ಕ್ರೀಡಾ ಸಚಿವರಿಂದ ಸ್ಪಂದನೆ: ಕ್ರೀಡಾಂಗಣಕ್ಕೆ 14.5 ಕೋ.ರೂ. ಪ್ರಸ್ತಾವ


Team Udayavani, Mar 28, 2017, 11:41 AM IST

28-SUDINA-13.jpg

ಪುತ್ತೂರು: ತಾಲೂಕು ಮೈದಾನವನ್ನು ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾಂಗಣವನ್ನಾಗಿ ಪರಿವರ್ತಿಸಲು 14.5 ಕೋಟಿ ರೂ.ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಕ್ರೀಡಾ ಇಲಾಖೆಯಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದ್ದು, ಬಹುನಿರೀಕ್ಷಿತ ಯೋಜನೆ ಅನುಷ್ಠಾನದ ಕನಸು ಗರಿಗೆದರಿದೆ.

ತಾಲೂಕು ಕ್ರೀಡಾಂಗಣ
ನಗರದ ಕೊಂಬೆಟ್ಟುವಿನಲ್ಲಿ ತಾಲೂಕು ಕ್ರೀಡಾಂಗಣವಿದೆ. 1991-92 ರ ಬಳಿಕ ಕೊಂಬೆಟ್ಟು ಡಿಸ್ಟ್ರಿಕ್ಟ್ ಶಾಲಾ ಅಧೀನದಲ್ಲಿದ್ದ ಈ ಮೈದಾನವನ್ನು ತಾಲೂಕು ಕ್ರೀಡಾಂಗಣವಾಗಿ ಯುವಜನ ಸೇವಾ ಇಲಾಖೆಯ ವ್ಯಾಪ್ತಿಗೆ ಸೇರಿಸಲಾಗಿತ್ತು. 400 ಮೀಟರ್‌ ಮಣ್ಣಿನ ಟ್ರ್ಯಾಕ್‌ ಹೊಂದಿರುವ ಇದರಲ್ಲಿ ಜಿಲ್ಲಾ, ರಾಜ್ಯಮಟ್ಟದ ಅನೇಕ ಕ್ರೀಡಾಕೂಟಗಳು ನಡೆದಿದೆ.

ಕ್ರೀಡಾಂಗಣ ಅಭಿವೃದ್ಧಿ
ಪುತ್ತೂರಿನ ಶಾಸಕರಾಗಿದ್ದ ವಿನಯ ಕುಮಾರ್‌ ಸೊರಕೆ, ಡಿ.ವಿ.ಸದಾನಂದ ಗೌಡ, ಮಲ್ಲಿಕಾ ಪ್ರಸಾದ್‌, ಶಕುಂತಳಾ ಟಿ.ಶೆಟ್ಟಿ ಮತ್ತಿತರರ ಅವಧಿಯಲ್ಲಿ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ನಡೆದಿದೆ. ಮಣ್ಣಿನ ಟ್ರ್ಯಾಕ್‌ ಮತ್ತು ಒಂದು ಬದಿಯ ಪೆವಿಲಿಯನ್‌ ನಿರ್ಮಾಣ, ಜಿಮ್‌ ಕೊಠಡಿ ಮೊದಲಾ ದವು ಗಳಿವೆ. ಈ ಹಿಂದೆ ಎರಡನೆ ಹಂತದ ಅಭಿವೃದ್ಧಿಗಾಗಿ 1.5 ಕೋ.ರೂ. ವೆಚ್ಚದ ಪ್ರಸ್ತಾವನೆಯನ್ನು ಕಳುಹಿಸಿದ್ದು, ಈಗ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ 14.5 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ.

ಪ್ರಸ್ತಾವನೆಯಲ್ಲಿ ಏನೇನಿದೆ?
6.5 ಕೋಟಿ ರೂ. ವೆಚ್ಚದಲ್ಲಿ 400 ಮೀ. ಸಿಂಥೆಟಿಕ್‌ ಟ್ರ್ಯಾಕ್‌, 8 ಕೋಟಿ ರೂ.ನಲ್ಲಿ ಒಳಾಂಗಣ- ಹೊರಾಂಗಣ ಕ್ರೀಡಾಂಗಣ, ಪೆವಿಲಿಯನ್‌, 60ಗಿ20 ಅಡಿ ಉದ್ದ-ಅಗಲದ 3 ಅಂತಸ್ತಿನ ಒಳಾಂಗಣ ಕ್ರೀಡಾಂಗಣವೂ ನಿರ್ಮಾಣಗೊಳ್ಳಲಿದೆ. ಈಗಾಗಲೇ ಎರಡು ಕಡೆ ಪೆವಿಲಿಯನ್‌ ಇದ್ದು, ಇನ್ನೊಂದು ಬದಿಯಲ್ಲಿ ಹೊಸ ಪೆವಿಲಿಯನ್‌ ನಿರ್ಮಾಣವಾಗಲಿದೆ. 

