ಆಡಿದ್ದನ್ನು ಮಾಡಿ ತೋರಿಸಿದ ಗಟ್ಟಿಗ ಶ್ರೀಕೃಷ್ಣ ಶರ್ಮ


Team Udayavani, Apr 16, 2019, 6:15 AM IST

1504VTL-Shrikrishna-Sharma1

ವಿಟ್ಲ: ಪರೀಕ್ಷೆಯ ಅಂತಿಮ ಹಂತದಲ್ಲಿಯೇ ರಾಜ್ಯ ಮಟ್ಟದಲ್ಲಿ ರ್‍ಯಾಂಕ್‌ ನಿರೀಕ್ಷಿಸಿದ್ದೆ. ಪ್ರಥಮ ರ್‍ಯಾಂಕ್‌ ಬಂದಿರುವುದು ಸಂತಸವಾಗಿದೆ. ಮುಂದೆ ಬಿಕಾಂ ಜತೆಯಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗುವ ಗುರಿ ಇಟ್ಟುಕೊಂಡಿದ್ದೇನೆ ಎಂದು ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿರುವ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಶ್ರೀಕೃಷ್ಣ ಶರ್ಮ ತಿಳಿಸಿದರು.

ಅವರು ಉದಯವಾಣಿ ಪ್ರತಿನಿಧಿ ಜತೆ ಮಾತನಾಡಿ, ಅಳಿಕೆ ಸಂಸ್ಥೆಯ ಉಪನ್ಯಾಸಕ ವೃಂದದ ಉತ್ತಮ ಬೋಧನೆ, ಸಂಪೂರ್ಣ ತೊಡಗಿಸುವಿಕೆ ಮತ್ತು ಅತ್ಯುತ್ತಮ ಮಾರ್ಗದರ್ಶನದಿಂದ ಹಾಗೂ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಹೆತ್ತವರ ಹಾಗೂ ಹಿರಿಯರೆಲ್ಲರ ಆಶೀರ್ವಾದದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ಅಳಿಕೆಯಲ್ಲಿ ಕಲಿತ ವಿಷಯಗಳನ್ನು ಮಾತ್ರ ಓದಿದ್ದೇನೆ. ಯಾವುದೇ ವಿಶೇಷ ತರಬೇತಿಗಳನ್ನಾಗಲಿ ಟ್ಯೂಷನ್‌ ಆಗಲಿ ಪಡೆದಿಲ್ಲ. ರಾಜ್ಯದಲ್ಲಿ ಪ್ರಥಮ ಸ್ಥಾನ ಬಂದುದಕ್ಕೆ ಅತೀವ ಸಂತಸವಾಗಿದೆ ಎಂದು ಹೇಳಿದರು.

ಶ್ರೀಕೃಷ್ಣ ಶರ್ಮ ಅವರು ಬದಿಯಡ್ಕ ಸಮೀಪದ ಪೆರಡಾಲ ಗ್ರಾಮದ ಕಡಪ್ಪು ನಿವಾಸಿ, ಕೃಷಿಕ ಸುಬ್ರಹ್ಮಣ್ಯ ಭಟ್‌ ಮತ್ತು ಗೃಹಿಣಿ ಶಾರದಾ ದಂಪತಿಯ ಏಕಮಾತ್ರ ಪುತ್ರ. ಶ್ರೀಕೃಷ್ಣ ಶರ್ಮ ಅವರು ಮನೆಯಿಂದಲೇ ಪ್ರತಿದಿನ ಅಳಿಕೆ ಕಾಲೇಜಿಗೆ ತೆರಳಿ ವಾಪಸಾಗುತ್ತಿದ್ದರು. ಮನೆಯಿಂದ ಬಸ್‌ ನಿಲ್ದಾಣಕ್ಕೆ ಒಂದು ಕಿ.ಮೀ. ದೂರ. ಸರಿಯಾದ ಸಮಯಕ್ಕೆ ಬಸ್‌ ಬಂದರೆ 5.45ಕ್ಕೆ ಮನೆಗೆ ತಲುಪುತ್ತಿದ್ದರು. ಇಲ್ಲವಾದಲ್ಲಿ 7 ಗಂಟೆಯಾಗುತ್ತಿತ್ತು.

ತಂದೆ ಸುಬ್ರಹ್ಮಣ್ಯ ಭಟ್‌ ಮಾತನಾಡಿ, ಪುತ್ರ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿ ರುವುದು ಅತ್ಯಂತ ಸಂತಸವಾಗಿದೆ. ಅವನ ಭವಿಷ್ಯ ಉತ್ತಮವಾಗಿ ರೂಪು ಗೊಳ್ಳುವುದಕ್ಕೆ ಅವನೇ ಮಾರ್ಗ ಕಂಡು ಕೊಂಡಿದ್ದಾನೆ ಎಂದರು.

ಮುಂದಿನ ವರ್ಷ ನನ್ನ ಫೋಟೋ ಬರಲಿದೆ ಎಂದಿದ್ದ ಮಗ ತಾಯಿ ಶಾರದಾ ಮಾತನಾಡಿ, ಅವನುಎಸೆಸೆಲ್ಸಿಯಲ್ಲಿ ರ್‍ಯಾಂಕ್‌ ಪಡೆಯಬೇಕಿತ್ತು. ಬಂದಿರಲಿಲ್ಲ. ಪಿಯುಸಿಯಲ್ಲಾ ದರೂ ಗಳಿಸಲೇಬೇಕು ಎಂಬ ಛಲ ಆತನಲ್ಲಿತ್ತು. ಅದನ್ನೀಗ ಸಾಧಿಸಿ ತೋರಿಸಿದ್ದಾನೆ. ಕಳೆದ ವರ್ಷ ಅಳಿಕೆಯ ಸಾಧಕ ವಿದ್ಯಾರ್ಥಿ ಸಮರ್ಥ್ ಅವರ ಫೋಟೋವನ್ನು ಪತ್ರಿಕೆಯಲ್ಲಿ ತೋರಿಸಿ, ಮುಂದಿನ ವರ್ಷ ಇದೇ ರೀತಿ ನನ್ನ ಫೋಟೋ ನೋಡಬಹುದಮ್ಮ ಎಂದಿದ್ದ. ಹಾಗೇ ಆಯಿತು. ಅತೀವ ಆನಂದವಾಗಿದೆ ಎಂದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.