ಕಸದ ಲಾರಿ ನಿಲುಗಡೆಯಿಂದ ದುರ್ವಾಸನೆ: ಹಳೆಯಂಗಡಿ ಗ್ರಾಮಸ್ಥರ ಆಕ್ಷೇಪ


Team Udayavani, Apr 26, 2018, 11:03 AM IST

26-April-5.jpg

ಹಳೆಯಂಗಡಿ: ಇಲ್ಲಿನ ಗಾಮ ಪಂಚಾಯತ್‌ ವ್ಯಾಪ್ತಿಯ ಹೆದ್ದಾರಿ ಬದಿಯಲ್ಲಿ ಎಷ್ಟೇ ಬಾರಿ ಕಸ ವಿಲೇವಾರಿ ಮಾಡಿದರೂ ಸಹ ಮತ್ತೆ ಮತ್ತೆ ಕಸ ಸುರಿಯುವುದು ಮಾತ್ರ ನಿಂತಿಲ್ಲ. ಈಗ ಪಂಚಾಯತ್‌ ವ್ಯಾಪ್ತಿಯಲ್ಲಿ ಕಸ ತುಂಬಿದ ಲಾರಿಯನ್ನು ಜನ ವಸತಿ ಪ್ರದೇಶದಲ್ಲಿ ನಿಲ್ಲಿಸಿರುವುದರಿಂದ ಪರಿಸರದಲ್ಲಿ ದುರ್ವಾಸನೆ ಬರುತ್ತಿದೆ ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಳೆಯಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮನೆ ಮನೆಯಿಂದ ಕಸವನ್ನು ಸಣ್ಣ ಟೆಂಪೋದಲ್ಲಿ ಸಂಗ್ರಹಿಸಿ ಅದನ್ನು ಮಿನಿ ಲಾರಿಗೆ ತುಂಬಿಸಿ ಎರಡು ಅಥವಾ ಮೂರು ದಿನಕ್ಕೊಮ್ಮೆ ಸೂಕ್ತವಾಗಿ ವಿಲೇವಾರಿ ಮಾಡುವ ಕ್ರಮವನ್ನು ಅನು ಸರಿಸಲಾಗುತ್ತದೆ. ಆದರೆ ಈ ಮಿನಿ ಲಾರಿಯನ್ನು ಜನ ವಸತಿ ಪ್ರದೇಶದಲ್ಲಿ ತಂದು ಖಾಯಂ ಆಗಿ ರಾತ್ರಿ ಹಗಲು ನಿಲ್ಲಿಸುವುದರಿಂದ, ಆ ಪ್ರದೇಶದಲ್ಲಿ ಕೆಟ್ಟ ವಾಸನೆ ಬರುತ್ತದೆ. ಅಲ್ಲದೇ ಬೀದಿ ನಾಯಿಗಳು ತ್ಯಾಜ್ಯ ಪ್ರದೇಶದಲ್ಲಿ ಸುತ್ತಾಡುವುದರಿಂದ ಪ್ರದೇಶವೆಲ್ಲಾ ತ್ಯಾಜ್ಯಮಯವಾಗುತ್ತಿದೆ ಎಂದು ಆರೋಪಿಸಲಾಗಿದೆ.

ಹೆದ್ದಾರಿಯಿಂದ ಜನವಸತಿ ಪ್ರದೇಶಕ್ಕೆ
ಈ ಹಿಂದೆ ಈ ಮಿನಿ ಲಾರಿಯನ್ನು ರಾಷ್ಟ್ರೀಯ ಹೆದ್ದಾರಿಯ ಖಾಸಗಿ ನರ್ಸರಿ ಬಳಿ ನಿಲ್ಲಿಸಲಾಗುತ್ತಿತ್ತು. ಅಲ್ಲಿಯೂ ಬೃಹತ್‌ ಜನವಸತಿ ಸಂಕೀರ್ಣ ಇರುವುದರಿಂದ ನಿಲ್ಲಿಸಿದ್ದ ಲಾರಿಯ ತ್ಯಾಜ್ಯವನ್ನು ಹಕ್ಕಿಗಳು ಸುತ್ತಮುತ್ತ ಪ್ರದೇಶಕ್ಕೆ ಕೊಂಡೊಯ್ದು ಕೆಟ್ಟ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದಾಗ ಅಲ್ಲಿಂದ ಹೆದ್ದಾರಿಯಲ್ಲಿನ ಪೆಟ್ರೋಲ್‌ ಪಂಪ್‌ನ ಮುಂಭಾಗದ ಗುಡ್ಡೆ ಪ್ರದೇಶದಲ್ಲಿ ನಿಲ್ಲಿಸಲಾಗಿತ್ತು. ಇಲ್ಲಿ ನಿಲ್ಲಿಸಿದ್ದ ಮಿನಿ ಲಾರಿಯ ಟಯರ್‌ ಹಾಗೂ ಬ್ಯಾಟರಿಯನ್ನು ಕಿಡಿಗೇಡಿಗಳು ಅಪಹರಿಸಿ ಲಾರಿ ಮಾಲಕರಿಗೆ ನಷ್ಟವುಂಟು ಮಾಡಿದ್ದರು.

