ವೇತನದ ಅರೆಪಾಲು ಗೌರವ ಶಿಕ್ಷಕರಿಗೆ ಸಂಭಾವನೆ


Team Udayavani, Mar 31, 2018, 9:00 AM IST

Teacher-30-3.jpg

ಮಂಗಳೂರು: ಮಕ್ಕಳಿಗೆ ಉತ್ತಮ ಪಾಠ, ಸದ್ವಿಚಾರ ಹೇಳಿಕೊಟ್ಟು ಆದರ್ಶ ಗುರು ಎನಿಸಿಕೊಂಡವರು ಅನೇಕರಿದ್ದಾರೆ. ಇಲ್ಲೊಬ್ಬ ಶಿಕ್ಷಕರು ತನ್ನ ತಿಂಗಳ ಸಂಬಳದ ಅರ್ಧವನ್ನು ಶಾಲೆಯ ಗೌರವ ಶಿಕ್ಷಕರ ಸಂಭಾವನೆಯಾಗಿ ನೀಡುತ್ತ, ಮಕ್ಕಳ ಭವಿಷ್ಯ ಹಸನಾಗುವಂತೆ ನೋಡಿಕೊಂಡಿದ್ದಾರೆ. ಇಂತಹ ಶ್ರೇಷ್ಠ ಕೆಲಸದ ಮೂಲಕ ಸದ್ದಿಲ್ಲದೆ ಸುದ್ದಿಯಾದ ಶಿಕ್ಷಕ ಕೊಂಚಾಡಿ ಶ್ರೀ ರಾಮಾಶ್ರಮ ಅನುದಾನಿತ ಪ್ರಾಥಮಿಕ ಶಾಲೆಯ ಶಿಕ್ಷಕ ಸುರೇಶ್‌ ರಾವ್‌. ಮಾ. 30 ಅವರ ಬೋಧನಾ ವೃತ್ತಿಯ ಕೊನೆಯ ದಿನ.

ಮೂಲತಃ ಮಂಗಳೂರಿನ ಪಚ್ಚನಾಡಿಯವರಾದ ಸುರೇಶ್‌ ರಾವ್‌ ಕಳೆದ 40 ವರ್ಷಗಳಿಂದ ರಾಮಾಶ್ರಮ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2.5 ವರ್ಷಗಳಿಂದ ಮುಖ್ಯಶಿಕ್ಷಕರಾಗಿದ್ದ ಅವರು, 2018ರ ಮಾ. 18ರಂದು ನಿವೃತ್ತರಾಗಿದ್ದಾರೆ. ಮಾ. 31ರಂದು ಅವರ ಸೇವಾವಧಿ ಮುಗಿಯುತ್ತದೆ. ವಿಶೇಷವೆಂದರೆ ಕಳೆದ ನಾಲ್ಕು ವರ್ಷಗಳಿಂದ ಅವರು ಪ್ರತೀ ತಿಂಗಳು ತಮಗೆ ದೊರೆಯುವ ಸಂಬಳದ ಅರ್ಧ ಪಾಲನ್ನು ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಲ್ವರು ಗೌರವ ಶಿಕ್ಷಕರಿಗೆ ವೇತನ ನೀಡುವುದಕ್ಕಾಗಿ ವಿನಿಯೋಗಿಸುತ್ತ ಬಂದಿದ್ದಾರೆ.

