ತೋಡು ತಿರುಗಿಸಿ ಕೃಷಿಗೆ ಹಾನಿ: ದೂರಿತ್ತರೂ ಕ್ರಮವಿಲ್ಲ!


Team Udayavani, Jul 11, 2018, 2:00 AM IST

thodu-10-7.jpg

ವಿಶೇಷ ವರದಿ – ಕೊಕ್ಕಡ: ಸರಕಾರಿ ದಾಖಲೆಯಲ್ಲಿ ಪರಂಬೋಕು ತೋಡು ಎಂದೇ ನಮೂದಾಗಿದೆ. ಆದರೆ, ತೋಡು ತಿರುಗಿಸಿ ಪಕ್ಕದ ಜಮೀನಿನ ಮಾಲಕ ಬಡ ಕುಟುಂಬದ ಮೇಲೆ ದಬ್ಟಾಳಿಕೆ ಮಾಡುತ್ತಿದ್ದಾನೆ. ಇರುವ 40 ಸೆಂಟ್ಸ್‌ ಸ್ಥಳ, ಮನೆ ಹಾಗೂ ಶೆಡ್‌ ತೋಡು ತಿರುವಿನಿಂದ ಕುಸಿಯುವ ಭೀತಿಯಲ್ಲಿದೆ ಪಟ್ರಮೆಯ ಕಲ್ಕೊಡಂಗೆ ನಿವಾಸಿ ಏಕನಾಥ ಭಟ್ಟರ ಕುಟುಂಬ. ಕಂದಾಯ ಇಲಾಖೆ, ಮಾಜಿ ಶಾಸಕರಿಗೆ, ಗ್ರಾ.ಪಂ., ಹಾಲಿ ಶಾಸಕರಿಗೆ, ಪೊಲೀಸ್‌ ಠಾಣೆಗೆ ಎರಡು ವರ್ಷಗಳಿಂದ ದೂರು ನೀಡಲಾಗುತ್ತಿದ್ದರೂ ಯಾರೂ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಬೇಸತ್ತು ದಯಾಮರಣಕ್ಕೆ ಅನುಮತಿ ನೀಡುವಂತೆ ಮನವಿ ಸಲ್ಲಿಸಲು ತಯಾರಾದ ಕುಟುಂಬ ಈಗ ಮಾಧ್ಯಮಗಳ ಮೊರೆ ಹೋಗಿದೆ.


ದಾರಿಯೂ ಇಲ್ಲ

ಸುಮಾರು 25 ವರ್ಷಗಳಿಂದ ಪಟ್ರಮೆ ಗ್ರಾಮದ ಕಲ್ಕೊಡಂಗೆ ಎಂಬಲ್ಲಿ 40 ಸೆಂಟ್ಸ್‌ ಸರಕಾರಿ ಭೂಮಿಯಲ್ಲಿ ಏಕನಾಥ ಭಟ್‌ ಕುಟುಂಬ ಕೃಷಿ ಮಾಡುತ್ತಿದೆ. ಅದು ಇಳಿಜಾರು ಪ್ರದೇಶ. ನಾಲ್ಕು ವರ್ಷಗಳ ಹಿಂದೆ ಭಟ್ಟರ ಜಮೀನಿನ ಪಕ್ಕದ ಸ್ಥಳವನ್ನು ವ್ಯಕ್ತಿಯೊಬ್ಬರು ಖರೀದಿಸಿದ ಬಳಿಕ ಪರಂಬೋಕು ತೋಡನ್ನು ಅವರು ಭಟ್ಟರ ಜಮೀನಿಗೆ ತಿರುಗಿಸಿದ್ದಾರೆ. ಇಳಿಜಾರಿನಲ್ಲಿರುವ ಭಟ್ಟರ ಭೂಮಿ ಕೃಷಿಗೆ ಹಾನಿಗೆ ಒಳಗಾಗುತ್ತಿದೆ. ಸದ್ಯ ಮನೆ ಹಾಗೂ ಕೊಟ್ಟಿಗೆಯೂ ಕುಸಿಯುವ ಭೀತಿ ಎದುರಾಗಿದೆ. ಕುಡಿಯುವ ನೀರಿಗಾಗಿ ಬಾವಿ ತೋಡಲೂ ಸಾಧ್ಯವಿಲ್ಲದ ಬಡ ಕುಟುಂಬ ಜಮೀನಿನ ಪಕ್ಕ ಇರುವ ಬಂಡೆಗಲ್ಲಿನ ಒರತೆ ನೀರನ್ನೇ ಹಿಡಿಯುತ್ತಿದೆ. ಈಗ ಅದಕ್ಕೂ ಬೆದರಿಕೆ ಒಡ್ಡಲಾಗಿದೆ. ಕೇಳಿದರೆ ‘ಎಲ್ಲ ಸ್ಥಳವೂ ನನ್ನದೇ’ ಎಂದು ಹೇಳುತ್ತಿದ್ದಾರೆ. ಜಮೀನು ಖರೀದಿಸಿದ ವ್ಯಕ್ತಿ ರಬ್ಬರ್‌ ಗಿಡಗಳನ್ನು ನೆಟ್ಟಿರುವುದರಿಂದ ಇದ್ದ ಒಂದು ಕಾಲು ದಾರಿಯೂ ಮುಚ್ಚಿ ಹೋಗಿದೆ ಎನ್ನುತ್ತಾರೆ ಸಂತ್ರಸ್ತರು. ಇದರಿಂದ ನೊಂದಿರುವ ಭಟ್ಟರ ಕುಟುಂಬ ಗ್ರಾಮ ಪಂಚಾಯತ್‌ ಅಧ್ಯಕ್ಷರಿಗೆ, ಪಿಡಿಒ, ತಾಲೂಕು ಪಂಚಾಯತ್‌-ಜಿಲ್ಲಾ ಪಂಚಾಯತ್‌ ಸದಸ್ಯರಿಗೆ – ಹೀಗೆ ಎಲ್ಲರಿಗೂ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಈ ಕೊರಗಿನಲ್ಲಿ ತಾಲೂಕು ದಂಡಾಧಿಕಾರಿಗೆ ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದೆ.

