ಮಣ್ಣಿನ ಮಡಕೆ ಕಾಂಪೋಸ್ಟ್‌ : ರಾಮಕೃಷ್ಣ ಮಿಷನ್‌ ಜತೆ ಕೈಜೋಡಿಸಿದ ಮನಪಾ


Team Udayavani, Feb 9, 2019, 6:21 AM IST

9-february-6.jpg

ಮಹಾನಗರ: ನಗರದ ರಾಮಕೃಷ್ಣ ಮಿಷನ್‌ ಹಸಿ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಮಣ್ಣಿನ ಮಡಕೆ ಕಾಂಪೋಸ್ಟ್‌ ಮೂಲಕ ವಿನೂತನ ಪ್ರಯೋಗಕ್ಕೆ , ಇದೀಗ ರಾಮಕೃಷ್ಣ ಮಿಷನ್‌ನ ಜತೆ ಮನಪಾ ಕೈ ಜೋಡಿಸಿದೆ.

ಮಣ್ಣಿನ ಮಡಕೆ ಕಾಂಪೋಸ್ಟ್‌ ಮಾಡುವ ಕುರಿತಾಗಿ ಪಾಲಿಕೆ ಸಿಬಂದಿಗೆ ವಿವಿಧ ಹಂತಗಳಲ್ಲಿ ಮಾಹಿತಿ ಆಯೋಜಿಸುತ್ತಿದೆ. ಅದರೊಂದಿಗೆ ಸಾರ್ವಜನಿಕರಿಗೆ ಮಡಕೆ ವಿತರಣೆಗೆ ಸಿದ್ಧತೆ ನಡೆಸಿದೆ.

ಪಾಲಿಕೆಗೆ ಹಸಿ ಕಸ ನಿರ್ವಹಣೆ ಬಹುಡೊಡ್ಡ ತಲೆನೋವಾಗಿದ್ದು, ಸಾರ್ವಜನಿಕರಲ್ಲಿ ಹಸಿಕಸ, ಒಣಕಸ ಪ್ರತ್ಯೇಕಿಸಲು ಮನವಿ ಮಾಡಿದರೂ ಸರಿಯಾಗಿ ಅನುಷ್ಠಾನಕ್ಕೆ ಬಂದಿಲ್ಲ. ಈ ನಡುವೆ ರಾಮಕೃಷ್ಣ ಮಿಷನ್‌ ಹಸಿ ಕಸವನ್ನು ಸೂಕ್ತ ರೀತಿಯಲ್ಲಿ ವಿಲೇ ಮಾಡುವುದಕ್ಕೆ ಮಣ್ಣಿನ ಮಡಕೆ ಕಾಂಪೋಸ್ಟನ್ನು ಪ್ರಾಯೋಗಿಕವಾಗಿ ಕೆಲವು ಮನೆಗಳಲ್ಲಿ ಮಾಡಿ ಯಶಸ್ವಿಯಾಗಿತ್ತು. ಇದಕ್ಕಾಗಿ ಸುಮಾರು 1,000 ಮಡಕೆಗಳನ್ನು ನಗರದ ವಿವಿಧ ಭಾಗದ ಜನರಿಗೆ ನೀಡಿದ್ದು, ಉತ್ತಮ ಸ್ಪಂದನೆ ದೊರೆತ ಬಳಿಕ ಪಾಲಿಕೆಯನ್ನು ಸಂಪರ್ಕಿಸಿತ್ತು. ಅದು ಒಲವು ತೋರಿದೆ. ಹೀಗಾಗಿ ಪಾಲಿಕೆ ಸಿಬಂದಿಗೆ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಿಬಂದಿ ಮನೆಯಲ್ಲಿ ಪ್ರಾಯೋಗಿಕವಾಗಿ ಕಾಂಪೋಸ್ಟ್‌ ಮಾಡಿ ಫಲಿತಾಂಶ ಸೂಚಿಸುವಂತೆ ತಿಳಿಸಿದೆ. ಅದರೊಂದಿಗೆ 5,000 ಮನೆಗಳಿಗೆ ಮಡಕೆಯನ್ನು ವಿತರಿಸುವ ಯೋಜನೆ ರೂಪಿಸಿದೆ.

ಪಾಲಿಕೆ ಬಜೆಟ್‌ನಲ್ಲೂ ಪ್ರಸ್ತಾವ
ಮನೆಗಳ ಹಂತದಲ್ಲೇ ಹಸಿ ತ್ಯಾಜ್ಯ ಸಂಸ್ಕರಿಸುವ ಯೋಜನೆಯಡಿ ಮೊದಲ ಹಂತದಲ್ಲಿ 5 ಸಾವಿರ ಮನೆಗಳಲ್ಲಿ ಹಸಿತ್ಯಾಜ್ಯ ಸಂಸ್ಕರಣೆಗೆ ಕಾರ್ಯಕ್ರಮ ಹಮ್ಮಿಕೊಳ್ಳುವುದರೊಂದಿಗೆ ಉತ್ಪಾದನೆ ಹಂತದಲ್ಲೇ ತ್ಯಾಜ್ಯ ಪ್ರಮಾಣ ಕಡಿತಗೊಳಿಸಲು ನಾಗರಿಕರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಪಾಲಿಕೆ ಬಜೆಟ್‌ನಲ್ಲಿ ಪ್ರಸ್ತಾವ ಮಾಡಲಾಗಿತ್ತು.

