ಸ್ಥಳೀಯರ ಆವಶ್ಯಕತೆ ಪೂರೈಸಲು ಶ್ರಮಿಸಿ: ಶಾಸಕ ಸಂಜೀವ ಮಠಂದೂರು

ಸ್ಫೂರ್ತಿಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

Team Udayavani, Feb 10, 2020, 8:26 PM IST

Matandhuru-10-2

ಹಿರಿಯ ಯಕ್ಷಗಾನ ಕಲಾವಿದ ಡಾ| ಶ್ರೀಧರ ಭಂಡಾರಿ ಅವರಿಗೆ ಸ್ಫೂರ್ತಿಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪುತ್ತೂರು: ಯುವಕ, ಯುವತಿ ಮಂಡಲಗಳು ದೇಶದ ಕಲೆ, ಸಂಸ್ಕೃತಿಯನ್ನು ಪರಿಚಯಿಸುವ ಜತೆಗೆ ಸ್ಥಳಿಯವಾಗಿ ತಳಮಟ್ಟದ ಜನರ ಆವಶ್ಯಕತೆಗಳನ್ನು ಪೂರೈಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಬನ್ನೂರು ಸ್ಫೂರ್ತಿ ಮೈದಾನದಲ್ಲಿ ಫೆ. 8ರಂದು ಸಂಜೆ ನಡೆದ ಸ್ಫೂರ್ತಿ ಯುವಕ-ಯುವತಿ ಮಂಡಲ, ಮಹಿಳಾ ಮಂಡಲ ಹಾಗೂ ಬಾಲ ಸಭಾ ಇವುಗಳ 29ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮದು ತರುಣರ ದೇಶ. ಯುವ ಸಮಾಜ ಶಕ್ತಿಯುತವಾಗಿದ್ದು, ದೇಶದ ಪ್ರಗತಿಯ ಕುರಿತು ಚಿಂತಿಸಬೇಕು. ಯುವಕರು ಸಂಘಟನೆಗಳಲ್ಲಿ ತೊಡಗಿಸಿಕೊಂಡಾಗ ವ್ಯಕ್ತಿತ್ವವೂ ಬೆಳೆಯುತ್ತದೆ, ದೇಶ ನಿರ್ಮಾಣಕ್ಕೂ ಸೇವೆ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.

ಯುವಜನ ಒಕ್ಕೂಟದ ಜಿಲ್ಲಾಧ್ಯಕ್ಷ ಸುರೇಶ್‌ ರೈ ಸೂಡಿಮುಳ್ಳು ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌, ಕಿರುತೆರೆ ನಟ ನಂದಕಿಶೋರ್‌ ಭಟ್ಕಳ, ಸ.ಹಿ.ಪ್ರಾ. ಶಾಲೆ ಕಾಸರಗೋಡು ಚಿತ್ರ ನಟ ರಂಜನ್‌, ಸಹ ನಟ ಸಂಪತ್‌, ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲಾ ಶಿಕ್ಷಕ ಇನಾಸ್‌ ಗೊನ್ಸಾಲ್ವಿಸ್‌ ಮಾತನಾಡಿದರು.

ಸಾಧಕರಿಗೆ ಗೌರವ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರೇಶ್‌ ರೈ ಸೂಡಿಮುಳ್ಳು, ಪಿಎಲ್‌ಡಿ ಬ್ಯಾಂಕ್‌ ನಿವೃತ್ತ ವ್ಯವಸ್ಥಾಪಕ ಯಶೋಧರ ಜೈನ್‌, ಮೆಸ್ಕಾಂನ ಮೋನಪ್ಪ ಗೌಡ, ಬೇಕರಿ ಉತ್ಪನ್ನಗಳ ವಿತರಕ ರಾಜೇಂದ್ರ ಹೆಗ್ಡೆ ನೆಕ್ಕಿಲ ಅವರನ್ನು ಸಮ್ಮಾನಿಸಲಾಯಿತು.

