ಹಸಿರು ವನಸಿರಿಯ ನಡುವೆ ಸಂಗೀತ ನಿನಾದ


Team Udayavani, May 24, 2018, 5:35 AM IST

shibira-24-5.jpg

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ನಿಡ್ಲೆ ಸಮೀಪದಲ್ಲಿ ಹಸಿರು ವನಸಿರಿಯ ನಡುವೆ ಇರುವ ಕರುಂಬಿತ್ತಿಲ್‌ ಮನೆ ಪರಿಸರವು ಸಂಗೀತ ನಿನಾದದೊಂದಿಗೆ ಸಂಗೀತಪ್ರೇಮಿಗಳ ಮನಸೂರೆಗೊಳ್ಳುತ್ತಿದೆ. ಇದು ಇಂದು ನಿನ್ನೆಯದಲ್ಲ, 17 ವರ್ಷಗಳಿಂದ ಸಂಗೀತ ನಾದಸುಧೆಯಿಂದ ಕರುಂಬಿತ್ತಿಲ್‌ ಮನೆ ಬೆಳಗುತ್ತಿದೆ. ಬೆಳ್ತಂಗಡಿ ತಾಲೂಕಿನ ತೀರಾ ಗ್ರಾಮೀಣ ಪ್ರದೇಶವಾದರೂ ಕರುಂಬಿತ್ತಿಲ್‌ ಮನೆಯ ಸಂಗೀತ ಶಿಬಿರವು ಸಂಗೀತ ಕ್ಷೇತ್ರದಲ್ಲಿ ದೇಶವಿದೇಶಗಳಲ್ಲಿ ಪ್ರಸಿದ್ಧರಾದ ಕರ್ನಾಟಕ ಸಂಗೀತದ ಮೇರು ದಿಗ್ಗಜರನ್ನು ವರ್ಷದಲ್ಲೊಮ್ಮೆ ನಡೆಯುವ ಶಿಬಿರಗಳಲ್ಲಿ ಕಾಣುವ ಅವಕಾಶ ಒದಗಿಸುತ್ತಿರುವವರು ಕೃಷ್ಣಗಾನ ಸುಧಾ ಗ್ಲೋಬಲ್‌ ಆರ್ಟ್ಸ್ ಅಕಾಡೆಮಿಯ ವಿಶ್ವವಿಖ್ಯಾತ ವಯಲಿನ್‌ ಪ್ರತಿಭೆ ಕರುಂಬಿತ್ತಿಲ್‌ನ ವಿದ್ವಾನ್‌ ವಿಠ್ಠಲ ರಾಮಮೂರ್ತಿಯವರು, ಅದೂ ಅವರ ಮನೆಯಂಗಳದಲ್ಲೇ.


ಚೆನ್ನೈಯಿಂದ ಆಗಮನ

ಹದಿನೇಳು ವರ್ಷಗಳಿಂದ ನಿಡ್ಲೆ ಎಂಬ ಕುಗ್ರಾಮದಲ್ಲಿ ‘ಕರುಂಬಿತ್ತಿಲ್‌ ಶಿಬಿರ’ ಹೆಸರಿನಲ್ಲಿ ಪ್ರತೀ ವರ್ಷವೂ ಸಂಗೀತ ಶಿಬಿರ ನಡೆಯುತ್ತಿದೆ. ಕರುಂಬಿತ್ತಿಲ್‌ ಕುಟುಂಬವೂ ಸಂಗೀತಮಯ. ಪ್ರಖ್ಯಾತ ಪಿಟೀಲು ವಿದ್ವಾಂಸರಾದ ವಿಠ್ಠಲ ರಾಮಮೂರ್ತಿ ಚೆನ್ನೈ ಹಾಗೂ ಅವರ ಸಹೋದರಿಯರು ಸೇರಿ ಕುಟುಂಬ ಸಮಾರಂಭದಂತೆ ಆರಂಭಿಸಿದ ಈ ಸಂಗೀತ ಶಿಬಿರವು ಸಂಗೀತ ವಿದ್ಯಾರ್ಥಿಗಳು ಕಾತರದಿಂದ ಕಾಯುವಂತೆ ಮಾಡಿದೆ. ಕೇವಲ ಕೆಲವೇ ವಿದ್ಯಾರ್ಥಿಗಳಿಂದ ಆರಂಭಗೊಂಡ ಕರುಂಬಿತ್ತಿಲ್‌ ಶಿಬಿರವು ಇದೀಗ 200ಕ್ಕೂ ಮಿಕ್ಕಿ ವಿದ್ಯಾರ್ಥಿಗಳನ್ನೊಳಗೊಂಡ ಬೃಹತ್‌ ಶಿಬಿರವಾಗಿ ಮಾರ್ಪಟ್ಟಿದೆ.

