ಟೋಲ್‌ ಉಳಿಸಲು ಘನ ವಾಹನ ತಡೆಯೇ ನಿರ್ನಾಮ!


Team Udayavani, Dec 8, 2017, 9:54 AM IST

8-Dec-1.jpg

ಸುರತ್ಕಲ್‌ : ಹೆದ್ದಾರಿ 66ರಲ್ಲಿ ಮೂರು ಕಡೆ ಟೋಲ್‌ ನೀಡುವುದನ್ನು ತಪ್ಪಿಸಲು ಲಭ್ಯವಿರುವ ಒಳ ರಸ್ತೆಗಳನ್ನು ಬಳಸುವುದು ಅತಿಯಾಗಿದ್ದು, ಇದರಿಂದಾಗಿ ಎನ್‌ಐಟಿಕೆ ಸಮೀಪದ ರಸ್ತೆಯೊಂದರಲ್ಲಿ ಘನ ವಾಹನಗಳಿಗೆ ಹಾಕಿರುವ ತಡೆಬೇಲಿಯೇ ಮುರಿದು ಹೋಗಿದೆ.

ಸುರತ್ಕಲ್‌ ಶ್ರೀ ಸದಾಶಿವ ಮಹಾ ಗಣಪತಿ ದೇವಸ್ಥಾನ ಮಾರ್ಗವಾಗಿ ಎನ್‌ ಐಟಿಕೆ ವರೆಗೆ ಬೀಚ್‌ ಉದ್ದಕ್ಕೂ ಇತ್ತೀಚೆಗೆ ರಸ್ತೆ ನಿರ್ಮಿಸಲಾಗಿತ್ತು. ರಸ್ತೆ ಅಗಲ ಕಿರಿದಾಗಿದ್ದು, ಇಲ್ಲಿ ಲಘು ವಾಹನಗಳಿಗೆ ಮಾತ್ರ ಹೋಗಲು ಸಾಧ್ಯವಿದ್ದು, ಘನ ವಾಹನಗಳು ಪ್ರವೇಶಿಸದಂತೆ ಕಬ್ಬಿಣದ ತಡೆ ನಿರ್ಮಿಸಲಾಗಿತ್ತು. ಈಗ ಘನ ವಾಹನಗಳೂ ಟೋಲ್‌ ತಪ್ಪಿಸಲು ಈ ರಸ್ತೆಯಲ್ಲಿಯೇ ಸಾಗುತ್ತಿವೆ. ಹೆಚ್ಚಾಗಿ ಮೀನು ಸಾಗಾಟ ವಾಹನಗಳು, ಉಡುಪಿ ನೋಂದಣಿಯ ಘನ ವಾಹನಗಳು ಈ ರಸ್ತೆಯಾಗಿ ಮುಕ್ಕ ತಲುಪುತ್ತಿವೆ.

ಘನ ವಾಹನ ಓಡಾಟದಿಂದ ಈ ರಸ್ತೆ ಶಿಥಿಲಗೊಳ್ಳುತ್ತಿದೆ. ಕೇವಲ ಲಘು ವಾಹನಗಳ ಓಡಾಟಕ್ಕೆಂದೇ ಇದನ್ನು ನಿರ್ಮಿಸಲಾಗಿದ್ದು, ಘನ ವಾಹನಗಳ ಭಾರ ತಾಳಿಕೊಳ್ಳುವ ಶಕ್ತಿ ಈ ರಸ್ತೆಗಿಲ್ಲ. ಬೀಚ್‌ ಉದ್ದಕ್ಕೂ ಮಣ್ಣು ತುಂಬಿ ಎತ್ತರಗೊಳಿಸಿ ಈ ರಸ್ತೆಯನ್ನು ನಿರ್ಮಿಸಲಾಗಿದ್ದು, ರಸ್ತೆಯಿರುವ ಕೆಲವು ಕಡೆಗಳಲ್ಲಿ ಕುಗ್ಗಿ ಹೋಗಿರುವ ಅಪಘಾತವಾಗುವ ಸಾಧ್ಯತೆಯಿದೆ.

