ ಯೋಜನೆ ಕೈಬಿಟ್ಟ ಸ್ಮಾರ್ಟ್‌ಸಿಟಿ


Team Udayavani, Jun 10, 2020, 3:23 PM IST

ಹಳೆ ಡಿಸಿ ಕಚೇರಿ ಅಭಿವೃದ್ಧಿ ಯೋಜನೆ ಕೈಬಿಟ್ಟ ಸ್ಮಾರ್ಟ್‌ಸಿಟಿ

ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡ.

ಮಹಾನಗರ: ಇತಿಹಾಸ ಪರಂಪರೆಯನ್ನು ಕಾಪಾಡುತ್ತ ಬಂದಿರುವ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದ ಹತ್ತಿರವಿರುವ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣವನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಬೆಸೆದುಕೊಳ್ಳುವ ಯೋಜನೆಯನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕೈಬಿಡಲಾಗಿದೆ.

ಹಳೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎರಡು ಪ್ರತ್ಯೇಕ ಕಟ್ಟಡಗಳಿವೆ. ಈ ಪೈಕಿ ಒಂದು ಕಟ್ಟಡದಲ್ಲಿ ಮತ ಎಣಿಕೆ ಆದ ಬಳಿಕ ಸೂಕ್ತ ಭದ್ರತೆಯೊಂದಿಗೆ ಇವಿಎಂ ಮೆಷಿನ್‌ಗಳು ಇರುವುದು ಹಾಗೂ ಇನ್ನೊಂದು ಕಟ್ಟಡದಲ್ಲಿ ಜಿಲ್ಲಾಡಳಿತದ ಅಮೂಲ್ಯ ದಾಖಲೆಗಳು ಇರುವ ಕಾರಣದಿಂದ ಸದ್ಯಕ್ಕೆ ಇವುಗಳ ತೆರವು ಕಷ್ಟಸಾಧ್ಯವಾದ್ದರಿಂದ ಈ ಕಟ್ಟಡದ ಅಭಿವೃದ್ಧಿಯನ್ನು ಸದ್ಯಕ್ಕೆ ಕೈ ಬಿಡಲಾಗಿದೆ. ಮತ ಎಣಿಕೆಯ ಬಗ್ಗೆ ಯಾರಿಗಾದರೂ ಆಕ್ಷೇಪಗಳಿದ್ದರೆ ನಿಗದಿತ ದಿನಾಂಕದೊಳಗೆ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಈ ಸಂದರ್ಭ ನ್ಯಾಯಾಲ ಯದ ಆದೇಶದ ಮೇರೆಗೆ ಮರು ಎಣಿಕೆ ಮಾಡಬೇಕಾದ ಅಗತ್ಯತೆ ಇದ್ದರೆ ಅಂತಹ ಸಂದರ್ಭಕ್ಕೆ ಅಗತ್ಯವಾಗಿ ಇವಿಎಂ ಮೆಷಿನ್‌ಗಳನ್ನು ಭದ್ರವಾಗಿ ಇಡಲಾಗುತ್ತದೆ. ಜತೆಗೆ ಜಿಲ್ಲಾಡಳಿತಕ್ಕೆ ಅಗತ್ಯವಿರುವ ದಾಖಲೆಗಳು ಕಟ್ಟಡದಲ್ಲಿ ಇರುವ ಹಿನ್ನೆಲೆಯಲ್ಲಿ ಇವುಗಳನ್ನು ಇರಿಸಿಕೊಂಡು ಸ್ಮಾರ್ಟ್‌ ಸಿಟಿಯ ಕೆಲಸ ಮಾಡುವುದು ಕಷ್ಟ ಎಂಬ ಕಾರಣದಿಂದ ಇದನ್ನು ಕೈಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ಫಲಕ
“1914-1919ರ ಮಹಾಯುದ್ದದಲ್ಲಿ ಈ ಹಳ್ಳಿಯಿಂದ 88 ಮಂದಿ ಭಾಗವಹಿಸಿದ್ದಾರೆ. ಅವರಲ್ಲಿ 2 ಮಂದಿ ಮರಣ ಹೊಂದಿದ್ದಾರೆ’ ಎಂಬ ಕುತೂಹಲಕಾರಿಯಾದ ಮಾಹಿತಿ ಫಲಕ ಈಗಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾಣಸಿಗುತ್ತದೆ. ಇಲ್ಲಿ ಗೋಪುರ ಸ್ವರೂಪದ ರಚನೆಯೂ ಇದೆ. ಫಲಕ ಹಾಗೂ ಗೋಪುರ ಈಗಲೂ ಇವೆ. ಇಂತಹ ಇತಿಹಾಸವನ್ನು ಸಾರುವ ಕಟ್ಟಡವನ್ನು ಕಾಪಾಡುವ ನೆಲೆಯಲ್ಲಿ ಸ್ಮಾರ್ಟ್‌ ಮಂಗಳೂರು ಯೋಜನೆಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿತ್ತು. ಈಗ ಇರುವ ಕಚೇರಿಗೆ ಯಾವುದೇ ಧಕ್ಕೆ ಆಗದಂತೆ ಎಚ್ಚರಿಕೆ ವಹಿಸಿಕೊಂಡು ಪಾರಂಪರಿಕ ಮಾದರಿಯಲ್ಲಿ ರಕ್ಷಿಸಿಕೊಳ್ಳುವುದು ಸ್ಮಾರ್ಟ್‌ ಸಿಟಿ ಉದ್ದೇಶವಾಗಿತ್ತು. ಪ್ರವಾಸೋದ್ಯಮಕ್ಕೆ ಪೂರಕವಾಗಿ ಮ್ಯೂಸಿಯಂ ನಿರ್ಮಾಣದ ಯೋಜನೆಯಿತ್ತು. ಆರ್ಟ್‌ ಗ್ಯಾಲರಿ ನಿರ್ಮಾಣಕ್ಕೂ ಉದ್ದೇಶಿಸಲಾಗಿತ್ತು.

 ಯೋಜನೆ ಸದ್ಯಕ್ಕೆ ಕೈಬಿಡಲಾಗಿದೆ
ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಹಳೆಯ ಕಚೇರಿ ಆವರಣವನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿತ್ತು. ಆದರೆ, ಅಲ್ಲಿ ಇವಿಎಂ ಮೆಷಿನ್‌ ಹಾಗೂ ದಾಖಲೆಗಳು ಇರುವ ಕಾರಣದಿಂದ ಸದ್ಯಕ್ಕೆ ಅಭಿವೃದ್ಧಿಪಡಿಸಲು ಕಷ್ಟ. ಹೀಗಾಗಿ ಮುಂದಿನ ಎರಡು ವರ್ಷಗಳವರೆಗೆ ಈ ಯೋಜನೆಯನ್ನು ಕೈಬಿಡಲಾಗಿದೆ. ಜಿಲ್ಲಾಡಳಿತದಿಂದ ಅನಂತರ ಅನುಮತಿ ಪಡೆದು ಮುಂದಿನ ಯೋಜನೆ ರೂಪಿಸಲಾಗುವುದು.
– ಮೊಹಮ್ಮದ್‌ ನಝೀರ್‌, ವ್ಯವಸ್ಥಾಪಕ ನಿರ್ದೇಶಕರು, ಸ್ಮಾರ್ಟ್‌ ಸಿಟಿ ಮಂಗಳೂರು

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.