ಈ ಬಾರಿಯ ಕರುಂಬಿತ್ತಿಲ್‌ ಸಂಗೀತ ಶಿಬಿರವು ಮೇ 23ರಿಂದ ಪ್ರಾರಂಭಗೊಂಡಿದ್ದು, 27ರವರೆಗೆ ನಡೆಯಲಿದೆ. ಈ ಬಾರಿಯ ಸಂಗೀತ ಶಿಬಿರದಲ್ಲಿ ಸಂಗೀತ ಕ್ಷೇತ್ರದ ದಿಗ್ಗಜರಾದ ವಯಲಿನ್‌ ವಿದ್ವಾನ್‌ ವಿ.ವಿ. ಸುಬ್ರಹ್ಮಣ್ಯಮ್‌, ವಿದ್ವಾನ್‌ ನೆಯ್ಯಾಲಿ ಸಂತಾನ ಗೋಪಾಲನ್‌, ವಿದ್ವಾನ್‌ ಉಡುಪಿ ಗೋಪಾಲಕೃಷ್ಣನ್‌, ವಿದ್ವಾನ್‌ ಶ್ರೀಮುಷ್ಣಮ್‌ ವಿ. ರಾಜ ರಾವ್‌, ನೆಯ್ನಾಲಿ ಆರ್‌. ನಾರಾಯಣನ್‌, ವಿ.ವಿ.ಎಸ್‌. ಮುರಾರಿ, ವಿಶಾಲ್‌ ಸಾಪೂರಮ್‌ ಭಾಗವಹಿಸಲಿದ್ದಾರೆ ಎಂದು ಶಿಬಿರದ ಸಂಯೋಜಕ ವಿದ್ವಾನ್‌ ವಿಠ್ಠಲ್‌ ರಾಮಮೂರ್ತಿ ತಿಳಿಸಿದ್ದಾರೆ.