ನಾಲ್ವರು ಗೌರವ ಶಿಕ್ಷಕರು
ಶಾಲೆಯಲ್ಲಿ ಒಟ್ಟು 135 ಮಂದಿ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ನಾಲ್ವರು ಖಾಯಂ ಶಿಕ್ಷಕರು ಮತ್ತು ನಾಲ್ವರು ಗೌರವ ಶಿಕ್ಷಕರು ಸೇರಿ ಒಟ್ಟು ಎಂಟು ಮಂದಿ ಶಿಕ್ಷಕರು. ಖಾಯಂ ಶಿಕ್ಷಕರಿಗೆ ಸರಕಾರಿ ವೇತನವಿದೆ, ಗೌರವ ಶಿಕ್ಷಕರ ಸಂಭಾವನೆಯನ್ನು ಅನ್ಯಮೂಲಗಳಿಂದ ಭರಿಸಬೇಕು. ಸ್ವಲ್ಪ ಸಮಯದವರೆಗೆ ಶಾಲಾ ಆಡಳಿತ ಮಂಡಳಿ ಇದನ್ನು ಭರಿಸುತ್ತಿತ್ತು. ಬಳಿಕ ಗೌರವ ಶಿಕ್ಷಕರಿಗೆ ಸಂಬಳ ನೀಡುವುದಕ್ಕೆ ಸಾಧ್ಯವಾಗಲಿಲ್ಲ. ಆದರೆ ಮಕ್ಕಳ ಭವಿಷ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಶಾಲಾ ಮುಖ್ಯ ಶಿಕ್ಷಕರಾಗಿದ್ದ ಸುರೇಶ್‌ ರಾವ್‌ ಸ್ವತಃ ಮುಂದೆ ನಿಂತು ತಮ್ಮ ಸಂಬಳದಲ್ಲಿ ಅರ್ಧ ಪಾಲನ್ನು ಗೌರವ ಶಿಕ್ಷಕರಿಗೆ ಸಂಬಳವಾಗಿ ನೀಡಿ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಬದುಕಿಗೆ ಭರವಸೆಯ ಗುರುವಾದರು. ಇವರ ಮಾದರಿ ಕಾರ್ಯವನ್ನು ಶಾಲೆಯ ಶಿಕ್ಷಕ – ರಕ್ಷಕ ಸಂಘವು ಪ್ರೋತ್ಸಾಹಿಸುತ್ತಿದೆ.

55 ಸಾವಿರ ರೂ.ಗಳಲ್ಲಿ 25 ಸಾವಿರ ರೂ. ಶಿಕ್ಷಕರಿಗೆ!
40 ವರ್ಷಗಳ ಸೇವಾನುಭವ ಹೊಂದಿರುವ ಸುರೇಶ್‌ ರಾವ್‌ ಶಿಕ್ಷಕ ವೃತ್ತಿಯ ಕೊನೆಯ ಹಂತದಲ್ಲಿರುವಾಗ ಒಟ್ಟು 55,000 ರೂ. ವೇತನ ಪಡೆಯುತ್ತಿದ್ದರು. ಈ ಮೊತ್ತದಲ್ಲಿ 25,000 ರೂ.ಗಳನ್ನು ಗೌರವ ಶಿಕ್ಷಕರಿಗೆ ಸಂಭಾವನೆಯಾಗಿ ನೀಡುತ್ತಿದ್ದಾರೆ. ಇಬ್ಬರು ಶಿಕ್ಷಕರಿಗೆ ತಲಾ 5,500 ರೂ., ಓರ್ವ ಶಿಕ್ಷಕನಿಗೆ 6,000 ರೂ. ಹಾಗೂ ಓರ್ವ ಶಿಕ್ಷಕನಿಗೆ 8000 ರೂ.ಗಳನ್ನು ಸೇವಾವಧಿ ಆಧಾರದಲ್ಲಿ ಪ್ರತೀ ತಿಂಗಳು ನೀಡುತ್ತಿದ್ದಾರೆ. ಉಳಿದಂತೆ ಸುಮಾರು 5,000 ರೂ.ಗಳನ್ನು ಇತರ ಖರ್ಚುಗಳಿಗಾಗಿ ಬಳಸುತ್ತಾರೆ.

ಸ್ವಯಂಪ್ರೇರಣೆಯಿಂದ ಈ ಕೆಲಸ
ಸರಕಾರ ಶಿಕ್ಷಕರನ್ನು ನೇಮಕ ಮಾಡುತ್ತಿಲ್ಲ. ಮೊದಲೇ ಕನ್ನಡ ಮಾಧ್ಯಮದ ಬಗ್ಗೆ ಮಕ್ಕಳ ಪೋಷಕರು ಆಸಕ್ತಿ ವಹಿಸುತ್ತಿಲ್ಲ. ಸ್ವಯಂ ಪ್ರೇರಣೆಯಿಂದ ನನ್ನ ಸಂಬಳದಿಂದಲೇ ಶಿಕ್ಷಕರಿಗೆ ವೇತನ ನೀಡಲು ಮುಂದಾದೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಇದೊಂದು ಸಣ್ಣ ಸೇವೆಯಷ್ಟೆ’ ಎನ್ನುತ್ತಾರೆ ಸುರೇಶ್‌ ರಾವ್‌.

