ಶ್ರೀಮತಿ ಶೆಟ್ಟಿ ಕೊಲೆ ಆರೋಪಿಗಳ ಬಂಧನ


Team Udayavani, May 16, 2019, 3:05 AM IST

srimati

ಮಂಗಳೂರು: ನಗರದ ಮಂಗಳಾದೇವಿ ಬಳಿಯ ಅಮರ್‌ ಆಳ್ವ ರಸ್ತೆಯ ನಿವಾಸಿ ಶ್ರೀಮತಿ ಶೆಟ್ಟಿ (35) ಅವರನ್ನು ಕೊಲೆ ಮಾಡಿ, ಮೃತ ದೇಹವನ್ನು ತುಂಡರಿಸಿ, ಮೂರು ಕಡೆ ಎಸೆದಿದ್ದ ಪೈಶಾಚಿಕ ಕೃತ್ಯವನ್ನು ಮಂಗಳೂರು ಪೊಲೀಸರು ಭೇದಿಸಿದ್ದು, ಆರೋಪಿ ದಂಪತಿಯನ್ನು ಬಂಧಿಸಿದ್ದಾರೆ.

ಮೂಲತಃ ಅತ್ತಾವರ ಬಿ.ವಿ.ರಸ್ತೆಯ ಸೆಮಿನರಿ ಕಾಂಪೌಂಡ್‌ ನಿವಾಸಿಗಳಾಗಿದ್ದು, ಪ್ರಸ್ತುತ ವೆಲೆನ್ಸಿಯಾ ಸೂಟರ್‌ ಪೇಟೆಯ 9ನೇ ಅಡ್ಡರಸ್ತೆಯ ಬಾಡಿಗೆ ಮನೆಯಲ್ಲಿ ನೆಲೆಸಿರುವ ಜೋನಸ್‌ ಜೂಲಿನ್‌ ಸ್ಯಾಮ್ಸನ್‌ (36) ಮತ್ತು ಪತ್ನಿ ವಿಕ್ಟೋರಿಯಾ ಮಥಾಯಿಸ್‌ (46) ಬಂಧಿತರು.

ಕೊಲೆಗೆ ಕಾರಣವೇನು?: ನಂದಿಗುಡ್ಡೆಯಲ್ಲಿ ಫಾಸ್ಟ್‌ಫುಡ್‌ ವ್ಯಾಪಾರ ನಡೆಸುತ್ತಿದ್ದು, ಅದರಲ್ಲಿ ನಷ್ಟ ಅನುಭವಿಸಿದ್ದ ಸ್ಯಾಮ್ಸನ್‌, ಶ್ರೀಮತಿಯಿಂದ ಒಂದು ಲಕ್ಷ ರೂ.ಸಾಲ ಪಡೆದಿದ್ದು, 40 ಸಾವಿರ ರೂ.ಗಳನ್ನು ಮರಳಿಸಿದ್ದ. ಬಾಕಿ 60,000 ರೂ.ಗಳನ್ನು ಕೊಡುವಂತೆ ಕೇಳಲೆಂದು ಮೇ 11ರಂದು ಬೆಳಗ್ಗೆ ಶ್ರೀಮತಿ ಅವರು ಸ್ಯಾಮ್ಸನ್‌ ಮನೆಗೆ ಹೋಗಿದ್ದರು.

ಈ ಸಂದರ್ಭ ವಾಗ್ವಾದ ನಡೆದು, ಸ್ಯಾಮ್ಸನ್‌ ಮರದ ತುಂಡಿನಿಂದ ಶ್ರೀಮತಿಯ ತಲೆಗೆ ಹೊಡೆದ. ಆಕೆ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಇದರಿಂದ ಆತಂಕಗೊಂಡ ಸ್ಯಾಮ್ಸನ್‌ ದಂಪತಿ, ಶವವನ್ನು ದಿನಪೂರ್ತಿ ತಮ್ಮ ಮನೆಯೊಳಗೇ ಇರಿಸಿಕೊಂಡಿದ್ದರು.