2018-19ನೇ ಸಾಲಿನ 7ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬನ್ನೂರು ಶಾಲೆ ವಿದ್ಯಾರ್ಥಿಗಳಾದ ರೂಪಕ್‌ ಬಿ. ಹಾಗೂ ಲಕ್ಷ್ಮೀ ಅವರಿಗೆ ಪ್ರತಿಭಾ ಪುರಸ್ಕಾರ ಹಾಗೂ ಯುವಕ ಮಂಡಲದ ಗೌರವಾಧ್ಯಕ್ಷ ವಿಶ್ವನಾಥ ನಾಯ್ಕ ಹಾಗೂ ಮಹಿಳಾ ಮಂಡಲ ಜತೆ ಕಾರ್ಯದರ್ಶಿ ಬೇಬಿ ಶೋಭನಾ ಅವರನ್ನು ಗೌರವಿಸಲಾಯಿತು.

ತನ್ವೀ ಹಾಗೂ ಸಾನ್ವಿ ಪ್ರಾರ್ಥಿಸಿದರು. ಯುವ ಸಂಸ್ಥೆಗಳ ಸಂಚಾಲಕ ದಿನೇಶ್‌ ಸಾಲಿಯಾನ್‌ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಆದರ್ಶ ಸಾಲಿಯಾನ್‌ ವರದಿ ವಾಚಿಸಿದರು. ಕಾರ್ತಿಕ್‌, ಉದಯ ಕುಮಾರ್‌, ಭವಿಷ್‌, ವಿಶ್ವನಾಥ ನಾಯ್ಕ, ನವೀನ್‌ ರೈ, ಕುಶಾಲಪ್ಪ ಗೌಡ, ಶರತ್‌ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

ಯುವಕ ಮಂಡಲದ ಅಧ್ಯಕ್ಷ ಹರೀಶ್‌ ಬಿ.ಎನ್‌ ವಂದಿಸಿದರು. ಶಿಕ್ಷಕಿ ದೇವಿಕಾ ಹಾಗೂ ಅಮರನಾಥ ಬಿ.ಕೆ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಈಶ ವಿದ್ಯಾಲಯ ನೆಲ್ಲಿಕಟ್ಟೆ ಇದರ ಡಿಎಮ್‌ಇಎಡ್‌ ನರ್ಸರಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ವೈವಿದ್ಯ ಹಾಗೂ ಸ್ಫೂರ್ತಿ ಕಲಾವಿದರಿಂದ ತುಳುನಾಡ ವೈಭವ ನಡೆಯಿತು.

ಕಲಾಮಾತೆಯ ಆರಾಧನೆ
ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಡಾ| ಬಿ. ಶ್ರೀಧರ ಭಂಡಾರಿ ಅವರಿಗೆ ಈ ವರ್ಷದ ಸ್ಫೂರ್ತಿಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮ್ಮಾನಕ್ಕೆ ಉತ್ತರಿಸಿದ ಅವರು, ಕಲಾವಿದರನ್ನು ಗುರುತಿಸಿ, ಗೌರವಿಸುವುದು ಕಲಾ ಮಾತೆಯ ಆರಾಧನೆ ಮಾಡಿದಷ್ಟೇ ಶ್ರೇಷ್ಠವಾದುದು. ಕಲಾವಿದರನ್ನು ಗುರುತಿಸಲು ಹೃದಯ ಶ್ರೀಮಂತಿಕೆ ಅವಶ್ಯ. ಅದಕ್ಕೆ ಹಣ ಮುಖ್ಯವಲ್ಲ. ಗುಣ ಮುಖ್ಯವಾಗಿದ್ದು, ಸ್ಫೂರ್ತಿ ಯುವ ಸಂಸ್ಥೆಗಳು ಇದಕ್ಕೆ ನಿದರ್ಶನವಾಗಿವೆ ಎಂದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.