The stadiumThe stadium
ಅಂತಾರಾಷ್ಟ್ರೀಯ ಕ್ರೀಡಾಂಗಣ ರೂಪಿ ಸಲು ಹೊಸದಾಗಿ ರಚಿಸಲಾದ ಪುತ್ತೂರು ನ್ಪೋರ್ಟ್ಸ್ ಕ್ಲಬ್‌, ವಿವಿಧ ದೈಹಿಕ ಶಿಕ್ಷಣ ಶಿಕ್ಷಕರ ಉಪಸ್ಥಿತಿಯಲ್ಲಿ ಸಭೆ ನಡೆದಿದೆ. ಅನಂತರ ದಿಲ್ಲಿಯ ಶಿವನರೇಶ್‌  ನ್ಪೋರ್ಟ್ಸ್  ಕಂಪೆನಿಯ ತಾಂತ್ರಿಕ ಅಧಿಕಾರಿಗಳು ನೀಲ ನಕಾಶೆ ತಯಾರಿಸಿದ್ದಾರೆ. ವಾರದ ಹಿಂದೆ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಯುವಜನ ಕ್ರೀಡಾಧಿಕಾರಿ ಮೊದಲಾದವರು ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಅವರನ್ನು ಭೇಟಿ ಮಾಡಿ ಪ್ರಸ್ತಾವನೆ ಕುರಿತು ಚರ್ಚಿಸಿದ್ದಾರೆ. ಸಚಿವರಿಂದಲೂ ಸಕಾರಾತ್ಮಕ ಸ್ಪಂದನೆ ದೊರೆತಿದೆ.

ಕ್ರೀಡಾಂಗಣ ಕನಸು
ಪುತ್ತೂರಿನ ಮಾಜಿ ಮತ್ತು ಹಾಲಿ ಶಾಸಕರ ಅವಧಿಯಲ್ಲಿ ತಾ| ಕ್ರೀಡಾಂಗಣದ ಅಭಿವೃದ್ಧಿಗೆ ಅನೇಕ ಪ್ರಯತ್ನ ಆಗಿತ್ತು. ಇತ್ತೀ ಚೆಗೆ ಪುತ್ತೂರಿನಲ್ಲಿ ನಡೆದ ಸಭೆಯಲ್ಲಿ ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಶಾಸಕಿ ಕೋರಿಕೆ ಮೇರೆಗೆ ಪುತ್ತೂರಿಗೆ ಜಿಲ್ಲಾ ಕ್ರೀಡಾಂಗಣಕ್ಕೆ ಹೆಚ್ಚು ಅನುದಾನ ನೀಡುವು ದಾಗಿ ಹೇಳಿದ್ದರು. ಅನಂತರ ಸಮಿತಿ ರಚಿಸಿ, ಕ್ರೀಡಾಂಗಣ ರೂಪಿಸುವ ಹಲವು ಪ್ರಯತ್ನ ನಡೆದಿತ್ತು. ಈಗ ಕ್ರೀಡಾ ಸಚಿವರ ಭರವಸೆ ಹಿನ್ನೆಲೆಯಲ್ಲಿ ಕನಸು ಗರಿಗೆದರಿದೆ.

