ಯುವ ವೈದ್ಯನ ಅನುಕರಣೀಯ ಕಾರ್ಯ

ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಸೇವೆ ನೀಡುವ ಖಾಸಗಿ ವೈದ್ಯ

Team Udayavani, May 30, 2019, 10:22 AM IST

dr

ಕಡಬ: ಸರಕಾರಿ ವೈದ್ಯರಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿದರೂ ನಿರೀಕ್ಷಿತ ಫ‌ಲ ಪಡೆಯಲು ಸಾಧ್ಯವಾಗಿಲ್ಲ. ಆದರೆ ಇಲ್ಲೊಬ್ಬರು ಖಾಸಗಿ ವೈದ್ಯರು ತಾನಾಗಿ ಸರಕಾರಿ ಆಸ್ಪತ್ರೆಯ ವೈದ್ಯಕೀಯ ಸೇವೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅದೂ ಉಚಿತ!

ಯುವ ಸಮುದಾಯಕ್ಕೆ ಅದರಲ್ಲೂ ವೈದ್ಯರಿಗೆ ಮಾದರಿಯಾಗಬಲ್ಲ ಇವರ ಹೆಸರು ಡಾ| ಅವಿನ್‌ ಡಿ.ಪಿ. 2 ತಿಂಗಳಿಂದ ಕಡಬದ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆಯ ವಿಶೇಷ ಅನುಮತಿ ಪಡೆದು ಉಚಿತವಾಗಿ ಸೇವೆ ನೀಡುತ್ತಿದ್ದಾರೆ. ಅವಿನ್‌ ಸ್ನಾತಕೋತ್ತರ ಪದವಿಗಾಗಿ ಸರಕಾರಿ ಕೋಟಾದಡಿ ಸೀಟು ಪಡೆಯಲು  ಪ್ರವೇಶ ಪರೀಕ್ಷೆ ಬರೆದಿದ್ದು, ಬಿಡುವಿನ ಅವಧಿಯನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.

ಅಪರೂಪದ ಸಾಧಕ
ಡಾ| ಅವಿನ್‌ ಬಹಳ ಬಡತನದ ನಡುವೆ ಉನ್ನತ ಗುರಿ ಸಾಧನೆಯ ಹಠ ತೊಟ್ಟು ಮೈಸೂರು ಮೆಡಿಕಲ್‌ ಕಾಲೇಜಿನಲ್ಲಿ ಎಂಬಿಬಿಎಸ್‌ ಪದವಿ ಪಡೆದು ಹೆತ್ತವರ ಕನಸನ್ನು ನನಸು ಮಾಡಿದ್ದಾರೆ.

ಕಡಬ ತಾಲೂಕಿನ ಎಡಮಂಗಲ ಗ್ರಾಮದ ಗ್ರಾಮದ ದೋಣಿಮನೆ ನಿವಾಸಿ, ರಿಕ್ಷಾ ಚಾಲಕ ದುಶ್ಯಂತ್‌ ಮತ್ತು ಬೀಡಿ ಕಾರ್ಮಿಕೆ ಪ್ರೇಮಾ ದಂಪತಿಯ ಹಿರಿಯ ಪುತ್ರ ಡಾ| ಅವಿನ್‌ ಡಿ.ಪಿ. ಒಂದರಿಂದ ಹತ್ತನೆಯ ತರಗತಿವರೆಗೆ ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತ ಅವಿನ್‌, ಎಸೆಸೆಲ್ಸಿಯಲ್ಲಿ ಶೇ.95 ಅಂಕ ಗಳಿಸಿ ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಸೀಟು ಗಿಟ್ಟಿಸಿಕೊಂಡಿದ್ದರು. ಮೆಡಿಕಲ್‌ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ 685 ರ್‍ಯಾಂಕ್‌ ಗಳಿಸಿ, ಮೈಸೂರು ಮೆಡಿಕಲ್‌ ಕಾಲೇಜಿನಲ್ಲಿ ಸೀಟು ಗಿಟ್ಟಿಸಿಕೊಂಡಿದ್ದರು. ಈಗ ಎಂಬಿಬಿಎಸ್‌ ಮುಗಿಸಿ ಈಗ ಹೊಸದಿಲ್ಲಿಯ ಬಾತ್ರಾ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಸರಕಾರಿ ಕೋಟಾದಡಿ ಜನರಲ್‌ ಸರ್ಜರಿ ವಿಭಾಗದಲ್ಲಿ ಸ್ನಾತಕೋತ್ತರ ಕಲಿಕೆಗೆ ಸಜ್ಜಾಗಿದ್ದಾರೆ.

ದೇಶದ ಅಭಿವೃದ್ಧಿಯು ಜನಾಂದೋಲನದ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಮಯದಲ್ಲಿ ವಿಕಾಸಕ್ಕಾಗಿ ತುಡಿಯುತ್ತಿರುವ ಎಲ್ಲ ಯುವಕರಂತೆ ಒಬ್ಬ ಯುವ ವೈದ್ಯನಾಗಿ ನನ್ನೂರಿನ ಜನರಿಗೆ ಅಳಿಲ ಸೇವೆ
ಸಲ್ಲಿಸುವ ಅವಕಾಶವನ್ನು ಬಳಸಿಕೊಂಡಿದ್ದೇನೆ.
– ಡಾ| ಅವಿನ್‌ ಡಿ.ಪಿ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.