ರಾತ್ರಿಯಾಗುತ್ತಿದ್ದಂತೆ ಮಾರಕಾಯುಧದಿಂದ ದೇಹ ಕತ್ತರಿಸಿ, ತನ್ನದೇ ದ್ವಿಚಕ್ರ ವಾಹನದಲ್ಲಿ ಕದ್ರಿ ಹಾಗೂ ನಂದಿಗುಡ್ಡ ಪರಿಸರದಲ್ಲಿ ಮೂರು ಕಡೆ ಸ್ಯಾಮ್ಸನ್‌ ಎಸೆದಿದ್ದ. ಬಳಿಕ, ತನ್ನ ಮನೆ ಮುಂದೆ ನಿಲ್ಲಿಸಿದ್ದ ಶ್ರೀಮತಿಯ ದ್ವಿಚಕ್ರ ವಾಹನವನ್ನು ನಾಗುರಿಯಲ್ಲಿ ಗ್ಯಾರೇಜ್‌ ಮುಂದೆ ಬಿಟ್ಟು ಬಂದಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

ಮೇ 11ರಂದೇ ಕೊಲೆ ನಡೆದಿದ್ದರೂ, ಮೇ 14ರ ರಾತ್ರಿವರೆಗೂ ಪೊಲೀಸರಿಗೆ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ. ಈ ಮಧ್ಯೆ, ಅತ್ತಾವರ ಸಮೀಪ ಎಲೆಕ್ಟ್ರಿಕಲ್‌ ಉತ್ಪನ್ನಗಳ ದುರಸ್ತಿ ಅಂಗಡಿ ನಡೆಸುತ್ತಿದ್ದ ಶ್ರೀಮತಿ ಶೆಟ್ಟಿಯವರು ಮೇ 11ರಂದು ಬೆಳಗ್ಗೆ 9ರ ವೇಳೆಗೆ ಅಂಗಡಿಗೆ ತೆರಳದೆ ತನ್ನ ಸ್ಕೂಟರ್‌ನಲ್ಲಿ ಸಾಲದ ಹಣ ಕೇಳುವುದಕ್ಕಾಗಿ ಸ್ಯಾಮ್ಸನ್‌ ಮನೆಗೆ ಹೋಗಿದ್ದರು.

ಇದು ಸಿಸಿಟಿವಿ ಫ‌ೂಟೇಜ್‌ ಮೂಲಕ ಪೊಲೀಸರಿಗೆ ತಿಳಿದು ಬಂತು. ಇದೇ ವೇಳೆ, ಶ್ರೀಮತಿ ಶೆಟ್ಟಿ ಅವರ ಅಂಗಡಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಸ್ಯಾಮ್ಸನ್‌ಗೆ ಸಾಲ ನೀಡಿದ್ದ ವಿಚಾರ, ಈ ಬಗ್ಗೆ ಆಗಾಗ್ಗೆ ನಡೆಯುತ್ತಿದ್ದ ಜಗಳದ ವಿಷಯ ತಿಳಿದು ಬಂತು. ಇವುಗಳ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದರು.

ಮಂಗಳವಾರ ರಾತ್ರಿ ಸ್ಯಾಮ್ಸನ್‌ನ ಮನೆ ಪತ್ತೆ ಮಾಡಿ ಹೋದ ಪೊಲೀಸರು ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆರೆಯಲಿಲ್ಲ. ಪೊಲೀಸರು ಛಾವಣಿಯ ಹೆಂಚು ತೆಗೆದು, ಒಳನುಗ್ಗಿ ಆತನನ್ನು ಸೆರೆ ಹಿಡಿಯಬೇಕಾಯಿತು. ಪೊಲೀಸರ ಸುಳಿವರಿತ ಸ್ಯಾಮ್ಸನ್‌, ತಲೆಗೆ ಕತ್ತಿಯಿಂದ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿದರೂ, ಪೊಲೀಸರು ಲೆಕ್ಕಿಸದೆ ಆತನನ್ನು ಸೆರೆ ಹಿಡಿದರು.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.