ಒಣತ್ಯಾಜ್ಯ ಸಂಸ್ಕರಣೆ ಖಾಸಗಿ ಸಂಸ್ಥೆಯ ಹೆಗಲಿಗೆ

ಹೈಕೋರ್ಟ್‌ ನಿರ್ದೇಶನ ಹಿನ್ನೆಲೆ; ಘನತ್ಯಾಜ್ಯ ವಿಲೇವಾರಿಗೆ ಹೊಸ ಟೆಂಡರ್‌

Team Udayavani, Dec 10, 2022, 11:55 AM IST

7

ಪಚ್ಚನಾಡಿ: ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಘನತ್ಯಾಜ್ಯವನ್ನು ಸಂಸ್ಕರಣೆ, ವಿಲೇವಾರಿ ಮಾಡುವ ನಿಟ್ಟಿನಲ್ಲಿ ಹೊಸ ಟೆಂಡರ್‌ ಕರೆಯಲು ಮಂಗಳೂರು ಪಾಲಿಕೆ ನಿರ್ಧರಿಸಿದೆ.

ಇದರಂತೆ ಪಚ್ಚನಾಡಿ ಘನತ್ಯಾಜ್ಯ ಸಂಸ್ಕರಣೆ ಘಟಕದಲ್ಲಿ ಸ್ವೀಕರಿಸಲಾಗುವ ಒಣ ತ್ಯಾಜ್ಯವನ್ನು ಸಂಸ್ಕರಣೆ, ವಿಲೇವಾರಿ, ನಿರ್ವಹಣೆ ಮಾಡಲು 3 ವರ್ಷಗಳ ಅವಧಿಗೆ ಹೊಸ ಟೆಂಡರ್‌ ಮಾಡಿ ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಲಾಗುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಪಚ್ಚನಾಡಿ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ವೈಜ್ಞಾನಿಕವಾಗಿ ಸಂಸ್ಕರಣೆ, ವಿಲೇ ವಾರಿ ಮಾಡುವಂತೆ ಹೈಕೋರ್ಟ್‌ ನಲ್ಲಿ ದಾಖಲಾದ ದೂರಿನ ಆಧಾರ ದಲ್ಲಿ ಪಾಲಿಕೆಗೆ ಈಗಾಗಲೇ ನಿರ್ದೇಶನ ನೀಡಿದೆ. ಅದರಂತೆ ಸಂಗ್ರ ಹವಾಗುತ್ತಿರುವ ಒಣತ್ಯಾಜ್ಯಗಳ ಪೈಕಿ ಪುನರ್‌ ಬಳಕೆ, ಇತರ ಉಪಯೋಗ ವಾಗುವ ಪ್ಲಾಸ್ಟಿಕ್‌ ಚೀಲಗಳನ್ನು ಸಾಧ್ಯ ವಾದ ಮಟ್ಟಿಗೆ ಪ್ರತ್ಯೇಕಿಸಿ ಅನಂತರ ಶೇಖರಣೆಗೊಂಡ ಕೇವಲ ನಿರು ಪಯುಕ್ತ, ಇತರ ಒಣ, ಪ್ಲಾಸ್ಟಿಕ್‌ ತ್ಯಾಜ್ಯ ಗಳನ್ನು ಪಾಲಿಕೆಯಿಂದ ಆಯ್ಕೆಯಾದ ಸಂಸ್ಥೆಗೆ ಕಳೆದ ವರ್ಷ ನೀಡಲಾಗಿತ್ತು.

ದೈನಂದಿನ ಒಣ ತ್ಯಾಜ್ಯವನ್ನು ಸಂಸ್ಕ ರಣೆ ಮಾಡಿ ನಿರುಪಯುಕ್ತ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ವಿಲೇವಾರಿ ಮಾಡಲು ನಿಯಮಾನುಸಾರ ಟೆಂಡರ್‌ ಕರೆದು ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಿದ ಮೇರೆಗೆ ಆಸಕ್ತ ಏಜೆನ್ಸಿಗಳಿಂದ ಪ್ರಸ್ತಾ ವನೆ ಪಡೆಯಲು ಎರಡು ಬಾರಿ ʼಪೂರ್ವ ಪ್ರಸ್ತಾವನೆ’ ಕರೆಯಲಾಗಿತ್ತು.

ಈ ಮಧ್ಯೆ ಪಚ್ಚನಾಡಿಯ ಘನತ್ಯಾಜ್ಯ ಸಂಸ್ಕರಣೆ ಘಟಕದಲ್ಲಿ ಸ್ವೀಕರಿಸಲಾಗುವ ಒಣತ್ಯಾಜ್ಯ ಘಟಕದ ನಿರ್ವಹಣೆಯನ್ನು ಪಾಲಿಕೆಯಿಂದ ಹೆಚ್ಚುವರಿಯಾಗಿ ಯಾವುದೇ ಶುಲ್ಕವನ್ನು ಪಡೆಯದೆ ಲಭ್ಯವಿರುವ ಬೇಲಿಂಗ್‌ ಯಂತ್ರ, ಪಾಲಿಕೆಯಿಂದ ನೀಡುವ ನಿಗದಿತ ಮಾನವ ಸಂಪನ್ಮೂಲದೊಂದಿಗೆ ಹೆಚ್ಚು ವರಿ ಕಾರ್ಮಿಕರ ಸೇವೆಯನ್ನು ಬಳಸಿ ನಿರ್ವಹಣೆ ಮಾಡಲು ಪ್ರಾಯೋಗಿಕ ವಾಗಿ ಷರತ್ತಿಗೊಳಪಟ್ಟು 2 ಸಂಸ್ಥೆಗಳಿಗೆ ಅನುಮತಿಯನ್ನು ನೀಡಲಾಗಿದೆ. ಪ್ರಾಯೋಗಿಕವಾಗಿ ಒಣ ತ್ಯಾಜ್ಯಗಳ ನಿರ್ವಹಣೆ ಮಾಡುತ್ತಿರುವ ಸಂಸ್ಥೆಗಳ ಅನುಭವ, ಸಂಸ್ಕರಣೆ ಮಾಹಿತಿಗಳನ್ನು ಆಧರಿಸಿ ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂಗ್ರಹವಾಗಿರುವ ಪಾರಂಪರಿಕ ತ್ಯಾಜ್ಯ ನಿರ್ವಹಣೆಗಾಗಿ ತಯಾರಿಸಲಾದ ಡಿಪಿಆರ್‌ ಆಧಾರದಲ್ಲಿ ಹೊಸ ದಾಗಿ ನಿರ್ವಹಣೆ ಮಾಡಲು ಪಾಲಿಕೆ ನಿರ್ಧರಿಸಿದೆ.

