ಮಂಗಳೂರು: ಶೀಘ್ರವೇ ಹಳೆಯ ವಿದ್ಯುತ್‌ ತಂತಿ ಬದಲಾವಣೆ


Team Udayavani, Jan 20, 2022, 8:15 AM IST

ಶೀಘ್ರವೇ ಹಳೆಯ ವಿದ್ಯುತ್‌ ತಂತಿ ಬದಲಾವಣೆ

ಮಂಗಳೂರು: ವಿದ್ಯುತ್‌ ಸರಬರಾಜಿನಲ್ಲಿ ಆಗುತ್ತಿರುವ ಸೋರಿಕೆ ತಪ್ಪಿಸಿ ಗುಣಮಟ್ಟದ ವಿದ್ಯುತ್‌ ಪೂರೈಸುವ ನಿಟ್ಟಿನಲ್ಲಿ 30ರಿಂದ 40 ವರ್ಷಗಳಷ್ಟು ಹಳೆಯದಾದ ವಿದ್ಯುತ್‌ ತಂತಿಗಳನ್ನು ಹೊಸದಕ್ಕೆ ಬದಲಾಯಿಸಲು ಸರಕಾರ ತೀರ್ಮಾನಿಸಿದೆ.

ಕೇಂದ್ರ ಸರಕಾರದ ವಿತರಣ ವಲಯದ ಪರಿಷ್ಕೃತಯೋಜನೆ (ರಿವ್ಯಾಂಪ್‌ಡ್‌ ಡಿಸ್ಟ್ರಿಬ್ಯೂ ಶನ್‌ ಸೆಕ್ಟರ್‌ಸ್ಕೀಮ್‌ – ಆರ್‌ಡಿಎಸ್‌ಎಸ್‌) ಅಡಿಯಲ್ಲಿ ಕಾಮಗಾರಿ ನಡೆಯಲಿದ್ದು, ಸದ್ಯವೇ ಆರಂಭಗೊಳ್ಳಲಿದೆ.

ರಾಜ್ಯಕ್ಕೆ 8,500 ಕೋಟಿ ರೂ. ಲಭಿಸಲಿದ್ದು, ಟ. ಕ., ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡ ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಮೆಸ್ಕಾಂ)ಗೆ 1,100 ಕೋಟಿ ರೂ. ಸಿಗಲಿದೆ. ದ.ಕ. ಜಿಲ್ಲೆಗೆ 294 ಕೋಟಿ ರೂ. ಕಾಮಗಾರಿಯ ಅಂದಾಜು ಪಟ್ಟಿ ತಯಾರಿಸಿ ಸಲ್ಲಿಸಲಾಗಿದೆ. ಹಳೆಯ ತಂತಿ ಬದಲಾವಣೆಗೆಂದೇ 95 ಕೋಟಿ ರೂ. ತೆಗೆದಿರಿಸಲಾಗಿದೆ.

ಮೆಸ್ಕಾಂನ ವಿದ್ಯುತ್‌ ವಿತರಣಾ ನಷ್ಟ ಪ್ರಸ್ತುತ ಶೇ. 10.7ರಷ್ಟಿದೆ.ಅಧಿಕಾರಿಗಳ ಪ್ರಕಾರ, ಈ ಯೋಜನೆಯಡಿ ಅಧಿಕ ಮೊತ್ತವು ಗ್ರಾಮೀಣ ಪ್ರದೇಶಗಳಲ್ಲಿನ ತಂತಿ ಬದಲಾವಣೆ, ಹೊಸ ಪರಿವರ್ತಕಗಳ ಸ್ಥಾಪನೆಗೆ ವಿನಿಯೋಗವಾಗಲಿದೆ. ಮಂಗಳೂರು, ಉಡುಪಿ ಮೊದಲಾದ ನಗರ ಪ್ರದೇಶಗಳಲ್ಲಿ ವಿದ್ಯುತ್‌ ಕೇಬಲ್‌ ಅಳವಡಿಕೆಗೆ ಇದರಲ್ಲಿ ಸದ್ಯ ಅವಕಾಶವಿಲ್ಲ.

ಪ್ರಮುಖ ಕಾಮಗಾರಿಗಳು
ತಂತಿ ಬದಲಾವಣೆ, ಹೆಚ್ಚುವರಿ ಪರಿವರ್ತಕ ಸ್ಥಾಪನೆ, ಸಬ್‌ಸ್ಟೇಶನ್‌ ನಿರ್ಮಾಣ ಮತ್ತು ಸ್ಮಾರ್ಟ್‌ ಮೀಟರ್‌ ಹಾಕುವುದು ಪ್ರಮುಖ ಕಾಮಗಾರಿಗಳು. ಕಾರ್ಯಕ್ಷಮತೆ ಹೆಚ್ಚಿಸಿ ವಿದ್ಯುತ್‌ ವಿತರಣೆಯಲ್ಲಿ ಆಗುವ ಒಟ್ಟು ತಾಂತ್ರಿಕ ಮತ್ತು ವಾಣಿಜ್ಯ ನಷ್ಟವನ್ನು ಶೇ. 12ರಿಂದ 15ರಷ್ಟು ಕಡಿಮೆ ಮಾಡುವುದು ಹಾಗೂ ಸರಾಸರಿ ಪೂರೈಕೆ ವೆಚ್ಚವನ್ನು ಶೂನ್ಯಕ್ಕೆ ತಂದು ಫಲಿತಾಂಶ ಆಧಾರಿತ ವಿದ್ಯುತ್‌ ವಿತರಣೆ ಮಾಡುವ ಉದ್ದೇಶದಿಂದ ಕೇಂದ್ರ ಸರಕಾರ ಈ ಯೋಜನೆಯನ್ನು ರೂಪಿಸಿದೆ.

ಕೇಂದ್ರ ಸರಕಾರ ಮೊದಲ ಬಾರಿಗೆ ಇಂತಹ ಯೋಜನೆ ರೂಪಿಸಿದ್ದು, ವಿದ್ಯುತ್‌ ವಿತರಣೆಯಲ್ಲಿ ಆಗುತ್ತಿರುವ ನಷ್ಟವನ್ನು ಕಡಿಮೆ ಮಾಡಲು ಹಾಗೂ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಲು ಹಣ ವಿನಿಯೋಗ ವಾಗಲಿದೆ. ರಾಜ್ಯಕ್ಕೆ 8,500 ಕೋಟಿ ರೂ. ಯೋಜನೆ ತಯಾರಿಸಿದ್ದು, ಇನ್ನೂ 1,000 ಕೋಟಿ ರೂ.ಗೆ ಬೇಡಿಕೆ ಸಲ್ಲಿಸಲಾಗಿದೆ.
– ಸುನಿಲ್‌ ಕುಮಾರ್‌,
ಇಂಧನ ಸಚಿವ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.