ಹೆಚ್ಚಾಗಿ ಪ್ರವಾಸಿಗಳು, ಎನ್‌ಐಟಿಕೆ ವಿದ್ಯಾರ್ಥಿಗಳು ಸೈಕ್ಲಿಂಗ್‌ಗಾಗಿ ಈ ರಸ್ತೆಯನ್ನು ಬಳಸುತ್ತಾರೆ. ಮಾತ್ರವಲ್ಲ ಹಿರಿಯರು ವಾಕಿಂಗ್‌ ಹಾಗೂ ವಾಯು ವಿಹಾರಕ್ಕಾಗಿ ಸಮುದ್ರ ದಂಡೆಗೆ ಬರುತ್ತಾರೆ. ಘನ ವಾಹನಗಳ ಅನಿಯಮಿತ ಓಡಾಟದಿಂದ ಇವರಿಗೂ ಅಪಾಯವಾಗುವ ಸಾಧ್ಯತೆ ಇದೆ.

ತತ್‌ಕ್ಷಣ ಸಂಚಾರ ವಿಭಾಗದ ಪೊಲೀಸರು ಇಲ್ಲಿನ ಘನ ವಾಹನ ತಡೆಯನ್ನು ಪುನಃ ನಿರ್ಮಿಸಿ ರಸ್ತೆಯು ಟೋಲ್‌ ತಪ್ಪಿಸಲು ಬಳಕೆಯಾಗದಂತೆ ನೋಡಿಕೊಳ್ಳಬೇಕಾಗಿದೆ ಹಾಗೂ ರಸ್ತೆಯ ಸುರಕ್ಷೆಯನ್ನು ಕಾಯ್ದುಕೊಳ್ಳಬೇಕಿದೆ.

ಆಯುಕ್ತರಿಗೆ ಪತ್ರ ಬರೆಯಲಾಗಿದೆ
ಸದಾಶಿವ ಗಣೇಶ ದೇವಸ್ಥಾನದ ಬಳಿಯಿಂದ ಹಾದು ಹೋಗುವ ರಸ್ತೆಯಲ್ಲಿನ ಘನ ವಾಹನ ತಡೆಯನ್ನು ಪುನರ್‌ ನಿರ್ಮಿಸುವಂತೆ ಕೋರಿ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಇಲ್ಲಿ ಘನ ವಾಹನ ಓಡಾಟಕ್ಕೆ ಅನುಮತಿಯಿಲ್ಲ. ರಸ್ತೆಯ ಅಗಲ ಕಿರಿದಾಗಿದೆ. ಸುಂಕ ತಪ್ಪಿಸುವ ಉದ್ದೇಶದಿಂದ ವಾಹನಗಳು ಈ ಭಾಗದಲ್ಲಿ ಹೆಚ್ಚು ಓಡಾಟ ನಡೆಸಿ ಅಪಘಾತಕ್ಕೀಡಾದರೆ ಮತ್ತಷ್ಟು ಸಮಸ್ಯೆಯಾಗುತ್ತದೆ.
ಮಂಜುನಾಥ್‌, ಇನ್‌ಸ್ಪೆಕ್ಟರ್‌ ಮಂಗಳೂರು ಉತ್ತರ ಸಂಚಾರ ಠಾಣೆ 

ಉದ್ದೇಶವೇ ಅಡಿಮೇಲು
ಉಡುಪಿ ಮತ್ತು ದಕ್ಷಿಣ ಕನ್ನಡ ನೋಂದಣಿಯ ವಾಹನಗಳು ನಿತ್ಯ ಹಲವು ಬಾರಿ ಮಂಗಳೂರು ಉಡುಪಿ ನಡುವೆ ಸಂಚಾರಿಸುತ್ತವೆ. ಪ್ರತಿ ಬಾರಿಯೂ ಟೋಲ್‌ ನೀಡಬೇಕಾಗಿರುವುದರಿಂದ ಪ್ರವಾಸಿಗರ ಅನುಕೂಲಕ್ಕಾಗಿ ಈ ರಸ್ತೆಯನ್ನು ನಿರ್ಮಿಸಲಾಗಿದ್ದು, ಈಗ ಅದು ಟೋಲ್‌ ತಪ್ಪಿಸಲು ಬಳಕೆಯಾಗುತ್ತಿದೆ. 

ಟಾಪ್ ನ್ಯೂಸ್

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.