ಸಿಂಥೆಟಿಕ್‌ ಟ್ರ್ಯಾಕ್‌
ಮಂಗಳೂರು, ಮೂಡಬಿದಿರೆಯಲ್ಲಿ ಈಗಾಗಲೇ ಸಿಂಥೆಟಿಕ್‌ ಟ್ರ್ಯಾಕ್‌ ನಿರ್ಮಾಣವಾಗಿದೆ. ಜಿಲ್ಲಾ ಕೇಂದ್ರವಾಗಿ ರೂಪು ಗೊಳ್ಳಲು ಅರ್ಹತೆ ಹೊಂದಿರುವ ಪುತ್ತೂ ರಿಗೂ ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿ ಮತ್ತು ಕ್ರೀಡಾಪಟುಗಳ ಹಿತದೃಷ್ಟಿಯಿಂದ ಸಿಂಥೆಟಿಕ್‌ ಟ್ರ್ಯಾಕ್‌ ಅಗತ್ಯವಾಗಿತ್ತು. 400 ಮೀ. ಮಣ್ಣಿನ ಟ್ರ್ಯಾಕ್‌ನಲ್ಲಿ ಓಡಿದ ಸ್ಪರ್ಧಿಗೆ ಸಿಂಥೆಟಿಕ್‌ ಟ್ರ್ಯಾಕ್‌ನಲ್ಲಿ ಓಡುವುದು ಅಷ್ಟು ಸುಲಭವಲ್ಲ. ಎತ್ತರ ಜಿಗಿತ ಸ್ಪರ್ಧೆಯಲ್ಲಿ ಹೊಯಿಗೆ ಮೇಲೆ ಹಾರಿದ ಸ್ಪರ್ಧಿಗೆ ಜಂಪ್ಸ್‌ಬೆಡ್‌ನ‌ಲ್ಲಿ ಹಾರುವುದು ಸಲೀಸಲ್ಲ. 

ಸಾಲು-ಸಾಲು ಸಾಧಕರು..!
ಪುತ್ತೂರಿನಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಬೇಟೆಯಾಡಿದ ಸಾವಿ ರಾರು ಸ್ಪರ್ಧಿಗಳು ಇದ್ದಾರೆ. ಈಗಿನ ಸಾಧ ಕರ ಪಟ್ಟಿ ಗಮನಿಸಿದರೆ, ಸರ್ಫಿಂಗ್‌ನಲ್ಲಿ ಅಂತಾರಾಷ್ಟ್ರೀಯ ಪದಕ ಪಡೆದ ಸಿಂಚನಾ, ಅನೀಶಾ ನಾಯಕ್‌, ಈಜು ಸ್ಪರ್ಧಿ ವೈಷ್ಣವ್‌ ಹೆಗ್ಡೆ, ಈಟಿ ಎಸೆತದಲ್ಲಿ ಕನ್ನಿಕಾ ಅಡಪ, ರೆಬೆಕಾ, ಪ್ರೋ ಕಬಡ್ಡಿ ಆಟಗಾರ ಪ್ರಶಾಂತ್‌ ರೈ, ತ್ರೋಬಾಲ್‌ನಲ್ಲಿ ಪೂರ್ಣಿಮಾ ಹೀಗೆ ಸಾಲು-ಸಾಲು ಸಾಧಕರು ಇಲ್ಲಿದ್ದಾರೆ.

ಐಪಿಎಲ್‌ ಕ್ರಿಕೆಟ್‌ ಮೈದಾನ
ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಪಂದ್ಯಾಟ ಆಯೋಜಿಸುವಂತ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲು ತಾಲೂಕಿನ ಬೆಟ್ಟಂಪಾಡಿ ಬಳಿ ಸರಕಾರಿ ಜಾಗದ ಪರಿಶೀಲನೆ ನಡೆದಿದೆ. ಐಪಿಎಲ್‌, ರಣಜಿಯಂತಹ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ  ನಿರ್ಮಿಸಲು ಶಾಸಕರಾದಿ ಯಾಗಿ, ರಾಜ್ಯ ಕ್ರಿಕೆಟ್‌ ಬೋರ್ಡ್‌ ಅಧಿಕಾರಿಗಳು ಉತ್ಸುಕತೆ ಹೊಂದಿದ್ದು, ಸ್ಥಳ ಅಂತಿಮಗೊಳ್ಳಬೇಕಿದೆ.

ಸಕಾರಾತ್ಮಕ ಸ್ಪಂದನೆ
ಪುತ್ತೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ 14.5 ಕೋ.ರೂ.ವೆಚ್ಚದಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಸಕರ ಉಪಸ್ಥಿತಿಯಲ್ಲಿ ಕ್ರೀಡಾ ಸಚಿವರಿಗೂ ಪ್ರಸ್ತಾವನೆ ಪ್ರತಿ ಸಲ್ಲಿಸಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ.
– ಮಾಮಚ್ಚನ್‌ ಎಂ., ಸಹಾಯಕ ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.