ಮಣ್ಣಿನ ಮಡಕೆ ಕಾಂಪೋಸ್ಟ್‌ ಹೇಗೆ?
ಮಣ್ಣಿನ ಮೂರು ಮಡಕೆಗಳನ್ನು ಕೊಡಲಾಗುತ್ತದೆ. ಅದರ ಕೆಳಗಿನ ಭಾಗದ ಮಡಕೆಯ ಮೇಲೆ ಮೇಲಿಂದ ಮೇಲೆ ಎರಡು ಮಡಕೆಗಳನ್ನು ಇಡಲಾಗುತ್ತದೆ. ಮೇಲಿನ ಎರಡು ಮಡಕೆಯ ಕೆಳಭಾಗದಲ್ಲೂ ಪೇಪರ್‌ ಇಟ್ಟು ಮುಚ್ಚಬೇಕು. ಮೇಲಿನ ಮಡಕೆಯಲ್ಲಿ ನೀರು ರಹಿತ ಹಸಿ ಕಸಗಳನ್ನು ಹಾಕಬೇಕು. ಅದರ ಮೇಲೆ ತೆಂಗಿನ ನಾರು ಹಾಕಬಹುದು ಅಥವಾ ಮಡಕೆಯೊಂದಿಗೆ ನೀಡಿದ ಕಾಂಪೋಸ್ಟ್‌ ಪೌಡರ್‌ನ್ನು ಹಾಕಬಹುದು. ಹೀಗೆ ಕೆಲವು ದಿನಗಳಲ್ಲಿ ಈ ಮಡಕೆ ತುಂಬುತ್ತದೆ. ಆಗ ಅದನ್ನು ತೆಗೆದು ಕೊನೆಯ ಮಡಕೆಗೆ ಹಾಕಬಹುದು. ಮತ್ತೆ ಎರಡನೇ ಮಡಕೆ ಮೇಲೆ ಇಟ್ಟು ಅದಕ್ಕೆ ಹಸಿ ಕಸಗಳನ್ನು ಹಾಕಲಾಗುತ್ತದೆ. ಹೀಗೆ ಮನೆಯ ಹಸಿ ತ್ಯಾಜ್ಯದಿಂದಲೇ ಗೊಬ್ಬರ ತಯಾರಿಸಬಹುದಾಗಿದೆ. ಇದಕ್ಕಾಗಿ ರಾಮಕೃಷ್ಣ ಮಿಷನ್‌ ಹಾಗೂ ಪಾಲಿಕೆ ತಲಾ 500 ರೂ. ಗಳನ್ನು ಸಾರ್ವಜನಿಕರಿಂದ ಪಡೆದುಕೊಳ್ಳಲಿದೆ.

ಗೊಬ್ಬರಕ್ಕೆ ಕೆಜಿಗೆ 25 ರೂ.
ಮನೆಯ ಹಸಿ ತ್ಯಾಜ್ಯಗಳನ್ನು ಡಂಪಿಂಗ್‌ ಯಾರ್ಡ್‌ಗೆ ಕಳುಹಿಸುವ ಬದಲು ಗೊಬ್ಬರವಾಗಿ ಪರಿವರ್ತಿಸಬಹುದಾಗಿದೆ. ಗೊಬ್ಬರವನ್ನು ಮನೆಯ ಗಾರ್ಡನ್‌ಗೆ ಬಳಸಬಹುದು. ತ್ಯಾಜ್ಯಗಳಿಂದ ಉಂಟಾದ ಗೊಬ್ಬರಕ್ಕೆ ಕೆಜಿಗೆ 25 ರೂ. ಇದೆ. ಭವಿಷ್ಯದಲ್ಲಿ ಆ ಹಣ ಪಾವತಿಸಿ ಗೊಬ್ಬರ ಸಂಗ್ರಹಿಸಲು ಮಠ ಸಿದ್ಧವಿದೆ. ಈ ಯೋಜನೆಯನ್ನು ಪ್ರತಿ ಮನೆಗಳಲ್ಲೂ ಬಳಸುವುದರಿಂದ ಮಣ್ಣಿನ ಮಡಕೆ ಮಾಡುವವರಿಗೆ ಸಹಾಯ ಮಾಡಿದಂತಾಗುತ್ತದೆ ಎಂದು ಮಠದ ಏಕಗಮ್ಯಾನಂದ ಸ್ವಾಮೀಜಿ ತಿಳಿಸುತ್ತಾರೆ.

ಹಸಿತ್ಯಾಜ್ಯ ನಿರ್ವಹಣೆ ಬಜೆಟ್‌ನಲ್ಲಿ ಪ್ರಸ್ತಾವ
ಹಸಿಕಸ ಒಣಕಸ ಪ್ರತ್ಯೇಕಿಸದೆ ಕೊಡುವುದು ಹಸಿತ್ಯಾಜ್ಯ ನಿರ್ವಹಣೆ ಸಮಸ್ಯೆಯಾಗುತ್ತಿದೆ. ಇದಕ್ಕಾಗಿ ಮಣ್ಣಿನ ಮಡಕೆ ಕಾಂಪೋಸ್ಟ್‌ ಮಾಡಲು ರಾಮಕೃಷ್ಣ ಮಿಷನ್‌ ನೊಂದಿಗೆ ಕೈ ಜೋಡಿಸಿದ್ದೇವೆ. 5,000 ಮನೆಗಳಿಗೆ ಮಡಕೆ ವಿತರಣೆ ಮಾಡುವ ಗುರಿ ಹೊಂದಲಾಗಿದೆ.
ಭಾಸ್ಕರ್‌ ಕೆ., ಮೇಯರ್‌

ವಿಶೇಷ ವರದಿ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.