ನ್ಯಾಯ ದೊರೆತಿಲ್ಲ
25 ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಕೃಷಿ ಮಾಡಿಕೊಂಡು ವಾಸಿಸುತ್ತಿದ್ದು, ನಾಲ್ಕು ವರ್ಷಗಳ ಹಿಂದೆ ಪಕ್ಕದ ಜಮೀನು ಖರೀದಿಸಿದ ವ್ಯಕ್ತಿಗಳಿಂದ ನಮ್ಮ ಮೇಲೆ ದಬ್ಟಾಳಿಕೆ ನಡೆಯುತ್ತಿದೆ. ಎರಡು ವರ್ಷಗಳಿಂದ ಕಂದಾಯ ಅಧಿಕಾರಿಗಳು ಹಾಗೂ ಹಲವು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿಯೂ ನ್ಯಾಯ ದೊರೆತಿಲ್ಲ. ಕಿರುಕುಳಗಳಿಂದ ಬೇಸತ್ತು ಬೇರಾವುದೇ ದಾರಿ ಕಾಣದೇ ತಾಲೂಕು ದಂಡಾಧಿಕಾರಿಯವರಲ್ಲಿ ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದೇನೆ ಎಂದು ಏಕನಾಥ ಭಟ್‌ ಹೇಳಿದ್ದಾರೆ.


ತೋಡು ತಿರುಗಿಸಿದ್ದು ಸರಿಯಲ್ಲ

ಎರಡು ವರ್ಷಗಳ ಹಿಂದೆ ಏಕನಾಥ ಭಟ್‌ ಅವರು ತಮ್ಮ ಜಮೀನಿನ ಪಕ್ಕ ತೋಡು ತಿರುಗಿಸಿದ್ದರಿಂದ ಕೃಷಿಗೆ ಹಾನಿಯಾಗುತ್ತಿದೆ ಎಂದು ದೂರು ನೀಡಿದ್ದರು. ಪರಿಶೀಲನೆಗಾಗಿ ನಾವು, ಜಿ.ಪಂ. ಸದಸ್ಯರು ಹಾಗೂ ಪಿಡಿಒ ಜತೆಗೆ ಹೋಗಿದ್ದೆವು. ದಾಖಲೆಯಲ್ಲಿ ಇರುವ ತೋಡನ್ನು ತಿರುಗಿಸಿದ್ದು ಕಾನೂನಿಗೆ ವಿರುದ್ಧವೆಂದು ಆ ವ್ಯಕ್ತಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ತೋಡನ್ನು ಹಿಂದೆ ಇದ್ದಂತೆಯೇ ಮಾಡಿಕೊಡುವಂತೆ ಸೂಚಿಸಿದ್ದೇವೆ. ಇದು ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಇಲಾಖೆ ಅಧಿಕಾರಿಗಳು ಬಡ ಕುಟುಂಬಕ್ಕೆ ತತ್‌ ಕ್ಷಣ ನ್ಯಾಯ ಒದಗಿಸಬೇಕು.
– ನವೀನ್‌, ಪಟ್ರಮೆ ಗ್ರಾ.ಪಂ. ಅಧ್ಯಕ್ಷರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.