ಹಾಲಿ ಗುತ್ತಿಗೆ ಅವಧಿ ಮುಂದುವರಿಕೆ

ಈ ಪ್ರಕ್ರಿಯೆ ಅಂತಿಮಗೊಳ್ಳುವ ತನಕ ಪ್ರಸ್ತುತ ಒಣತ್ಯಾಜ್ಯ ಘಟಕದ ನಿರ್ವಹಣೆ ಯನ್ನು ಪಾಲಿಕೆಯಿಂದ ಹೆಚ್ಚುವರಿ ಯಾವುದೇ ಶುಲ್ಕವನ್ನು ಪಡೆಯದೇ ಲಭ್ಯ ವಿರುವ ಬೇಲಿಂಗ್‌ ಯಂತ್ರ, ಪಾಲಿ ಕೆಯಿಂದ ನೀಡುವ ನಿಗದಿತ ಮಾನವ ಸಂಪನ್ಮೂಲ ದೊಂದಿಗೆ ಹೆಚ್ಚುವರಿ ಸ್ವಂತ ಕಾರ್ಮಿಕರ ಸೇವೆ ಯನ್ನು ಬಳಸಿ ನಿರ್ವ ಹಣೆ ಮಾಡುವ ಎರಡೂ ಖಾಸಗಿ ಸಂಸ್ಥೆಗಳ ಗುತ್ತಿಗೆ ನಿರ್ವಹಣೆ ಅವಧಿಯನ್ನು ಮುಂದು ವರಿಸಲು ಪಾಲಿಕೆ ಚಿಂತನೆ ನಡೆಸಿದೆ.

ನಿತ್ಯ 99 ಟನ್‌ ಒಣಕಸ ಸಂಗ್ರಹ

ಪಾಲಿಕೆ ವ್ಯಾಪ್ತಿಯಲ್ಲಿ ಪ್ರತೀ ಶುಕ್ರ ವಾರ ಸುಮಾರು 200 ಟನ್‌ ಒಣ ಕಸವನ್ನು ಸಂಗ್ರಹಿಸಲಾಗುತ್ತದೆ. ಇದನ್ನು ಪ್ರತೀದಿನಕ್ಕೆ ವಿಭಾಗ ಮಾಡಿದಾಗ ಸುಮಾರು 29 ಟನ್‌ ಒಣಕಸ ಪ್ರತೀದಿನ ಸಂಗ್ರಹ ಮಾಡಿ ದಂತಾಗುತ್ತದೆ. ಜತೆಗೆ, ವಾರಾಂತ್ಯದಲ್ಲಿ 20 ಟನ್‌ ಹಾಗೂ ಹಸಿ ಕಸದೊಂದಿಗೆ ಸೇರ್ಪಡೆಯಾಗಿ ಸುಮಾರು 50 ಟನ್‌ ಸಹಿತ ಒಟ್ಟು 99 ಟನ್‌ ಒಣಕಸ ಪ್ರತಿನಿತ್ಯ ಸಂಗ್ರ ಹವಾಗುತ್ತದೆ. ಈ ಬಗ್ಗೆ ಪಾಲಿಕೆಯಲ್ಲಿ ಚರ್ಚಿಸಲಾಗಿದ್ದು, ಶೀಘ್ರದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.

ಹೊಸ ಟೆಂಡರ್‌ಗೆ ನಿರ್ಧಾರ: ಪಚ್ಚನಾಡಿಯ ಸಂಸ್ಕರಣೆ ಘಟಕದಲ್ಲಿ ಸ್ವೀಕರಿಸಲಾಗುವ ಒಣತ್ಯಾಜ್ಯವನ್ನು ಸಂಸ್ಕರಣೆ, ವಿಲೇವಾರಿ ಮಾಡಲು ಹೊಸ ಟೆಂಡರ್‌ಗೆ ಪಾಲಿಕೆ ನಿರ್ಧರಿಸಿದೆ. ಇದರ ಸಾಧಕ – ಬಾಧಕ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಜತೆಗೆ ಶುಕ್ರವಾರ ಪಾಲಿಕೆಯಲ್ಲಿ ಚರ್ಚಿಸಲಾಗಿದೆ. ಶೀಘ್ರದಲ್ಲಿ ಟೆಂಡರ್‌ ಕುರಿತ ತೀರ್ಮಾನ ಕೈಗೊಳ್ಳಲಾಗುವುದು.  -ಜಯಾನಂದ ಅಂಚನ್‌, ಮೇಯರ್‌, ಮಂ. ಪಾಲಿಕೆ

„ದಿನೇಶ್‌ ಇರಾ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.