ಮಂಗಳೂರು ರಥಬೀದಿಯಲ್ಲಿ ಬಣ್ಣಗಳ ಓಕುಳಿ ಸಂಭ್ರಮ


Team Udayavani, Feb 3, 2020, 1:31 AM IST

0202MLR29

ಮಹಾನಗರ: ನಗರದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ “ಕೊಡಿಯಾಲ್‌ ತೇರು’ ಪ್ರಯುಕ್ತ ರವಿವಾರ ಶ್ರೀ ದೇವರ ಅವಭೃಥ (ಓಕುಳಿ) ಮಹೋತ್ಸವ ಸಮಾಜದ ಸಾವಿರಾರು ಆಬಾಲ ವೃದ್ಧ ಭಜಕರ ಹಾಗೂ ಕಾಶೀಮಠಾಧೀಶರಾದ ಶ್ರೀಮದ್‌ ಸಂಯಮಿಂದ್ರ ತೀರ್ಥ ಸ್ವಾಮೀಜಿ ಯವರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರಗಿತು.

ಪ್ರಾರಂಭದಲ್ಲಿ ಸರ್ವಾಭರಣ ಭೂಷಿತ ಶ್ರೀ ವೀರ ವೆಂಕಟೇಶ ಹಾಗೂ ಶ್ರೀನಿವಾಸ ದೇವರನ್ನು ಸ್ವರ್ಣ ಪಲ್ಲಕಿಯಲ್ಲಿ ವಸಂತ ಮಂಟಪಕ್ಕೆ ತರಲಾಯಿತು. ಬಳಿಕ ವಸಂತ ಮಂಟಪದಲ್ಲಿ ವಿಶೇಷ ಪೂಜೆ, ಅಷ್ಟಾವಧಾನ ಸೇವೆ, ಸೇರಿದ ಸಮಾಜ ಬಾಂಧವರಿಂದ ಮಡೆಸ್ನಾನ ಸೇವೆ ಅನಂತರ ಶ್ರೀಗಳವರಿಂದ ಪ್ರವಚನ ನಡೆಯಿತು.

ಶ್ರೀ ದೇವರ ಪೇಟೆ ಉತ್ಸವ ರಥಬೀದಿ, ನಂದಾದೀಪ, ಉಮಾ ಮಹೇಶ್ವರ ದೇವಸ್ಥಾನ ರಸ್ತೆ, ಕೆಳಗಿನ ರಥಬೀದಿ, ಡೊಂಗರಕೇರಿ, ಚಾಮರಗಲ್ಲಿ ಮೂಲಕ ವಿ.ಟಿ. ರಸ್ತೆಯಲ್ಲಿ ಸಾಗಿಬಂದು ಟ್ಯಾಂಕ್‌ ಕಾಲನಿಯಲ್ಲಿರುವ ಶ್ರೀ ಶ್ರೀನಿವಾಸ ನಿಗಮ ಪಾಠಶಾಲೆ ಯಲ್ಲಿರುವ ಪುಷ್ಕರಣಿಯಲ್ಲಿ ಶ್ರೀ ದೇವರ ಅವಭೃಥ ಸ್ನಾನ ನಡೆಯಿತು. ಶ್ರೀ ದೇಗುಲಕ್ಕೆ ಉತ್ಸವ ಮರಳಿದ ಬಳಿಕ ಧ್ವಜಾಅವರೋಹಣ ಬಳಿಕ ಮಹೋತ್ಸವ ಸಮಾಪನಗೊಂಡಿತು.

ರಥೋತ್ಸವ ಸಮಾಪನ
ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ದೇವರಾದ ಶ್ರೀ ವೀರ ವೆಂಕಟೇಶ ದೇವರ ಬ್ರಹ್ಮ ರಥೋತ್ಸವ ಪ್ರಯುಕ್ತ ಶನಿವಾರ ಶ್ರೀ ದೇವರಿಗೆ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶ ಶ್ರೀಮದ್‌ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಶತ ಕಲಶಾಭಿಷೇಕ, ಗಂಗಾಭಿಷೇಕ, ಪವಮಾನಾಭಿಷೇಕ, ಕನಕಾಭಿಷೇಕಗಳು ನೆರವೇರಿದವು.

ಬ್ರಹ್ಮ ರಥೋತ್ಸವ ಪ್ರಯುಕ್ತ ಪ್ರಾತಃ ಕಾಲದಲ್ಲಿ ವಿಶೇಷ ಮಹಾ ಪ್ರಾರ್ಥನೆ ನಡೆದು ಬಳಿಕ ಶ್ರೀ ದೇವಳದ ಅರ್ಚಕರಿಂದ ಶ್ರೀದೇವರಿಗೆ ಪಂಚಾಮೃತ ಅಭಿಷೇಕ ನಡೆಯಿತು. ಬಳಿಕ ಶ್ರೀದೇವರು ಯಜ್ಞಕ್ಕೆ ಚಿತ್ತೈಸಿ, ಯಜ್ಞ ಮಂಟಪದಲ್ಲಿ ಶ್ರೀಗಳವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಮಹಾಪೂರ್ಣ ಆಹುತಿ ನೆರವೇರಿತು.

ಸಂಜೆ ಕಾಶಿ ಮಠಾಧೀಶರ ಉಪಸ್ಥಿತಿ ಯಲ್ಲಿ ಬ್ರಹ್ಮರಥೋತ್ಸವ ಜರಗಿತು. ದೇಶ ವಿದೇಶಗಳಿಂದ ಭಜ ಕರು ಪಾಲ್ಗೊಂಡಿ ದ್ದರು. ಮೊಕ್ತೇಸರ ರಾದ ಸಿ.ಎಲ್‌. ಶೆಣೈ, ಪ್ರಶಾಂತ್‌ ರಾವ್‌, ರಾಮಚಂದ್ರ ಕಾಮತ್‌, ಶಾಸಕ ಡಿ. ವೇದ ವ್ಯಾಸ್‌ ಕಾಮತ್‌, ಹೈದರಾಬಾದ್‌ನ ಉದ್ಯಮಿ ಅನಂತ್‌ ಪೈ, ಮುಂಡ್ಕೂರು ರಾಮದಾಸ್‌ ಕಾಮತ್‌, ಮಾಜಿ ಮೊಕ್ತೇಸರ ಪದ್ಮನಾಭ ಪೈ ಉಪಸ್ಥಿತರಿದ್ದರು.

ಭಕ್ತರ ಭುಜ ಸೇವೆ
ಶ್ರೀ ದೇವರನ್ನು ಸ್ವರ್ಣ ಪಲ್ಲಕಿ ಯಲ್ಲಿರಿಸಿ ಐದು ಪೇಟೆ ಉತ್ಸವ ಭಾವುಕ ಭಗವತ್‌ ಭಕ್ತರ ಭುಜ ಸೇವೆಯೊಂದಿಗೆ ಜರಗಿತು. ಸಮಾಜದ ಪುರುಷರು ಮತ್ತು ಮಕ್ಕಳು ಅವಭೃಥ ಮಹೋ ತ್ಸವದಲ್ಲಿ ಗುಲಾಬಿ, ಅರಸಿನ ಬಣ್ಣದ ನೀರಿನೊಂದಿನಿಗೆ ಆಟವಾಡುತ್ತಿರುವ ದೃಶ್ಯ ರಥಬೀದಿಯಲ್ಲಿ ಕಂಡು ಬಂತು.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.