Urwa Sri Mariyamma; ಫೆ. 11-15: ಪುನರ್‌ ಪ್ರತಿಷ್ಠೆ; ಬ್ರಹ್ಮಕಲಶೋತ್ಸವ

ಉರ್ವ ಶ್ರೀ ಮಾರಿಯಮ್ಮ ಕ್ಷೇತ್ರಕ್ಕೆ ವೈಭವದ ಹೊರೆಕಾಣಿಕೆ ಮೆರವಣಿಗೆ

Team Udayavani, Feb 10, 2024, 12:35 AM IST

Urwa Sri Mariyamma; ಫೆ. 11-15: ಪುನರ್‌ ಪ್ರತಿಷ್ಠೆ; ಬ್ರಹ್ಮಕಲಶೋತ್ಸವ

ಮಂಗಳೂರು: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಫೆ.11ರಿಂದ ಫೆ.15ರ ವರೆಗೆ ಶ್ರದ್ಧಾ ಭಕ್ತಿಯಿಂದ ನಡೆಯಲಿರುವ ಪುನರ್‌ಪ್ರತಿಷ್ಠೆ ಸಹಿತ ಬ್ರಹ್ಮಕಲ ಶೋತ್ಸವದ ಪೂರ್ವಭಾವಿಯಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆ ಶುಕ್ರವಾರ ಸಂಜೆ ಮಂಗಳೂರಿನಲ್ಲಿ ಸಂಪನ್ನಗೊಂಡಿತು.

ನಗರದ ಗೋಲ್ಡ್‌ ಪಿಂಚ್‌ ಸಿಟಿ ಮೈದಾನ ಕೂಳೂರು ಹಾಗೂ ಕೇಂದ್ರ ಮೈದಾನದಿಂದ ಏಕಕಾಲದಲ್ಲಿ ಹೊರೆ ಕಾಣಿಕೆ ಮೆರವಣಿಗೆ ಆರಂಭ ವಾಯಿತು. 300ಕ್ಕೂ ಅಧಿಕ ಹೊರೆ ದಿಬ್ಬಣದ ವಾಹನಗಳು ಹಾಗೂ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದರು. ಎರಡೂ ಕಡೆ ಯಿಂದ ಸಾಗಿಬಂದ ಹೊರೆಕಾಣಿಕೆ ಮೆರವಣಿಗೆ ಸಂಜೆ 6.30ರ ಸುಮಾರಿಗೆ ಲೇಡಿಹಿಲ್‌ ನಾರಾಯಣಗುರು ಸರ್ಕಲ್‌ ಬಳಿ ಒಟ್ಟು ಸೇರಿ ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ ಸಾಗಿತು.

ಗೋಲ್ಡ್‌ ಪಿಂಚ್‌ ಸಿಟಿ ಮೈದಾನದಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ| ಜಿ. ಶಂಕರ್‌, ಬ್ರಹ್ಮಕಲಶೋತ್ಸವದ ಸಂಭ್ರಮಕ್ಕೆ ಸಕಲ ಸಿದ್ಧತೆ ನಡೆಸ ಲಾಗಿದೆ. ಊರ-ಪರವೂರಿನ ಭಕ್ತ ಜನರು ವಿವಿಧ ಪ್ರಕಾರದಲ್ಲಿ ಸಹಕಾರ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ನಡೆದಿದೆ. ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಸರ್ವರೂ ಪಾಲ್ಗೊಳ್ಳುವ ಮೂಲಕ ಶ್ರೀದೇವರ ಕೃಪೆಗೆ ಪಾತ್ರರಾಗೋಣ ಎಂದರು.

ಮಂಗಳೂರು ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಕ್ಷೇತ್ರದ ಪುರೋಹಿತರಾದ ವೆಂಕಟರಮಣ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅನಿಲ್‌ ಕುಮಾರ್‌ ಕರ್ಕೇರ ಬೊಕ್ಕಪಟ್ಣ, ಪ್ರಧಾನ ಸಂಚಾಲಕ ಗೌತಮ್‌ ಸಾಲ್ಯಾನ್‌ ಕೋಡಿಕಲ್‌, ಪ್ರಧಾನ ಕಾರ್ಯದರ್ಶಿ ಜಗದೀಶ್‌ ಬಂಗೇರ ಬೋಳೂರು, ಪ್ರಮುಖರಾದ ಲಕ್ಷ್ಮಣ್‌ ಅಮೀನ್‌ ಕೋಡಿಕಲ್‌, ಚೇತನ್‌ ಬೆಂಗ್ರೆ ಸಹಿತ ಗಣ್ಯರು ಉಪಸ್ಥಿತರಿದ್ದರು.

ನೆಹರೂ ಮೈದಾನದಿಂದ ಆರಂಭವಾದ ಹೊರೆಕಾಣಿಕೆ ಮೆರವಣಿಗೆಗೆ ಎ.ಜೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಜೆ.ಶೆಟ್ಟಿ ಅವರು ಚಾಲನೆ ನೀಡಿದರು. ಗಣೇಶ್‌ ಕುಲಾಲ್‌, ಲೋಕೇಶ್‌ ಸುವರ್ಣ, ಶಶಿಕುಮಾರ್‌ ಬೆಂಗ್ರೆ, ಭರತ್‌ ಭೂಷಣ್‌, ಮೋಹನ್‌ ಬೆಂಗ್ರೆ, ನಿತಿನ್‌ ಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

ಆಕರ್ಷಕ ಹೊರೆದಿಬ್ಬಣ
ಮೆರವಣಿಗೆಯಲ್ಲಿ ಕೇಸರಿ ಪೇಟಧಾರಿಗಳು, ಭಜನ ತಂಡಗಳು, ಕೊಂಬು-ಚೆಂಡೆ, ಕೀಲು ಕುದುರೆ, ಶಿಲ್ಪಕಲಾಗೊಂಬೆ ತಂಡಗಳು, ನಾಸಿಕ್‌ ತಂಡಗಳು ವಿಶೇಷ ಮೆರುಗು ನೀಡಿದವು. ಹೂವು, ತೋರಣ, ಬಾಳೆಗೊನೆ, ಭಗವಾಧ್ವಜ ಅಲಂಕಾರದಿಂದ ಶೋಭಿಸಿದ ವಾಹನಗಳಲ್ಲಿ ಹಸುರು ಹೊರೆಕಾಣಿಕೆಯನ್ನು ತರಲಾಯಿತು. ಉರ್ವ ಮಾರಿಯಮ್ಮ ದೇವಸ್ಥಾನ, ಮೀನುಗಾರಿಕೆ ಬೋಟು, ಶ್ರೀರಾಮ ಸಹಿತವಾದ ಅಯೋಧ್ಯೆ ದೇವಸ್ಥಾನ, ಮಹಿಷ ಮರ್ದಿನಿ, ಬಲಿ ಚಕ್ರವರ್ತಿ, ಹನುಮಾನ್‌ ಸ್ತಬ್ದಚಿತ್ರಗಳು ಗಮನ ಸೆಳೆದವು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.