ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ: ಮೃಗಬೇಟೆ ಉತ್ಸವ
Team Udayavani, Feb 1, 2020, 10:20 PM IST
ಮಹಾನಗರ: ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ವೀರ ವೆಂಕಟೇಶ ದೇವರ ರಥೋತ್ಸವದ ಅಂಗವಾಗಿ ಶುಕ್ರವಾರ ಮೃಗಬೇಟೆ ಉತ್ಸವವು ಕಾಶಿಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮಿಜಿಯ ಅವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ಜರಗಿತು.
ಶ್ರೀನಿವಾಸ ದೇವರ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಪುಷ್ಪಾಲಂಕೃತ ಬೆಳ್ಳಿ ಲಾಲ್ಕಿಯಲ್ಲಿರಿಸಿ ಡೊಂಗರಕೇರಿಯ ಕಟ್ಟೆಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಶ್ರೀ ದೇಗುಲದ ತಂತ್ರಿಗಳಾದ ಶ್ರೀ ಕಾಶೀನಾಥ ಆಚಾರ್ಯರವರು ಸಾಂಕೇತಿಕವಾಗಿ ಬಿಲ್ಲಿನಿಂದ ಬಾಣವನ್ನು ಬಿಡುವುದರ ಮೂಲಕ ಮೃಗಬೇಟೆಗೆ ಚಾಲನೆ ನೀಡಲಾಯಿತು.
ಅನಂತರ ಮೃಗವಾಗಿ ಬೇಟೆಯಾದ ಇಬ್ಬರು ಸ್ವಯಂ ಸೇವಕರಿಗೆ ಹಾಗೂ ಸೇವಾದಾರರಿಗೆ ಶ್ರೀಗಳು ಪ್ರಸಾದ ವಿತರಿಸಿದರು. ಶ್ರೀ ದೇವರ ಉತ್ಸವವು ಡೊಂಗರಕೇರಿ, ನ್ಯೂ ಚಿತ್ರಾ ಟಾಕೀಸ್, ಚಾಮರಗಲ್ಲಿ ಹಾಗೂ ರಥಬೀದಿಯಾಗಿ ಸಾಗಿದ ಬಳಿಕ ಸಣ್ಣ ರಥೋತ್ಸವ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