![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ಬಿತ್ತನೆ ಬೀಜ ವಿತರಣೆ ಸಮರ್ಪಕವಾಗಿರಲಿ: ಡಾ| ಎಂ.ಎನ್.
Team Udayavani, Apr 13, 2017, 12:26 PM IST
![bittane-beeja.jpg](https://www.udayavani.com/wp-content/uploads/2017/04/13/bittane-beeja-620x423.jpg)
ಮಂಗಳೂರು: ರಾಜ್ಯದ ರೈತರಿಗೆ ಬಿತ್ತನೆ ಬೀಜ ವಿತರಣೆ ಯೋಜನೆಯನ್ನು ಸಹಕಾರ ಸಂಘಗಳ ಮೂಲಕ ವಿತರಿಸಲು ಕರ್ನಾಟಕ ರಾಜ್ಯ ಸರಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಮಾಹಿತಿ ಕಾರ್ಯಾಗಾರ ನಗರದ ಎಸ್ಸಿಡಿಸಿಸಿ ಬ್ಯಾಂಕ್ನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಮಾತನಾಡಿ, ರಾಜ್ಯ ಸರಕಾರದ ಈ ಯೋಜನೆ ರೈತರಿಗೆ ಬಹು ಉಪಯೋಗವಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭಗೊಳ್ಳುವ ಮೊದಲೇ ಬಿತ್ತನೆ ಬೀಜ ವಿತರಣೆ ಬಗ್ಗೆ ಚಿಂತನೆ ನಡೆಸಿರುವುದು ಶ್ಲಾಘನೀಯ ಎಂದರು.
ಈಗಾಗಲೇ ಕೆಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಬಿತ್ತನೆ ಬೀಜ ವಿತರಣೆ ಕಾರ್ಯ ನಡೆಯುತ್ತಿದೆ. ಈ ಯೋಜನೆ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕಾದರೆ ಸಹಕಾರ ಇಲಾಖೆ ಮತ್ತು ಕೃಷಿ ಇಲಾಖೆಗಳು ಸಮರ್ಪಕವಾಗಿ ಕಾರ್ಯ ಯೋಜನೆ ರೂಪಿಸಬೇಕು. ಅಲ್ಲದೇ ಭತ್ತದ ಬೆಳೆಗೆ ಹೆಚ್ಚು ಪ್ರೋತ್ಸಾಹ ನೀಡಬೇಕೆಂದು ರಾಜೇಂದ್ರ ಕುಮಾರ್ ಹೇಳಿದರು.
ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ ನಾಯಕ್, ಕೃಷಿ ಅಧಿಕಾರಿ ವೀಣಾ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಸಹಕಾರ ಸಂಘಗಳ ಉಪನಿಬಂಧಕರಾದ ಬಿ.ಕೆ. ಸಲೀಂ, ಪ್ರವೀಣ್ ನಾಯಕ್, ಎಸ್ಸಿಡಿಸಿಸಿ ಬ್ಯಾಂಕ್ನ ನಿರ್ದೇಶಕರಾದ ವಿನಯ ಕುಮಾರ್ ಸೂರಿಂಜೆ, ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ, ಸದಾಶಿವ ಉಳ್ಳಾಲ, ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಎಸ್., ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಂಜುನಾಥ ಸಿಂಗ್, ತೋಟಗಾರಿಕಾ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿ’ಸೋಜಾ ಉಪಸ್ಥಿತರಿದ್ದರು.
ದ.ಕ. ಸಹಕಾರಿ ಸಂಘಗಳ ಉಪನಿಬಂಧಕ ಬಿ.ಕೆ. ಸಲೀಂ ಪ್ರಸ್ತಾವನೆ ಗೈದರು. ಎಸ್ಸಿಡಿಸಿಸಿ ಬ್ಯಾಂಕ್, ಸಹಕಾರ ಇಲಾಖೆ, ಕೃಷಿ ಇಲಾಖೆ ಆಶ್ರಯದಲ್ಲಿ ಕಾರ್ಯಾಗಾರ ನಡೆಯಿತು.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Screenshot (6) copy](https://www.udayavani.com/wp-content/uploads/2024/07/Screenshot-6-copy-150x83.jpg)
Mangaluru: ಬಗೆಹರಿಯದ ಬಜಾಲ್ ಅಂಡರ್ಪಾಸ್ ಅವ್ಯವಸ್ಥೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.