ಕಾಂಗ್ರೆಸ್‌ನಿಂದ ಸಾಮಾಜಿಕ ನ್ಯಾಯ: ರೈ


Team Udayavani, Sep 22, 2017, 11:07 AM IST

22-Maniapl-3.jpg

ವಿಟ್ಲ : ಕುಮ್ಕಿ ಹಕ್ಕು ರದ್ದುಗೊಳಿಸಿ, ಬಡವರಿಗೆ ಹಕ್ಕುಪತ್ರ ನೀಡಿ ಸಾಮಾಜಿಕ ನ್ಯಾಯ ನೀಡಿರುವುದು ಕಾಂಗ್ರೆಸ್‌ ಸರಕಾರ. ದುರ್ಬಲ ವರ್ಗದವರಿಗೆ ಅವಕಾಶಗಳನ್ನು ಕಲ್ಪಿಸುತ್ತಲೇ ಬಂದ ಕಾಂಗ್ರೆಸ್‌ ಸರಕಾರ ಅದನ್ನು ಇಂದಿಗೂ ಮುಂದುವರಿಸುತ್ತಿದೆ ಎಂದು ಸಚಿವ ಬಿ. ರಮಾನಾಥ ರೈ ಹೇಳಿದರು.

ಅವರು ಗುರುವಾರ ವೀರಕಂಭ ಗ್ರಾಮದಿಂದ ಪ್ರತ್ಯೇಕಿಸಲ್ಪಟ್ಟು ಬೋಳಂತೂರು ಗ್ರಾಮ ಪಂಚಾಯತ್‌ ಆಗಿ ಪರಿವರ್ತನೆಗೊಂಡ ನೂತನ ಗ್ರಾಮ ಪಂಚಾಯತ್‌ನ ಕಟ್ಟಡ ಉದ್ಘಾಟನೆ, ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು 94ಸಿ ಹಕ್ಕುಪತ್ರ ಹಾಗೂ ವಿವಿಧ ಸವಲತ್ತುಗಳ ವಿತರಿಸಿ, ಸಮಾರಂಭದಲ್ಲಿ ಮಾತನಾಡಿದರು.

ಇಂದು ಕರ್ನಾಟಕ ರಾಜ್ಯವನ್ನು ಸರಕಾರ ಹಸಿವು ಮುಕ್ತ ಕರ್ನಾಟಕವನ್ನಾಗಿ ಮಾಡಿದ್ದು ಅಲ್ಪಸಂಖ್ಯಾಕ ಸಾಲ, ಅಂಬೇಡ್ಕರ್‌ ಮನೆ ಸಾಲ, ಆಶ್ರಯ ಮನೆ ಸಾಲ, ವಿದ್ಯುತ್‌ ಶುಲ್ಕಗಳನ್ನು ಮನ್ನಾ ಮಾಡಿದೆ ಎಂದರು.

ಜಿ.ಪಂ. ಸದಸ್ಯರಾದ ಎಂ.ಎಸ್‌. ಮಹಮ್ಮದ್‌, ಚಂದ್ರಪ್ರಕಾಶ್‌ ಶೆಟ್ಟಿ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಟಾಸ್‌ ಆಲಿ, ಸದಸ್ಯೆ ಶೋಭಾ ರೈ, ಸ್ಥಾಯೀ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ, ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಬೋಳಂತೂರು ಗ್ರಾ.ಪಂ. ಅಧ್ಯಕ್ಷೆ ಆಸ್ಯಮ್ಮ ಮತ್ತು ಸದಸ್ಯರು, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ ಎಂಜಿನಿಯರ್‌ ಜಯಾನಂದ, ಆರ್‌ಎಫ್‌ಒ ಸುರೇಶ್‌, ಎಸ್‌ಡಿಎಂಸಿ ಅಧ್ಯಕ್ಷ ಇಸ್ಮಾಯಿಲ್‌ ಮತ್ತಿತರರು ಉಪಸ್ಥಿತರಿದ್ದರು.

ಸಮ್ಮಾನ: ಇದೇ ಸಂದರ್ಭ ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ, ಗ್ರಾಮಕರಣಿಕ ಕರಿಬಸಪ್ಪ ಅವರನ್ನು ಸಚಿವರು ಸಮ್ಮಾನಿಸಿದರು. ಬೆಂಗಳೂರು ಮಲ್ಲೇಶ್ವರಂನ ರಮಾನಾಥ ರೈ ಅಭಿಮಾನಿ ಬಳಗದ ವತಿಯಿಂದ ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಟಾಸ್‌ ಆಲಿ, ಬೋಳಂತೂರು ಗ್ರಾ.ಪಂ. ಅಧ್ಯಕ್ಷೆ ಆಸ್ಯಮ್ಮ, ಉಪಾಧ್ಯಕ್ಷ ಚಂದ್ರಶೇಖರ ರೈ ಬೋಳಂತೂರು, ಸದಸ್ಯ ಯಾಕುಬ್‌ ಅವರನ್ನು ಸಮ್ಮಾನಿಸಲಾಯಿತು.