ಮಕ್ಕಳ ಶುಲ್ಕವನ್ನೂ ಭರಿಸುತ್ತಿದ್ದರು
ಕೊಂಚಾಡಿ ಶ್ರೀ ರಾಮಾಶ್ರಮ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಪ್ರಸ್ತುತ ಕಲಿಯುತ್ತಿರುವ 135 ಮಂದಿ ಮಕ್ಕಳಲ್ಲಿ ಶೇ. 90ರಷ್ಟು ಉತ್ತರ ಕರ್ನಾಟಕ ಭಾಗದವರು. ಉ. ಕರ್ನಾಟಕ ಭಾಗದಿಂದ ವಲಸೆ ಬಂದ ಕಾರ್ಮಿಕರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ತೀರಾ ಬಡವರಾಗಿದ್ದಾರೆ. ಅಂತಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಶಿಕ್ಷಕರ ಜವಾಬ್ದಾರಿ. ಈ ನಿಟ್ಟಿನಲ್ಲಿ ಸುರೇಶ್‌ ರಾವ್‌ ಅವರ ಸೇವೆ ಶ್ಲಾಘನೀಯ. ಶಿಕ್ಷಕರ ವೇತನ ಮಾತ್ರವಲ್ಲದೆ ಬಡ ಮಕ್ಕಳ ಶುಲ್ಕ, ಬಸ್‌ ಶುಲ್ಕಗಳನ್ನೂ ಅವರು ಪಾವತಿಸುತ್ತಿದ್ದರು ಎನ್ನುತ್ತಾರೆ ರಾವ್‌ ಅವರ ಹಳೇ ವಿದ್ಯಾರ್ಥಿಗಳು. 

ಸುಖೀ ಸಂಸಾರ

ಸುರೇಶ್‌ ರಾವ್‌ ಅವರು ಪತ್ನಿ ಚಂದ್ರಲೇಖಾ ಜತೆಗೆ ಮಂಗಳೂರಿನ ಪಚ್ಚನಾಡಿಯಲ್ಲಿ ವಾಸವಾಗಿದ್ದಾರೆ. ಪುತ್ರ ಶೈಲೇಶ್‌ ರಾವ್‌, ಪುತ್ರಿ ರಶ್ಮಿ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗಿಗಳಾಗಿದ್ದಾರೆ. ರಶ್ಮಿ ಅವರು 1998ರಲ್ಲಿ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನದಲ್ಲಿ ಉತ್ತೀರ್ಣರಾಗಿದ್ದುದನ್ನು ಇಲ್ಲಿ ಸ್ಮರಿಸಬಹುದು.

ಆದರ್ಶರು
ಸುರೇಶ್‌ ರಾವ್‌ ಆದರ್ಶ ಶಿಕ್ಷಕರು. ಶಾಲೆ ಮತ್ತು ಮಕ್ಕಳ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಇಟ್ಟುಕೊಂಡಿದ್ದಾರೆ. ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ದುಡಿಯುವವರಿಗೆ ಸುರೇಶ್‌ ರಾವ್‌ ಅವರೇ ತಮ್ಮ ಸಂಬಳದಲ್ಲಿ ಗೌರವಧನವನ್ನು ನೀಡುತ್ತಿದ್ದರು. ಇದು ಎಲ್ಲರಿಗೂ ಮಾದರಿ.
– ಮಂಜಪ್ಪ , ಮುಖ್ಯ ಶಿಕ್ಷಕರು, ಶ್ರೀ ರಾಮಾಶ್ರಮ ಅನುದಾನಿತ ಪ್ರಾಥಮಿಕ ಶಾಲೆ, ಕೊಂಚಾಡಿ

— ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.