ಅನಂತರ ಇಂದಿರಾನಗರದ ಲೈಟ್‌ ಹೌಸ್‌ನ ರೈಲ್ವೇ ಗೇಟ್‌ ಬಳಿಯ ಪ್ರದೇಶದಲ್ಲಿ ನಿಲ್ಲಿಸಲಾಗಿದೆ ಈಗ ಇಲ್ಲಿಂದಲೂ ಸಹ ಬಲವಾದ ಆಕ್ಷೇಪ ಕೇಳಿ ಬಂದಿದೆ. ಗ್ರಾಮ ಪಂಚಾಯತ್‌ ಗೆ ಸೂಕ್ತವಾದ ತ್ಯಾಜ್ಯ ವಿಲೇವಾರಿಯ ಜಮೀನು ಮಂಜೂರಾತಿಯಾಗದೇ ಇರುವುದರಿಂದ ಈ ಸಮಸ್ಯೆ ಕಾಡುತ್ತಲೇ ಇದೆ.

ಗುತ್ತಿಗೆದಾರರಿಗೆ ಸೂಚಿಸಿದ್ದೇವೆ 
ಮಿನಿ ಲಾರಿಯನ್ನು ಈಗಾಗಲೇ ಆಕ್ಷೇಪ ಬಂದ ಪ್ರದೇಶದಿಂದ ಮೂರು ಕಡೆಗಳಿಂದ ಶಿಫ್ಟ್‌ ಮಾಡಲಾಗಿದೆ. ತ್ಯಾಜ್ಯದ ಮೇಲೆ ಸೂಕ್ತವಾದ ಪ್ಲಾಸ್ಟಿಕ್‌ ಹೊದಿಕೆ ಹಾಕಲು ಸೂಚಿಸಲಾಗಿದೆ. ತ್ಯಾಜ್ಯವನ್ನು ಕೆಳಗೆ ಸುರಿಯದಿರಲು ನಿರ್ದೇಶಿಸಲಾಗಿದೆ. ಸೂಕ್ತವಾದ ತ್ಯಾಜ್ಯ ವಿಲೇವಾರಿಗೆ ಜಮೀನು ಇಲ್ಲದಿರುವುದರಿಂದ ಜನರು ಸಹಕಾರ ನೀಡಬೇಕು. ತ್ಯಾಜ್ಯವನ್ನು ದುರ್ವಾಸನೆಯಿಂದ ಮುಕ್ತವಾಗಿಡಲು ಪ್ರಯತ್ನ ನಡೆಸಿದ್ದೇವೆ.
 – ಕೇಶವ ದೇವಾಡಿಗ
   ಪ್ರಭಾರ ಪಿಡಿಒ ಹಳೆಯಂಗಡಿ ಗ್ರಾ.ಪಂ.

ಮಕ್ಕಳನ್ನು ಹೊರಗೆ ಕಳುಹಿಸಲು ಹೆದರಿಕೆ
ಸುತ್ತಮುತ್ತ ಮನೆಗಳಿರುವ ಪ್ರದೇಶದಲ್ಲಿ ತ್ಯಾಜ್ಯ ತುಂಬಿದ ಲಾರಿಯನ್ನು ಇಡುವುದರಿಂದ ಹಾಗೂ ಸಣ್ಣ ಟೆಂಪೋದಿಂದ ಮಿನಿ ಲಾರಿಗೆ ತುಂಬಿಸುವಾಗ ಸುತ್ತಮುತ್ತ ಪ್ರದೇಶದಲ್ಲಿ ತ್ಯಾಜ್ಯ ಸುರಿಯುವುದರಿಂದ ಬೀದಿ ನಾಯಿಗಳ ಕಚ್ಚಾಟದ ತಾಣವಾಗಿದೆ. ಕೆಟ್ಟ ವಾಸನೆಯೊಂದಿಗೆ ಪ್ರದೇಶವೆಲ್ಲ ದುರ್ವಾಸನೆ ಮೂಡಿದೆ. ನಾಯಿಗಳ ಕಾಟದಿಂದ ಮಕ್ಕಳನ್ನು ಹೊರಗೆ ಕಳುಹಿಸಲು ಹೆದರಿಕೆಯಾಗುತ್ತಿದೆ.
 - ಮನೋಜ್‌ಕುಮಾರ್‌
     ಇಂದಿರಾನಗರ

 ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.