ಹೊನಲು ಬೆಳಕಿನಲ್ಲಿ ರೋಮಾಂಚನಕಾರಿ ಸಾಹಸ ಪ್ರದರ್ಶನ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡಾಕೂಟ: 3,399 ವಿದ್ಯಾರ್ಥಿಗಳು ಭಾಗಿ

Team Udayavani, Dec 16, 2019, 10:03 PM IST

1612BTRBPH2–VIDYARTHIGALA-GUMPU-KUNITHA

ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಾರ್ಷಿಕ ಹೊನಲು ಬೆಳಕಿನ ಕ್ರೀಡಾಕೂಟ ಡಿ. 15ರಂದು ನಡೆಯಿತು.ಸುಮಾರು 3,399 ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ, ಮೈನವಿರೇಳಿಸುವ ಪ್ರದರ್ಶನ ನೀಡಿದರು.

ಅಯೋಧ್ಯೆಯಲ್ಲಿ ನಿರ್ಮಾಣವಾಗುವ ಶ್ರೀರಾಮ ಮಂದಿರದ ಆಚಾರದಲ್ಲಿ ಕುಳಿತು, ಹೊನಲು ಬೆಳಕಿನಲ್ಲಿ ಮಿಂಚಿದರು. ಬಣ್ಣದ ದಿರಿಸಿನಲ್ಲಿ ವಿದ್ಯಾರ್ಥಿ ನಿಯರು ಮೂರು ಸುತ್ತಿನ ಹೆದ್ದೆರೆ ಮಾದರಿಯ ನೃತ್ಯ ಪ್ರದರ್ಶನ ನೀಡಿದರು. ಭಗವಾಧ್ವಜ ಹಿಡಿದು ಬೈಕ್‌ ಸಾಹಸಗಳನ್ನೂ ಪ್ರದರ್ಶಿಸಿದರು. ಮೇಜಿನ ಮೇಲೆ ಬಾಟಲಿ, ಅದರ ಮೇಲೆ ಸ್ಟೂಲ್‌ – ಹೀಗೆ ನಾಲ್ಕು ಅಂತಸ್ತುಗಳ ಮೇಲೆ ಹಲಗೆಯಿಟ್ಟು ನಡೆಸಿದ ಕೂಪಿಕಾ ಪ್ರದರ್ಶನ ಪ್ರೇಕ್ಷಕರು ಉಸಿರು ಬಿಗಿ ಹಿಡಿಯುವಂತೆ ಮಾಡಿತು. ಮಲ್ಲಕಂಬದ ಸಾಹಸಗಳೂ ಅದ್ಭುತವಾಗಿದ್ದವು.

ಬೆಂಕಿಯ ವೃತ್ತದ ನಡುವೆ ಮೂವರು ವಿದ್ಯಾರ್ಥಿಗಳು ಏಕಕಾಲಕ್ಕೆ ಜಿಗಿದುಬಂದಿದ್ದು ಕುತೂಹಲ ಮೂಡಿಸಿತು. ವಿದ್ಯಾರ್ಥಿಗಳ ಪಥಸಂಚಲನ, ಶಿಶು ನೃತ್ಯ, ಘೋಷ್‌ ಪ್ರದರ್ಶನ, ನಿಯುದ್ಧ, ಯೋಗಾಸನ, ಪ್ರಾಥಮಿಕ ವಿದ್ಯಾರ್ಥಿಗಳಿಂದ ಶಿವಲಿಂಗ-ಓಂಕಾರ- ತಾವರೆ ಚಿತ್ತಾರಗಳ ರಚನೆ, ಕೋಲಿ¾ಂಚು ಪ್ರದರ್ಶನ, ನೃತ್ಯ ಭಜನೆ, ದೀಪಾರತಿ, ಘೋಷ್‌ ಚಕ್ರ ಸಮತೋಲನ, ಕೇರಳ ಚೆಂಡೆ ವಾದನ, ರಂಗೋಲಿ ಕುಣಿತ, ಚಂದ್ರಯಾನ ಉಡಾವಣೆ, ಆಡ್ವಾಣಿಯವರ ಆಯೋಧ್ಯಾ ರಥಯಾತ್ರೆ, ರಾಮಮಂದಿರದ ಚಿತ್ರಣಗಳು ಮನಸೂರೆಗೊಂಡವು.

ಗಣ್ಯರ ಮೆಚ್ಚುಗೆ
ಪುದುಚೇರಿ ರಾಜ್ಯಪಾಲೆ ಡಾ| ಕಿರಣ್‌ ಬೇಡಿ ಪೂರ್ಣ ಪ್ರದರ್ಶನ ವೀಕ್ಷಿಸಿ, ಇಂತಹ ಪ್ರದರ್ಶನವನ್ನು ತನ್ನ ಜೀವಮಾನದಲ್ಲಿ ಕಂಡಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್‌ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ತುಳು ಸಾಹಿತ್ಯ ಪರಿಷತ್‌ ಅಧ್ಯಕ್ಷ ದಯಾನಂದ ಕತ್ತಲಸಾರ್‌, ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು, ಬಳ್ಳಾರಿ ಶಾಸಕ ರಾಜಶೇಖರ್‌, ಉದ್ಯಮಿ ಶಶಿಧರ ಶೆಟ್ಟಿ, ರಾಘವೇಂದ್ರ ರಾವ್‌, ಆರೆಸ್ಸೆಸ್‌ ಕಾರ್ಯವಾಹರಾದ ಬಸವರಾಜ್‌, ಶ್ರೀಧರ್‌, ಝಾರ್ಖಂಡ್‌ ಸಚಿವ ಓಂಪ್ರಕಾಶ್‌, ಪ್ರಸಾದ್‌ ನೇತ್ರಾಲಯದ ಡಾ| ಪ್ರಸಾದ್‌, ದೇಹದಾಡ್ಯì ಪಟು ರವಿ ಮಾತನಾಡಿದರು.

ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಎ., ಚಿತ್ರನಟ ಪ್ರಣೀತ್‌ ಸುಭಾಷ್‌, ಸಂಸದರಾದ ಕೆ.ಸಿ. ರಾಮಮೂರ್ತಿ, ಅಣ್ಣಾಸಾಹೇಬ್‌ ಜೊಲ್ಲೆ, ಉಮೇಶ್‌ ಜಾಧವ್‌, ಶಾಸಕರಾದ ಪಿ. ರಾಜೀವ್‌, ಅವಿನಾಶ್‌ ಜಾಧವ್‌, ಗುಜರಾತ್‌ ಶಾಸಕ ಜಿನರಾಜ ಪೂಜಾರಿ, ದಯಾನಂದ ಭಜಂತ್ರಿ, ವಿಧಾನ ಪರಿಷತ್‌ ಸದಸ್ಯರಾದ ಎಲ್‌.ಎಸ್‌. ಭೋಜೇಗೌಡ, ಧರ್ಮೇಗೌಡ, ಉದ್ಯಮಿಗಳಾದ ಡಾ| ಅನಂತರಾಮ, ಶಶಿರಾಜ ಶೆಟ್ಟಿ ಬರೋಡಾ, ವಿಜಯ ಅಹುಜಾ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ, ಸಹಸಂಚಾಲಕ ರಮೇಶ್‌ ಎನ್‌., ಪ್ರಾಂಶುಪಾಲ ಕೃಷ್ಣಪ್ರಸಾದ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.