ವಿಶ್ವ ವಿಖ್ಯಾತ ಕಲಾವಿದರಾದ ಲಾಲ್ಗುಡಿ ಜಿ. ಜಯರಾಮನ್‌, ಡಾ| ಎಂ. ಬಾಲಮುರಳೀಕೃಷ್ಣ , ಉಮ ಯಾಳಪುರಂ ಕೆ. ಶಿವರಾಮನ್‌, ಬಾಂಬೆ ಜಯಶ್ರೀ, ಟಿ.ಎಂ. ಕೃಷ್ಣ, ಅಭಿಷೇಕ್‌ ರಘುರಾಮ್‌ ಈ ಶಿಬಿರಕ್ಕೆ ಭೇಟಿ ನೀಡಿ, ತಮ್ಮ ಸಂಗೀತದ ಅನುಭವವನ್ನು ಶಿಬಿರಾರ್ಥಿಗಳಿಗೆ ಧಾರೆಯೆರೆದಿದ್ದಾರೆ. ಡಾ|  ಬಾಲಮುರಳೀಕೃಷ್ಣ ಅವರು ಈ ಕರುಂಬಿತ್ತಿಲ್‌ ಸಂಗೀತ ಶಿಬಿರಕ್ಕೆ ಭೇಟಿ ನೀಡಿದ್ದ ಸಂದರ್ಭಗಳಲ್ಲಿ ನಾನು ಕರುಂಬಿತ್ತಿಲ್‌ ಶಿಬಿರದಲ್ಲಿ ಶಾಶ್ವತವಾಗಿ ಸಂಗೀತಮಯನಾಗಿ ನೆಲೆಸಿರುತ್ತೇನೆ ಎಂದು ಪ್ರೀತಿಯಿಂದ ಮತ್ತು ಭಾವುಕತೆಯಿಂದ ನುಡಿದಿದ್ದರು.ವಿಶೇಷ ಕಛೇರಿಗಳು, ಪ್ರತಿ ಶಿಬಿರಾರ್ಥಿಗೂ ಮೃದಂಗ, ವಯೊಲಿನ್‌ ಜೊತೆ ಪ್ರದರ್ಶನ ನೀಡುವ ಅವಕಾಶ, ಸಂಗೀತ ಕ್ವಿಜ್‌, ಸಂಗೀತ ಪ್ರಾತ್ಯಕ್ಷಿಕೆ ಕಾದಿದೆ. ಸಂಗೀತ ದಿಗ್ಗಜರು ಶಿಬಿರಾರ್ಥಿಗಳಿಗೆ ಪಾಠವನ್ನೂ ಮಾಡುತ್ತಾರೆ. ಮೇ 27ರಂದು ಸಮಾರೋಪ. ಅಂದು ಶಿಬಿರಾರ್ಥಿಗಳ ಸಮೂಹ ಕಛೇರಿಯೊಂದಿಗೆ ಮುಖ್ಯ ಅತಿಥಿಗಳಾದ ವಿದ್ವಾನ್‌ ವಿ.ವಿ. ಸುಂದರನ್‌, ವಿದ್ವಾನ್‌ ನೆಯ್ನಾಲಿ ಸಂತಾನ ಗೋಪಾಲನ್‌ ಅವರ ಕಛೇರಿಯೊಂದಿಗೆ ಈ ಶಿಬಿರಕ್ಕೆ ತೆರೆ ಬೀಳಲಿದೆ.

ವಿಶೇಷತೆ
ಸಂಗೀತದ ಮೇಲಿನ ಅನನ್ಯ ಪ್ರೀತಿಯಿಂದ ವರ್ಷವಿಡೀ ದೇಶ ವಿದೇಶಗಳ ಕಾರ್ಯಕ್ರಮಗಳಿಗಾಗಿ ಸಮಯ ಸಾಲದು ಎಂಬಂತಿದ್ದರೂ ಬೇಸಗೆ ಬರುತ್ತಿದ್ದಂತೆಯೇ ಎಲ್ಲ ಕಾರ್ಯಗಳನ್ನು ಬದಿಗೊತ್ತಿ ಈ ಸಂಗೀತ ಶಿಬಿರಕ್ಕೆ ಕುಟುಂಬ ಸಮೇತ ಆಗಮಿಸುವ ವಿಠ್ಠಲ್‌ ರಾಮಮೂರ್ತಿ ಅವರ ಕುಟುಂಬ, ಸಂಗೀತ ಪ್ರೇಮಿಗಳಿಗೆ ರಸದೌತಣ ಉಣಬಡಿಸುತ್ತಿದೆ. ಈ ಶಿಬಿರದಲ್ಲಿ ದಕ್ಷಿಣ ಕನ್ನಡ ಮಾತ್ರವಲ್ಲದೆ, ದೂರದ ನಗರಗಳಿಂದಲೂ ಶಿಬಿರಾರ್ಥಿಗಳು ಬರುತ್ತಾರೆ. ಹಾಗೆ ಬಂದವರೆಲ್ಲ ಕರುಂಬಿತ್ತಿಲ್‌ ಕುಟುಂಬದ ಸದಸ್ಯರಂತೆಯೇ ಸಕ್ರಿಯರಾಗಿ ಬೆರೆಯುತ್ತಾರೆ. ಇದು ಈ ಶಿಬಿರದ ವಿಶೇಷತೆ.

— ಗುರುಮೂರ್ತಿ ಎಸ್‌.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.