ವಿತರಣೆ: ಬಂಟ್ವಾಳ ವಲಯ ಅರಣ್ಯ ಇಲಾಖೆ ವತಿಯಿಂದ ಪ.ಜಾತಿ/ಪ.ಪಂ. ಫಲಾನುಭವಿಗಳಿಗೆ ಗ್ಯಾಸ್‌ ಸಿಲಿಂಡರ್‌ ಮತ್ತು ಸ್ಟವ್‌ ವಿತರಿಸಲಾಯಿತು. 89 ಮಂದಿಗೆ 94ಸಿ ಹಕ್ಕುಪತ್ರ, ಒಬ್ಬರಿಗೆ ರಾಷ್ಟ್ರೀಯ ಕುಟುಂಬ ಸಹಾಯಧನ, 11 ಮಂದಿಗೆ ವಿವಿಧ ಪಿಂಚಣಿಗಳನ್ನು ವಿತರಿಸಲಾಯಿತು.

ಶಿಲಾನ್ಯಾಸ: 5.27 ಕೋಟಿ ರೂ. ವೆಚ್ಚದ ಬೋಳಂತೂರು -ತಾಳಿತ್ತನೂಜಿ- ನಾಡಾಜೆ -ಮದಕ- ಕೊಳ್ನಾಡು ರಸ್ತೆ ಕಾಮಗಾರಿ, 40 ಲಕ್ಷ ರೂ. ವೆಚ್ಚದ ನಾರಂಕೋಡಿ ರಸ್ತೆ ಕಾಂಕ್ರೀಟ್‌ ಕಾಮಗಾರಿ, 10 ಲಕ್ಷ ರೂ. ವೆಚ್ಚದ ಕೊಕ್ಕಪುಣಿ-ಬಚ್ಚಿರಕೋಡಿ ರಸ್ತೆ ಕಾಂಕ್ರೀಟ್‌ ಕಾಮಗಾರಿ, 4 ಲಕ್ಷ ರೂ. ವೆಚ್ಚದ ಗುಂಡಿಮಜಲು ಭಜನ ಮಂದಿರ ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.

ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ ಪ್ರಸ್ತಾವನೆಗೈದರು. ಬೋಳಂತೂರು ಗ್ರಾ.ಪಂ. ಉಪಾಧ್ಯಕ್ಷ ಚಂದ್ರಶೇಖರ ರೈ ಬೋಳಂತೂರು ಸ್ವಾಗತಿಸಿದರು. ಜಿ.ಪಂ. ಸದಸ್ಯೆ ಮಂಜುಳಾ ಮಾಧವ ಮಾವೆ ವಂದಿಸಿದರು. ನೌಫಲ್‌ ಕುಡ್ತಮುಗೇರು ಕಾರ್ಯಕ್ರಮ ನಿರೂಪಿಸಿದರು.

ರೈ ರಾಜೀನಾಮೆ ಬೇಡ
ರಾಜ್ಯದಲ್ಲಿ ಅತೀ ಹೆಚ್ಚು ಸರಕಾರಿ ಅನುದಾನ ಪಡೆದ ಜಿಲ್ಲೆ ದಕ್ಷಿಣ ಕನ್ನಡ. ಅತೀ ಹೆಚ್ಚು ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಸಿದ ಜಿಲ್ಲೆ ದ.ಕ. ಜಿಲ್ಲೆ. ಅತೀ ಹೆಚ್ಚು ಅಭಿವೃದ್ಧಿ ಕಾರ್ಯ ಆಗಿರುವುದೇ ಇಲ್ಲಿ. ಆದರೆ ಯಾರೋ ಬೈಕ್‌ ರ‍್ಯಾಲಿಯಲ್ಲಿ ಹೊರಭಾಗದಿಂದ ಬಂದು ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ನನ್ನ ಮತದಾರರು ಆಗ್ರಹಿಸಿದರೆ ನಾನು ರಾಜೀನಾಮೆ ಕೊಡಬೇಕು. ಹೇಳಿ ಏನು ಮಾಡಬೇಕು ಎಂದು ನಾಗರಿಕರನ್ನು ಪ್ರಶ್ನಿಸಿದರು. ಆಗ ಗ್ರಾಮಸ್ಥರು ಒಕ್ಕೊರಲಿನಿಂದ ರಾಜೀನಾಮೆ ನೀಡುವುದು ಬೇಡ ಎಂದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.