ಹೊಸಮಠ ಸೇತುವೆ ಸಂಪರ್ಕ ರಸ್ತೆಗೆ ವೇಗ


Team Udayavani, May 30, 2018, 11:54 AM IST

30-may-7.jpg

ಕಡಬ : ಇಲ್ಲಿನ ಹೊಸಮಠ ನೂತನ ಸೇತುವೆಯ ಕಾಮಗಾರಿ ಪರಿಶೀಲನೆಗೆ ಸೋಮವಾರ ಸಂಜೆ ಭೇಟಿ ನೀಡಿದ ಸುಳ್ಯ ಶಾಸಕ ಎಸ್‌. ಅಂಗಾರ ಅವರು ನೂತನ ಸೇತುವೆಯ ಸಂಪರ್ಕ ರಸ್ತೆಯ ಕಾಮಗಾರಿಯನ್ನು ಕೂಡಲೇ ಮುಗಿಸಿ ಸೇತುವೆಯನ್ನು ಸಾರ್ವಜನಿಕರ ಉಪಯೋಗಕ್ಕೆ ಸಿದ್ಧಗೊಳಿಸುವಂತೆ ಇಲಾಖಾಧಿಕಾರಿಗಳಿಗೆ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಸಂಪರ್ಕ ರಸ್ತೆಯ ನಿರ್ಮಾಣ ಕಾಮಗಾರಿ ಇನ್ನಷ್ಟು ವೇಗ ಪಡೆದುಕೊಂಡಿದೆ.

ಸೋಮವಾರ ನಸುಕಿನ ವೇಳೆ ಹೊಸಮಠ ಹಳೆ ಸೇತುವೆಗೆ ತಾಗಿಕೊಂಡಂತೆ ಭೂ ಕುಸಿತ ಉಂಟಾಗಿ ರಸ್ತೆ ಹಾನಿಗೊಂಡು ವಾಹನ ಸಂಚಾರಕ್ಕೆ ತೊಡಕಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕರು ನೂತನ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಮಳೆ ಬಿರುಸಾಗುವ ಮೊದಲು ಹೊಸ ಸೇತುವೆಯ ಮೇಲೆ ವಾಹನ ಸಂಚಾರಕ್ಕೆ ಅನುವಾಗುವಂತೆ ಸಂಪರ್ಕ ರಸ್ತೆಯ ಕಾಮಗಾರಿಯನ್ನು ಶೀಘ್ರ ಮುಗಿಸುವಂತೆ ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗೆ ಸೂಚಿಸಿದ್ದರು.

ಭೂಸ್ವಾಧೀನ ಪ್ರಮಾಣ ಕಡಿತ
ಸೇತುವೆಯ ಎರಡೂ ಕಡೆಗಳಲ್ಲಿ ಸಂಪರ್ಕ ರಸ್ತೆ ನಿರ್ಮಾಣಕ್ಕಾಗಿ ಒಟ್ಟು 45 ಸೆಂಟ್ಸ್‌ ಖಾಸಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಈ ಹಿಂದೆ ಗುರುತಿಸಲಾಗಿತ್ತು. ಇದೀಗ ಅದನ್ನು ಕಡಿತಗೊಳಿಸಿ ಕಡಬ ದಿಕ್ಕಿನಲ್ಲಿ ಸುಕೇಶ್‌ ಹೆಬ್ಟಾರ್‌ (2 ಸೆಂಟ್ಸ್‌) ಹಾಗೂ ಗಿರಿಯಪ್ಪ ಗೌಡ (16 ಸೆಂಟ್ಸ್‌) ಅವರಿಗೆ ಸೇರಿದ ಒಟ್ಟು 18 ಸೆಂಟ್ಸ್‌ ಭೂಮಿಯನ್ನು ಮಾತ್ರ ಸ್ವಾಧೀನಪಡಿಸಿಕೊಂಡು ಕಾಮಗಾರಿ ನಡೆಸಲಾಗುತ್ತಿದೆ. ಉಪ್ಪಿನಂಗಡಿ ಭಾಗದಲ್ಲಿ ಸುಮಾರು 200 ಮೀ. ಹಾಗೂ ಕಡಬ ಭಾಗದಲ್ಲಿ ಸುಮಾರು 300 ಮೀ. ಉದ್ದದ ಸಂಪರ್ಕ ರಸ್ತೆ ನಿರ್ಮಿಸಬೇಕಿದೆ. ಉಪ್ಪಿನಂಗಡಿ ಭಾಗದಲ್ಲಿ ಸಂಪರ್ಕ ರಸ್ತೆಯ ಕಾಮಗಾರಿಗೆ ತೊಡಕಾಗಿರುವ ಎಚ್‌ಟಿ ಲೈನ್‌ನ ವಿದ್ಯುತ್‌ ಕಂಬ ವನ್ನು ಮೆಸ್ಕಾಂ ಅಧಿಕಾರಿಗಳು ತೆರವುಗೊಳಿಸಿ ಕೊಡಬೇಕಿದೆ.

ಕಡಬ ಭಾಗದಲ್ಲಿ ಸಂಪರ್ಕ ರಸ್ತೆ ನಿರ್ಮಿಸಬೇಕಾದ ಜಾಗದ ಪಕ್ಕದಲ್ಲಿರುವ ನೀರು ಹರಿಯುವ ತೋಡಿಗೆ ತಡೆಗೋಡೆ ನಿರ್ಮಿಸುವ ಕೆಲಸ ಪ್ರಗತಿಯಲ್ಲಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್‌) ಸೇತುವೆ ನಿರ್ಮಾಣ ನಡೆಸುತ್ತಿದ್ದು, ಸಂಪರ್ಕ ರಸ್ತೆಯ ಕಾಮಗಾರಿ ಲೋಕೋಪಯೋಗಿ ಇಲಾಖೆಯ ಉಸ್ತವಾರಿಯಲ್ಲಿ ನಡೆಯುತ್ತಿದೆ. ಶೀಘ್ರ ಸಂಪರ್ಕ ರಸ್ತೆಯ ಕಾಮಗಾರಿ ಮುಗಿಸಿ ಹೊಸ ಸೇತುವೆಯ ಮೇಲೆ ವಾಹನ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖಾ ಸಹಾಯಕ ಇಂಜಿನಿ ಯರ್‌ ಪ್ರಮೋದ್‌ ಕುಮಾರ್‌ ಕೆ.ಕೆ. ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.